ಬೆಂಗಳೂರು | ಜುಲೈ ವೇಳೆಗೆ ನಾಗಸಂದ್ರದಿಂದ ಮಾದಾವರದವರೆಗೆ ಮೆಟ್ರೋ ಸಂಚಾರ ಸಾಧ್ಯತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದೆ.

ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

₹298 ಕೋಟಿ ವೆಚ್ಚದ ಮೆಟ್ರೋ ಮಾರ್ಗವು ನಾಗಸಂದ್ರದ ಆಚೆಗೆ ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರ ನಿಲ್ದಾಣಗಳನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗಸಂದ್ರದಿಂದ ಮಾದಾವರವರೆಗಿನ (ಬಿಐಇಸಿ) ರೀಚ್–3 ಕಾಮಗಾರಿಗೆ 2017ರ ಮೇ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಭೂಸ್ವಾಧೀನ ಮತ್ತು ಕಾಮಗಾರಿಗೆ ₹964 ಕೋಟಿ ಮೀಸಲಿಡಲಾಗಿತ್ತು. ಭೂಸ್ವಾಧೀನ ಪ್ರಕ್ರಿಯೆ ಕಗ್ಗಂಟಾಗಿ ಪರಿಣಮಿಸಿತ್ತು. ಹೈಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥವಾಗಲು ಸುಮಾರು ನಾಲ್ಕು ವರ್ಷಗಳು ಬೇಕಾದವು. ಆನಂತರ ಕಾಮಗಾರಿ ಚುರುಕುಗೊಂಡಿತು. ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್) ಮೆಟ್ರೊ ನಿಲ್ದಾಣಗಳ ಕಾಮಗಾರಿ ಮುಕ್ತಾಯಗೊಂಡಿವೆ.

ತುಮಕೂರು ರಸ್ತೆಯಲ್ಲಿ ವಿಪರೀತ ವಾಹನ ದಟ್ಟಣೆ ಉಂಟಾಗಿದೆ. ನೆಲಮಂಗಲ ಕಡೆಯಿಂದ ಪೀಣ್ಯ ಕೈಗಾರಿಕಾ ವಲಯ ಸಹಿತ ಬೆಂಗಳೂರಿನ ನಾನಾ ಕಡೆಗೆ ಬರುವ ಕಾರ್ಮಿಕರು, ಉದ್ಯೋಗಿಗಳು ನಾಗಸಂದ್ರದವರೆಗೆ ಬಂದು ಮೆಟ್ರೊ ರೈಲು ಹತ್ತುತ್ತಿದ್ದಾರೆ. ಮಾದಾವರವರೆಗೆ ಮೆಟ್ರೊ ಪ್ರಾರಂಭವಾದರೆ, 3 ಕಿ.ಮೀ. ಮೊದಲೇ ಮೆಟ್ರೊ ಸೇವೆ ಅವರಿಗೆ ಲಭ್ಯವಾಗಲಿದೆ. ವಾಹನ ದಟ್ಟಣೆ ಕಡಿಮೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ.16ರಿಂದ 19ರ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್

“ಈಗಾಗಲೇ, ಮೆಟ್ರೋ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸದ್ಯಕ್ಕೀಗ ಪ್ರಕ್ರಿಯೆಯಲ್ಲಿ ಪೂರ್ಣಗೊಳಿಸುವ ಕೆಲಸ ಮಾತ್ರ ಬಾಕಿಯಿವೆ. ಇನ್ನು ಟ್ರ್ಯಾಕ್ ಹಾಕುವ ಕಾಮಗಾರಿ ಪೂರ್ಣಗೊಳ್ಳಲು 2.5 ತಿಂಗಳು ಬೇಕಾಗಲಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ ರೈಲುಗಳ ಪ್ರಾಯೋಗಿಕ ಓಡಾಟ ನಡೆಯಲಿದ್ದು, ಜುಲೈ ವೇಳೆಗೆ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ” ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...