ಬೆಂಗಳೂರು | ರಸ್ತೆಯಲ್ಲಿ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದ ಕಿಡಿಗೇಡಿಗಳು

Date:

  • ಆರೋಪಿಗಳ ವಿರುದ್ಧ ವರ್ತೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು
  • ಕಾರ್‌ ಮುಂದೆ ಬೈಕ್‌ ಅಡ್ಡಗಟ್ಟಿ ಕಾರಿನ ಕಿಟಿಕಿ ಒಡೆದು ಹಾಕಿದ ಕಿಡಿಗೇಡಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊಲೆ, ಹಲ್ಲೆ ಸೇರಿದಂತೆ ಇನ್ನಿತರ ಘಟನೆಗಳು ವರದಿಯಾಗುತ್ತಿವೆ. ರಸ್ತೆಗಳಲ್ಲಿ ವ್ಹೀಲಿಂಗ್‌ ಹುಚ್ಚಾಟದಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿ ಮಾಡುತ್ತಿದ್ದವರ ಜತೆಗೆ ಇದೀಗ ರಸ್ತೆಯಲ್ಲಿ ಕಾರು ಚಾಲಕ ಹಾರ್ನ್‌ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದು ಹಾಕಿರುವ ಘಟನೆ ನಡೆದಿದೆ.

ಜುಲೈ 14ರಂದು ವರ್ತೂರು ಬಳಿ ಈ ಘಟನೆ ನಡೆದಿದೆ. ಮೂರರಿಂದ ನಾಲ್ಕು ಜನ ಬೈಕ್ ಸವಾರರು ಕಾರಿನ ಮುಂದೆ ಸಂಚಾರ ಮಾಡುವಾಗ ಕಾರು ಚಾಲಕ ದಾರಿ ಕೇಳಿದ್ದಾನೆ. ಇದಕ್ಕೆ ಕೋಪಗೊಂಡ ನಾಲ್ವರು ಬೈಕ್ ಸವಾರರು ಕಾರು ಚಲಿಸುವ ವೇಳೆ ಅಡ್ಡಾದಿಡ್ಡಿ ಬೈಕ್ ಚಲಾವಣೆ ಮಾಡಿದ್ದಾರೆ.

ಇದೇ ಸಮಯದಲ್ಲಿ ಕಾರಿನ ಗಾಜು ಒಡೆದು ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಕಾರಿಗೆ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾರೆ. ಮುಂದುವರೆದು ಕಾರ್‌ ಫಾಲೋ ಮಾಡಿಕೊಂಡು ಹೋದ ಬೈಕ್‌ ಸವಾರರು ಗುಂಜೂರು ಗೇಟ್‌ನ ಅಪಾರ್ಟ್‌ಮೆಂಟ್‌ ಬಳಿ ಕಾರು ಚಾಲಕನೊಂದಿಗೆ ಗಲಾಟೆ ಮಾಡಿದ್ದಾರೆ. ಕಾರ್‌ ಮುಂದೆ ಬೈಕ್‌ ಅಡ್ಡಗಟ್ಟಿ ಕಾರಿನ ಕಿಟಿಕಿ ಒಡೆದು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾ ಕದ್ದ ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್

ಈ ಸಂಪೂರ್ಣ ಘಟನೆ ಕಾರಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂತ್ರಸ್ತರು ಈ ಬಗ್ಗೆ ಟ್ವೀಟ್‌ ಮೂಲಕ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ ಡಿಸಿಪಿ ಎಸ್‌ ಗಿರೀಶ್ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ದೂರುದಾರರನ್ನು ಸಂಪರ್ಕಿಸಿದ್ದೇವೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಶೀಘ್ರ ಬಂಧಿಸಲಾಗುವುದು” ಎಂದು ಭರವಸೆ ನೀಡಿದ್ದರು.

“ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ವರ್ತೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ನಮ್ಮ ಕಣ್ಗಾವಲಿನಲ್ಲಿ ಇಂತಹ ಅಶಿಸ್ತಿನ ನಡವಳಿಕೆ ಅಥವಾ ಗೂಂಡಾಗಿರಿಗೆ ಅವಕಾಶವಿರುವುದಿಲ್ಲ ಮತ್ತು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗುರುವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ. ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ” ಎಂದು ಬೆಂಗಳೂರು ನಗರ ಪೊಲೀಸ್‌ ಟ್ವೀಟ್‌ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...