ಬೆಂಗಳೂರು | ಒಂದು ದೇಶ – ಒಂದು ಧರ್ಮ ಎನ್ನುವ ಮೋದಿಗೆ ಬಹುತ್ವದ ಅರಿವಿಲ್ಲ: ಅವತಾರ್ ಸಿಂಗ್

Date:

ಸರ್ಕಾರಗಳ ರೈತ, ಕಾರ್ಮಿಕ, ದಲಿತ, ಆದಿವಾಸಿ, ಅರಣ್ಯ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಿಂದ ಮೂರು ದಿನಗಳ ಮಹಾಧರಣಿ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ಮುಂದಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಾಧರಣಿ ನಡೆಯಲಿದೆ. ಧರಣಿಗೆ 50,000ಕ್ಕೂ ಹೆಚ್ಚು ರೈತರು-ಕಾರ್ಮಿಕರು, ಜನಸಾಮಾನ್ಯರನ್ನು ಕರೆತರಲು ರಾಜ್ಯಾದ್ಯಂತ ಪ್ರಚಾರ ನಡೆಯಲಿದೆ ಎಂದು ಒಕ್ಕೂಟದ ಮುಖಂಡರು ತಿಳಿಸಿದ್ದಾರೆ.

ಬೆಂಗಳೂರಿನ ಸ್ಕೌಟ್‌ ಅಂಡ್ ಗೈಡ್ಸ್‌ನ ಸಭಾಂಗಣದಲ್ಲಿ ನಡೆದ ‘ಸಂಯುಕ್ತ ಹೋರಾಟ ಕರ್ನಾಟಕ’ದ ರಾಜ್ಯ ಸಮಾವೇಶದಲ್ಲಿ ಮಹಾಧರಣಿ ನಡೆಸುವ ಬಗ್ಗೆ ಒಕ್ಕೂಟದ ಮುಖಂಡರು ಘೋಷಿಸಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಪಂಜಾಬ್‌ನ ಬಿಕೆಯು ಪ್ರಧಾನ ಕಾರ್ಯದರ್ಶಿ ಅವತಾರ್ ಸಿಂಗ್, “ಮೋದಿ ಹೇಳ್ತಾರೆ ‘ಒಂದು ದೇಶ,‌‌ ಒಂದು ಧರ್ಮ, ಒಂದು ಭಾಷೆ’ ಅಂತ. ಆದರೆ, ದೇಶದಲ್ಲಿ ಹಲವು ಧರ್ಮಗಳ, ನೂರಾರು ಭಾಷೆಗಳನ್ನ ಆಡುವ ಜನ ಇದ್ದಾರೆ ಅನ್ನೋದನ್ನೇ ಅವರು ಮರೆತಿದ್ದಾರೆ. ಅಲ್ಲದೆ, ಧರ್ಮ- ಜಾತಿಯ ಹೆಸರಿನಲ್ಲಿ ಜನರ ನಡುವೆ‌ ಒಡೆದು ಆಳುವ ನೀತಿಯನ್ನ ದೇಶದಲ್ಲಿ ಬಿಜೆಪಿ ಮುಂದುವರೆಸಿದೆ. ಅದರ ವಿರುದ್ಧ ನಾವು ವಿಭಿನ್ನತೆಯಲ್ಲಿ ಏಕತೆಯನ್ನು ಗುರುತಿಸಿ ಒಗ್ಗಟ್ಟಾಗುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಮೋದಿಯ ದುರಾಡಳಿತದ ವಿರುದ್ಧ ಮಹಾಧರಣಿ ಸತ್ಯಾಗ್ರಹ ನಡೆಯಲಿದೆ. ಅದನ್ನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವ ಮೂಲಕ ಕಾರ್ಪೊರೇಟ್ ಕಂಪನಿಗಳ ಕಪಿಮುಷ್ಠಿಯಿಂದ ರೈತರ ಭೂಮಿಯನ್ನು, ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕಿದೆ. ಫ್ಯಾಸಿಸ್ಟ್ ಸಂಸ್ಕೃತಿಯ ಆರ್‌ಎಸ್‌ಎಸ್ ಬೆಂಬಲಿತ ಬಿಜೆಪಿ, ಮೋದಿಯ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನಿಂದ ಕೆಲಸ ಮಾಡೋಣ” ಎಂದು ಅವರು ಕರೆ ನೀಡಿದರು.

ದಲಿತ ನಾಯಕ ಮಾವಳ್ಳಿ ಶಂಕರ್ ಮಾತನಾಡಿ, “ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಭಾವನಾತ್ಮಕವಾಗಿ, ಬಣ್ಣದ ಮಾತುಗಳಿಂದ ಜನರನ್ನ ಮರುಳು ಮಾಡಿ ವಾಸ್ತವವನ್ನು ಮರೆಮಾಚುತ್ತಿದ್ದಾರೆ. ಮೋದಿಗೆ ಈ ದೇಶ ಹಾಗೂ ಜನರ ಬಗ್ಗೆ ಗೌರವ ಇದ್ದಿದ್ರೆ ಪಾರ್ಲಿಮೆಂಟಲ್ಲಿ ಸೆಂಗೋಲ್ ಬದಲು ನೇಗಿಲು ಇರುತ್ತಿತ್ತು‌. ಆದರೆ, ಸೆಂಗೋಲ್ ಹಿಡಿದುಕೊಂಡು ಧರ್ಮದ ರಾಜಕೀಯ ಮಾಡ್ಕೊಂಡು ಸ್ವಾಮೀಜಿಗಳನ್ನು ವೈಭವಿಕರಿಸುವುದು ಪ್ರಜಾಪ್ರಭುತ್ವದ ನಡೆಯಲ್ಲ” ಎಂದು ಕಿಡಿಕಾರಿದರು.

ಎಐಕೆಎಸ್‌ ಅಧ್ಯಕ್ಷ ಆರ್ ವೆಂಕಯ್ಯ ಮಾತನಾಡಿ, “ದೆಹಲಿ ರೈತ ಹೋರಾಟದ ಹುತಾತ್ಮ ನಾಯಕರಿಗೆ ಇದುವರೆಗೂ ಪರಿಹಾರ‌ ನೀಡಿಲ್ಲ, ಲಖ್ಖೀಂಪುರ ಕೇರಿ ಪ್ರಕರಣದ ಆರೋಪಿಯ ತಂದೆ ಸಚಿವರಾಗಿದ್ದು ಆತನನ್ನ ಸಂಸತ್ತಿನಿಂದ ಆಚೆ ಹಾಕಲು ಮೋದಿಗೆ ಸಾಧ್ಯ ಆಗಿಲ್ಲ. ಇದು ಕೇಂದ್ರ ಬಿಜೆಪಿ ಸರ್ಕಾರ ಯಾರ ಪರ ಅನ್ನೋದನ್ನ ಸಾಬೀತುಪಡಿಸಿದೆ” ಎಂದರು.

“ರೈತ ವಿರೋಧಿ ಕಾನೂನು ತಂದು ಕೃಷಿ ಕ್ಷೇತ್ರವನ್ನ ನಾಶಮಾಡಲು ನಿಂತಿದ್ದ ಮೋದಿ‌ ಈಗ ವಿದ್ಯುತ್ ಖಾಸಗೀಕರಣ ಮಾಡಿ ತಿದ್ದುಪಡಿ ಮಸೂದೆ ತರಲು ನಿಂತಿದೆ‌. ಅದನ್ನ ಬಿಜೆಪಿ ಹೊರತಾದ ಸರ್ಕಾರವಿರುವ ರಾಜ್ಯಗಳೆಲ್ಲ ವಿರೋಧಿಸಿವೆ. ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಮೂರು ಕೃಷಿ ಕಾಯ್ದೆ ವಾಪಸ್ ತೆಗೆದುಕೊಳ್ಳಲು ಮಾಡಿದಂತಹ ಹೋರಾಟವನ್ನು ಮುಂದುವರೆಸಬೇಕು. ರೈತ ವಿರೋಧಿ-ಜನ ವಿರೋಧಿ ನೀತಿಗಳನ್ನು ತರುವ ಸರ್ಕಾರಗಳನ್ನು ಹೀನಾಯವಾಗಿ ಸೋಲಿಸಬೇಕು” ಎಂದು ಕರೆ ಕೊಟ್ಟರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...