ಬೆಂಗಳೂರು | ನವೆಂಬರ್‌ನಲ್ಲಿ ₹10,86 ಕೋಟಿ ಮೌಲ್ಯದ ಮಾದಕ ವಸ್ತು ವಶ : ಬಿ. ದಯಾನಂದ್

Date:

ಬೆಂಗಳೂರು ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) 8 ಕಾನೂನು ಮತ್ತು ಸುವ್ಯವಸ್ಥೆ ಶಾಖೆಗಳ ಅಧಿಕಾರಿಗಳು ನವೆಂಬರ್‌ನಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ 39 ಭಾರತೀಯ ಪ್ರಜೆಗಳು ಮತ್ತು 8 ವಿದೇಶಿಯರನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಮಾದಕ ವ್ಯಸನಿಗಳ ವಿರುದ್ಧ ಒಟ್ಟು 32 ಪ್ರಕರಣಗಳನ್ನು ದಾಖಲಿಸಿ, ಅಂದಾಜು ₹ 10,86,59,600 ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆಯಾಗಿ, 78.928 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 59.985 ಕೆಜಿ ಗಾಂಜಾ, 17.918 ಕೆಜಿ ಎಂಡಿಎಂಎ, 1.01 ಗ್ರಾಂ ಹ್ಯಾಶಿಶ್ ಆಯಿಲ್, 0.015 ಗ್ರಾಂ ಆಂಫೆಟಮೈನ್ ಮತ್ತು ಮೆಟಾಕೋಲಿನ್, 150 ಮಾತ್ರೆಗಳು ಹಾಗೂ ನಾನಾ ತರಹದ ಟ್ಯಾಬ್ಲೆಟ್‌ಗಳು ಸೇರಿವೆ” ಎಂದು ಹೇಳಿದ್ದಾರೆ.

ಅಪರಾಧ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಡಾಬಾ, ಪಬ್, ಬೇಕರಿ, ಲಾಡ್ಜ್​ಗಳ ಬಳಿ ಅಪರಾಧ ಚಟುವಟಿಕೆಗಳು, ಗಲಾಟೆ, ಸುಲಿಗೆ ಹೆಚ್ಚುತ್ತಿರುವುದರ ಹಿನ್ನೆಲೆ ಇದನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಬೆಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

“577 ವೈನ್ ಶಾಪ್ಸ್​, 969 ಬಾರ್ ಆ್ಯಂಡ್ ರೆಸ್ಟೋರೆಂಟ್, 704 ಲಾಡ್ಜ್​ಗಳು, 1,682 ಬೇಕರಿ, ಪಾನ್ ಶಾಪ್​ಗಳ, 715 ಇತರೆ ಜನನಿಬಿಡ ಸ್ಥಳಗಳ ಬಳಿ ಸುಮಾರು 5 ಸಾವಿರಕ್ಕೂ ಅಧಿಕ ಜನರನ್ನು ಹಾಗೂ 4 ಸಾವಿರಕ್ಕೂ ಅಧಿಕ ವಾಹನಗಳನ್ನು ತಪಾಸಣೆ ನಡೆಸಲಾಗಿದೆ” ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

“ಡಿಸೆಂಬರ್ 3 ರಂದು ರಾತ್ರಿ ಬೆಂಗಳೂರಿನ ನಾನಾ ಕಡೆ ಏಕಕಾಲದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ, 247 ರೌಡಿ ಶೀಟರ್‌ಗಳನ್ನು ತನಿಖೆಗೆ ಒಳಪಡಿಸಿದ್ದು, ಐಪಿಸಿ ಕಾಯ್ದೆಗಳಡಿ 5, ಕರ್ನಾಟಕ ಪೊಲೀಸ್ ಕಾಯ್ದೆಯಡಿ 1007 ಹಾಗೂ ಸಿಗರೇಟು ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆಯಡಿ 2,425 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಒಬ್ಬನ ಬಳಿ ಮಾರಕಾಸ್ತ್ರವಿರುವುದು ಬೆಳಕಿಗೆ ಬಂದಿದ್ದು, ಆತನ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದಾರೆ.

“ಮತ್ತೊಂದು ತನಿಖೆಯಲ್ಲಿ, ಸಾರ್ವಜನಿಕ ತೊಂದರೆ ಉಂಟುಮಾಡುವವರ ವಿರುದ್ಧ ನಾಲ್ಕು ಪ್ರಕರಣ ದಾಖಲಿಸಲಾಗಿದೆ. ಸಿಒಟಿಪಿಎ ಕಾಯ್ದೆಯನ್ನು ಉಲ್ಲಂಘಿಸಿದ ಅಂಗಡಿಗಳು/ವ್ಯಕ್ತಿಗಳ ವಿರುದ್ಧ 31 ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್‌ನಲ್ಲಿ ಮೂರು ದಿನಗಳ ಹಿಂದೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೂ ತನಿಖೆಯಿಂದ ಬೆಳಕಿಗೆ ಬಂದಿದ್ದು, ಅಸ್ವಾಭಾವಿಕ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

“ನಗರದ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಿದ ಬಸವೇಶ್ವರ ಠಾಣೆ ಪೊಲೀಸರು ಜೂಜಾಡುತ್ತಿದ್ದ ಆರು ಮಂದಿಯನ್ನು ಬಂಧಿಸಿ ₹56,400 ನಗದು ಹಾಗೂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ತಪಾಸಣೆ ನಡೆಸಿದಾಗ, ಐದು ಹಳೆಯ ಗುಂಪುಗಳು ಪತ್ತೆಯಾಗಿವೆ. ಅವರ ವಿರುದ್ಧ ಕೆಪಿ ಕಾಯ್ದೆಯ ಸೆಕ್ಷನ್ 96 (ಬಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಾಲೆಗಳಿಗೆ ಬಾಂಬ್ ಬೆದರಿಕೆ | ಮಾಹಿತಿ ಕೋರಿ ಇಂಟರ್‍‌ಪೋಲ್‌ಗೆ ಪತ್ರ: ಪೊಲೀಸ್‌ ಆಯುಕ್ತ ಬಿ. ದಯಾನಂದ

“ನವೆಂಬರ್ 2023 ರಲ್ಲಿ ಒಟ್ಟು 933 ಪ್ರಕರಣಗಳಲ್ಲಿ 20 ಜೀವಾವಧಿ ಶಿಕ್ಷೆ ಪ್ರಕರಣಗಳು ಮತ್ತು 913 ಇತರ ದಂಡ ವಿಧಿಸಿದ ಪ್ರಕರಣಗಳು ಸೇರಿವೆ. ಜೀವಾವಧಿ ಶಿಕ್ಷೆಯು ನಾನಾ ಅಪರಾಧಗಳನ್ನು ಒಳಗೊಂಡಿದೆ, ಅವುಗಳೆಂದರೆ 6 ಪೋಕ್ಸೊ ಪ್ರಕರಣಗಳು, 3 ಕೊಲೆ ಪ್ರಕರಣಗಳು, 304(ಬಿ) ಕಲಂ ಅಡಿಯಲ್ಲಿ ವರದಕ್ಷಿಣೆ ಸಾವಿನ ಪ್ರಕರಣ, 2 ಎನ್‌ಡಿಪಿಎಸ್ ಪ್ರಕರಣಗಳು, ಶಸ್ತ್ರಾಸ್ತ್ರ ಕಾಯ್ದೆಯಡಿ 1 ಪ್ರಕರಣ, ವಿದೇಶಿ ಕಾಯ್ದೆಯಡಿ 1 ಪ್ರಕರಣ, 1 ದರೋಡೆ ಪ್ರಕರಣ ಮತ್ತು 5 ಇತರ ಪ್ರಕರಣಗಳಿವೆ” ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...