ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

Date:

  • ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು
  • ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು

ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿತ್ತು. ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾಮ್ ಸಮಂತ್ ರೈ, ಬಸುದೇವ್ ಸಮಂತ್ ರೈ ಹಾಗೂ ಅಭಿಷೇಕ್ ಸಿಂಗ್ ಹಲ್ಲೆ ಮಾಡಿದ ಆರೋಪಿಗಳು. ಇವರು 26 ರಿಂದ 30 ವರ್ಷ ವಯಸ್ಸಿನವರು. ಅದೇ ಬಡಾವಣೆಯಲ್ಲಿ ವಾಸಿಸುತ್ತಿದ್ದಾರೆ.

ವಿಜ್ಞಾನ ನಗರದಲ್ಲಿ ಏಪ್ರಿಲ್ 2ರಂದು ಬೆಳಗಿನ ಜಾವ 4.30ರ ಸುಮಾರಿಗೆ ನೆರೆಯ ಮನೆಯವರು ರಾತ್ರಿ ವೇಳೆ ಹೆಚ್ಚು ಶಬ್ಧದೊಂದಿಗೆ ಹಾಡು ಹಾಕಿದ್ದರು. ‘ತಮ್ಮ ಮನೆಯಲ್ಲಿ ವಯಸ್ಸಾದ ತಾಯಿ ಇದ್ದಾರೆ. ಅವರಿಗೆ ತೊಂದರೆಯಾಗುತ್ತದೆ. ಶಬ್ದವನ್ನು ಕಡಿಮೆ ಮಾಡಿ’ ಎಂದು ಲಾಯ್ಡ್ ಮನವಿ ಮಾಡಿದ್ದರು. ಆದರೆ, ಆರೋಪಿಗಳು ಲಾಯ್ಡ್ ಅವರಿಗೆ ಬೈದು ಕಳುಹಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚು ಶಬ್ದದಿಂದ ಕಿರಿಕಿರಿಗೊಂಡಿದ್ದ ಲಾಯ್ಡ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಇದರಿಂದ ಕೋಪಗೊಂಡ ಮೂವರು ಆರೋಪಿಗಳು ಏ. 2ರಂದು ಲಾಯ್ಡ್ ಅವರನ್ನು ಥಳಿಸಿದ್ದಾರೆ. ಈ ವೇಳೆ, ಲಾಯ್ಡ್ ಅವರನ್ನು ರಕ್ಷಿಸಲು ಹೋದ ಲಾಯ್ಡ್ ಕುಟುಂಬಸ್ಥರು ಮತ್ತು ನೆರೆಹೊರೆಯವರ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಘಟನೆಯನ್ನು ಲಾಯ್ಡ್ ಮನೆಯವರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಹೊಯ್ಸಳ ಗಸ್ತು ಪೊಲೀಸರು ಬಂದು ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು. ಕುಡಿದ ಅಮಲಿನಲ್ಲಿದ್ದ ಆರೋಪಿಗಳನ್ನು ಬೇರೆಡೆಗೆ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

“ಏಪ್ರಿಲ್ 2ರ ಮುಂಜಾನೆ ಮೂವರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಲಾಯ್ಡ್ ನೆಹೆಮಿಯಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಅವರು ಮಂಗಳವಾರ ರಾತ್ರಿ 10.30 ರ ಸುಮಾರಿಗೆ ನಿಧನರಾದರು” ಎಂದು ಲಾಯ್ಡ್ ಅವರ ಕಿರಿಯ ಸಹೋದರ ಡೇವಿಡ್ ನೆಹೆಮಿಯಾ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

“ಈ ಘಟನೆ ನಡೆದ ಬಳಿಕ ಲಾಯ್ಡ್‌ ಅವರ ತಾಯಿಯನ್ನು ಐಸಿಯುನಲ್ಲಿ ಸೇರಿಸಲಾಗಿದೆ. ಅವರಿಗೆ ಲಾಯ್ಡ್ ಅವರ ಸಾವಿನ ಬಗ್ಗೆ ಗೊತ್ತಿಲ್ಲ. ಈ ಸುದ್ದಿಯನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎಂಬ ಬಗ್ಗೆ ಆತಂಕವಿದೆ” ಎಂದು ಡೇವಿಡ್ ತಿಳಿಸಿದರು.

“ಪೊಲೀಸರು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ. ಶಂಕಿತರಲ್ಲಿ ಒಬ್ಬರನ್ನು ದೆಹಲಿಗೆ ಪ್ರಯಾಣಿಸಲು ಪೊಲೀಸರು ಅವಕಾಶ ನೀಡಿದ್ದಾರೆ. ಯಾರನ್ನೂ ಬಂಧಿಸಿಲ್ಲ. ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಲಾಗುವುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...