ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿದ್ದ ಬಿಲ್ಡರ್‌ಗೆ ₹85 ಲಕ್ಷ ದಂಡ ವಿಧಿಸಿದ ಎನ್‌ಜಿಟಿ

Date:

  • ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಿಲ್ಲ
  • ಸ್ಥಳೀಯರ ಸತತ ಎರಡು ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಹಾಗೂ ಬಫರ್ ಜೋನ್ ಅತಿಕ್ರಮಣ ಮಾಡಿಕೊಂಡು ಶೌಚಾಲಯ ಮತ್ತು ಈಜುಕೊಳ ನಿರ್ಮಿಸಿದ್ದ ಖಾಸಗಿ ಬಿಲ್ಡರ್‌ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿ, ₹85 ಲಕ್ಷ ದಂಡ ವಿಧಿಸಿದೆ.

ಖಾಸಗಿ ಬಿಲ್ಡರ್‌ಗಳು ಬೆಂಗಳೂರಿನ ಪೂರ್ವ ತಾಲೂಕು ಕುಂಬೇನ ಅಗ್ರಹಾರ ಮೂಲಕ ಹಾದು ಹೋಗಿದ್ದ ರಾಜಕಾಲುವೆ ಹಾಗೂ 15 ಮೀಟರ್ ಬಫರ್ ಜೋನ್​ನಲ್ಲಿ ಒತ್ತುವರಿ ಮಾಡಿದ್ದರು.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವದನ್ನು ತೆರುವು ಮಾಡುವಂತೆ ಸ್ಥಳೀಯರೆಲ್ಲರೂ ತಿಳಿಸಿದ್ದರು. ಈ ವಿಚಾರವಾಗಿ ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಖಾಸಗಿ ಬಿಲ್ಡರ್‌ ಒತ್ತುವರಿ ಮಾಡಿಕೊಂಡಿರುವ ಪ್ರದೇಶವನ್ನು ತೆರವು ಮಾಡಿರಲಿಲ್ಲ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕಾಲುವೆ ಒತ್ತುವರಿ ತೆರುವು ಆಗದ ಹಿನ್ನಲೆ, ಸ್ಥಳೀಯರೆಲ್ಲರೂ ಸೇರಿ ರಾಜಕಾಲುವೆ ಹಾಗೂ ಬಫರ್ ಜೋನ್ ಉಳಿಸುವ ಯೋಚನೆಯಿಂದ ಈ ಬಗ್ಗೆ ಚನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವೂ ಒತ್ತುವರಿ ತೆರವು ಮಾಡುವಂತೆ ಬಿಲ್ಡರ್‌ಗೆ ತಿಳಿಸಿದೆ. ಜತೆಗೆ ಒತ್ತುವರಿ ಮಾಡಿಕೊಂಡಿರುವವರಿಗೆ ₹85 ಲಕ್ಷ ದಂಡ ವಿಧಿಸಿದೆ.

ಸ್ಥಳೀಯರ ಸತತ ಎರಡು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ನ್ಯಾಯಾಲಯದ ಈ ಆದೇಶದ ಬೆನ್ನಲ್ಲೆ, ಸ್ಥಳೀಯ ಅಧಿಕಾರಿಗಳು ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡಿದ್ದಾರೆ. ಈಗ ರಾಜಕಾಲುವೆಯ ಬಫರ್ ಜೋನ್​ನಲ್ಲಿ ‘ಗ್ರೀನ್ ಲ್ಯಾಂಡ್’ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...