ಬೆಂಗಳೂರು | ಮಗುವಿಗೆ ಹೃದಯಾಘಾತವಾಗಿದೆ ಎಂದ ನಿಮ್ಹಾನ್ಸ್

Date:

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಒಂದು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮಗುವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಬೆಡ್‌ ಇಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದರು. ಅಲ್ಲದೇ, ಮಗುವಿಗೆ ಹೃದಯಾಘಾತವಾಗಿದೆ. ಮಗುವನ್ನು ಬದುಕಿಸಲು ವೈದ್ಯರು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ” ಎಂದು ನಿಮ್ಹಾನ್ಸ್ ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಮ್ಹಾನ್ಸ್, “ಹಾಸನ ಸರ್ಕಾರಿ ಆಸ್ಪತ್ರೆಯಿಂದ ಮಗುವನ್ನು ನವೆಂಬರ್ 30ರ ಮಧ್ಯಾಹ್ನ 12.45ಕ್ಕೆ ಡಿಸ್ಚಾರ್ಜ್‌ ಮಾಡಿದ್ದಾರೆ. ಮಧ್ಯಾಹ್ನ 2:30ಕ್ಕೆ ನಿಮ್ಹಾನ್ಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬಂದಿದ್ದಾರೆ” ಎಂದು ಹೇಳಿದೆ.

“ನಿಮ್ಹಾನ್ಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಸಿಟಿ ಸ್ಕ್ಯಾನ್ ಮಾಡುವ ವೇಳೆ ಹಲವು ದೋಷಗಳು ಕಂಡು ಬಂದಿದ್ದವು. ಮಧ್ಯಾಹ್ನ 3 ಗಂಟೆಗೆ ಮಗುವಿಗೆ ಹೃದಯಾಘಾತವಾಗಿದೆಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಸ್ಟಿಸ್‌ ಫಾರ್‌ ಅಜಯ್‌

ಮಗುವಿನ ಸಾವಿಗೆ ನಿಮ್ಹಾನ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿ ಕುಟುಂಬಸ್ಥರು ‘ಜಸ್ಟಿಸ್ ಫಾರ್ ಅಜಯ್’ ಎಂಬ ಟ್ಯಾಗ್ ಲೈನ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಬ್ಯುಲೆನ್ಸ್ ಚಾಲಕರು ಸಹ ಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ.

ನಿಮ್ಹಾನ್ಸ್ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಏನಿದು ಘಟನೆ?

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಒಂದು ವರ್ಷದ ಪುಟ್ಟ ಕಂದಮ್ಮ ಹಾಸನದ ಮನೆಯೊಂದರಲ್ಲಿ ತಾಯಿ ಕೈಯಿಂದ ಜಾರಿ ಸುಮಾರು 10 ಅಡಿ ಮೇಲಿನಿಂದ ಕೆಳಗೆ ಬಿದ್ದಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿತ್ತು. ತೀವ್ರವಾಗಿ ಗಾಯಗೊಂಡ ಮಗು ಅಸ್ವಸ್ಥಗೊಂಡಿತ್ತು. ಕೂಡಲೇ ಪೋಷಕರು ಮಗುವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಹಾಸನದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ಆಸ್ಪತ್ರೆಗೆ ತೆರಳುವಂತೆ ಪೋಷಕರಿಗೆ ತಿಳಿಸಿದ್ದರು. ನಿಮ್ಹಾನ್ಸ್ಆಡಳಿತ ಮಂಡಳಿಗೆ ಕರೆ ಮಾಡಿ ಮಗುವಿಗೆ ಬೆಡ್ ಕಾಯ್ದಿರಿಸುವಂತೆ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಬಳಿಕ, ಅವರೇ ಆಂಬುಲೆನ್ಸ್ನಲ್ಲಿ ಝೀರೋ ಟ್ರಾಫಿಕ್ ಮೂಲಕ ಮಗುವನ್ನು ಬೆಂಗಳೂರಿನ ನಿಮ್ಹಾನ್ಸ್ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದರು.

ಕೇವಲ 1:40 ನಿಮಿಷದಲ್ಲಿ ಹಾಸನದಿಂದ ಬೆಂಗಳೂರಿಗೆ ಮಗುವನ್ನು ಕರೆದುಕೊಂಡು ಬರಲಾಗಿತ್ತು. ಬಳಿಕ, ನಿಮ್ಹಾನ್ಸ್ಆಸ್ಪತ್ರೆಯ ಸಿಬ್ಬಂದಿ ಬೆಡ್ಇಲ್ಲವೆಂದು ಮಗುವಿಗೆ ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ನೀಡದೆ ಹಾಗೆಯೇ, ಆಂಬುಲೆನ್ಸ್ನಲ್ಲಿ ಬಿಟ್ಟಿದ್ದಾರೆ. ಸಾವು ಬದುಕಿನೊಡನೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡದೆ, ನಿಮ್ಹಾನ್ಸ್ಆಸ್ಪತ್ರೆಯ ವೈದ್ಯರು ದುರ್ವರ್ತನೆ ತೋರಿದ್ದರು.

ಈ ಸುದ್ದಿ ಓದಿದ್ದೀರಾ? ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಮಗು ನೋವಿನಿಂದ ಬಳಲುತ್ತಿದ್ದರು ಆಸ್ಪತ್ರೆಯ ವೈದ್ಯರು ಕನಿಷ್ಠ ಪ್ರಾಥಮಿಕ ತನಿಖೆಯನ್ನು ಸಹ ನಡೆಸಿಲ್ಲ. ಮಗುವಿಗೆ ಬೆಡ್ ನೀಡಿಲ್ಲ. ಆಂಬುಲೆನ್ಸ್ನಲ್ಲಿಯೇ ಅರ್ಧ ಗಂಟೆಗೂ ಹೆಚ್ಚು ಸಮಯ ಹಾಗೇ ಬಿಟ್ಟಿದ್ದಾರೆ. ಝೀರೋ ಟ್ರಾಫಿಕ್​​ನಲ್ಲಿ ಬಂದ ಮಗುವಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಲಭಿಸದ ಕಾರಣ ಮಗು ಸಾವನ್ನಪ್ಪಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...