ಬೆಂಗಳೂರು | ರಾಜಕಾಲುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿ ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ವಲಯ ಆಯುಕ್ತ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆ ಪರಿಶೀಲಿಸಿ ಬಳಿಕ ಮಾತನಾಡಿದ ಅವರು, “ನಾಗರಿಕರಿಗೆ ಮಳೆಗಾಲದ ವೇಳೆ ರಾಜಕಾಲುವೆಗಳಿಂದ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಂಡು ರಾಜಕಾಲುವೆಗಳಲ್ಲಿ ಸಂಗ್ರಹವಾಗುವ ಹೂಳನ್ನು ಕಾಲಕಾಲಕ್ಕೆ ತೆರವುಗೊಳಿಸುತ್ತಿರಬೇಕು” ಎಂದರು.

“ಸಾರ್ವಜನಿಕರ ಹಿತದೃಷ್ಠಿಯಿಂದ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಕಛೇರಿ ಹತ್ತಿರ ಹರಿಯುತ್ತಿರುವ ಬೃಹತ್ ಮಳೆ ನೀರುಗಾಲುವೆಯ ನಿರ್ವಹಣೆಗೆ ತೊಂದರೆಯಾಗದಂತೆ ಒಟ್ಟು ಮೂರು ಕಡೆ ರ‍್ಯಾಂಪ್ ನಿರ್ಮಿಸಿ, ಹೂಳನ್ನು ತೆಗೆಯಲು ಅನುಕೂಲವಾಗುವಂತೆ ಮಳೆ ನೀರುಗಾಲುವೆಯನ್ನು ಎತ್ತರಿಸಿ ಚಿಕ್ಕದಾದ ಹೈಡ್ರಾಲಿಕ್ ಎಸ್ಕವೇಟರ್ ಹೋಗುವಂತೆ ಆರ್.ಸಿ.ಸಿ ಛಾವಣಿಯಿಂದ ಬೃಹತ್ ಮಳೆ ನೀರುಗಾಲುವೆಯನ್ನು ಮುಚ್ಚಬೇಕು” ಎಂದು ಅಧಿಕಾರಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರಿನ ಬೆಲೆ ದುಪ್ಪಟ್ಟು; ಕಂಗಾಲಾದ ನಗರದ ನಾಗರಿಕರು

ಸಮೃದ್ಧಿ ಬಡಾವಣೆಯಲ್ಲಿ ನಿರ್ಮಿಸಿರುವ ಲೀಡ್ ಆಫ್ ಡ್ರೈನ್ ಪರಿಶೀಲನೆ

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಸಮೃದ್ದಿ ಬಡಾವಣೆಯಲ್ಲಿ ಈಗಾಗಲೇ ನಿರ್ಮಿಸಿರುವ ಲೀಡ್ ಆಫ್ ಡ್ರೈನ್‌ ಅನ್ನು ಪರಿಶೀಲಿಸಿ, ಹಳೆಯ ರಸ್ತೆ ಬದಿ ಚರಂಡಿಗೆ ಒಂದು ಮೀಟರ್‌ನಷ್ಟು ತಡೆಗೋಡೆ ನಿರ್ಮಿಸಿ ಕೆರೆ ತುಂಬಿ ಬರುವ ನೀರು ಹಾಗೂ ಡೈವರ್ಷನ್ ಚರಂಡಿಯ ನೀರನ್ನು ಹೊಸದಾಗಿ ನಿರ್ಮಿಸಿರುವ ಲೀಡ್ ಆಫ್ ಡ್ರೈನ್‌ಗೆ ಡೈವರ್ಷನ್ ಮಾಡಲು ಸೂಚಿಸಿದರು.

ನಾಯಂಡಹಳ್ಳಿ ಜಂಕ್ಷನ್ ಬಳಿಯ ರಾಜಕಾಲುವೆ ಪರಿಶೀಲನೆ

ವಿಜಯನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಹರಿಯುತ್ತಿರುವ ವೃಷಭಾವತಿ ಮಳೆ ನೀರುಗಾಲುವೆ ಪರಿಶೀಲಿಸಿ, ಹೊರವರ್ತುಲ ರಸ್ತೆಯ ಸೇತುವೆಯ ಕೆಳಭಾಗದ ವೆಂಟ್ ಚಿಕ್ಕದಾಗಿರುವ ಕಾರಣ ಹೆಚ್ಚು ಮಳೆ ಬಿದ್ದ ಸಂದರ್ಭದಲ್ಲಿ ಪ್ರವಾಹ ಆಗುವುದನ್ನು ತಡೆಯಲು ಆಗಾಗ ಹೂಳನ್ನು ತೆಗೆಯಬೇಕು. ಜತೆಗೆ ನಾಯಂಡಹಳ್ಳಿ ಜಂಕ್ಷನ್ ವೃತ್ತದಲ್ಲಿ ಎಂ.ಆರ್.ಕನ್ವೇನ್‌ಷನ್ ಹಾಲ್ ಮುಂಭಾಗ ಲಭ್ಯವಿರುವ ಸುಮಾರು ಅರ್ಧ ಎಕರೆ ಖಾಲಿ ಜಾಗವನ್ನು ಘನ ತ್ಯಾಜ್ಯ ನಿರ್ವಹಣೆ ಉದ್ದೇಶಗಳಿಗೆ ಅಥವಾ ಬೃಹತ್ ನೀರುಗಾಲುವೆ ಉದ್ದೇಶಕ್ಕಾಗಿ ಮಾತ್ರ ಮೀಸಲಿಡಬೇಕು ಎಂದು ಹೇಳಿದರು.

ಗಾಳಿ ಆಂಜನೇಯ ದೇವಸ್ಥಾನದ ಹಿಂಭಾಗದ ವೃಷಭಾವತಿ ಮಳೆ ನೀರುಗಾಲುವೆ ಪರಿಶೀಲನೆ

ವಿಜಯನಗರ ವಿಧಾನಸಭಾ ಕ್ಷೇತ್ರದ ಗಾಳಿ ಆಂಜನೇಯ ದೇವಸ್ಥಾನದ ಹಿಂಭಾಗದ ವೃಷಭಾವತಿ ಮಳೆ ನೀರುಗಾಲುವೆಯನ್ನು ಪರಿಶೀಲಿಸಿ ಕವಿಕಾ ಕಾರ್ಖಾನೆ ಹಿಂಭಾಗ ಮಳೆನೀರುಗಾಲುವೆಯಲ್ಲಿನ ಹೂಳನ್ನು ಹೊರತೆಗೆಯಲು ಅನುಕೂಲವಾಗುವಂತೆ ಈಗಾಗಲೇ ನಿರ್ಮಿಸಿರುವ ತಾತ್ಕಾಲಿಕ ರ‍್ಯಾಂಪ್‌ಗೆ ಬದಲಾಗಿ ಶಾಶ್ವತವಾಗಿ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ನಿರ್ಮಿಸಿರುವಂತೆ ರ‍್ಯಾಂಪ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ವೇಳೆ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರಾದ ಚೇತನ್, ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...