ಬೆಂಗಳೂರು | ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಮಲ್ಲೇಶ್ವರಂ ವಿಭಾಗದ 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, 10ನೇ ಅಡ್ಡರಸ್ತೆ ಮಾರುಕಟ್ಟೆ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆ ನಡೆಸಿದೆ.

“ಮಲ್ಲೇಶ್ವರಂನ ಮಲ್ಲೇಶ್ವರಂ ನಿವಾಸಿ ಕಲ್ಯಾಣ ಸಂಘ ಹಾಗೂ ವರ್ತಕರ ಸಂಘಗಳ ಮನವಿ ಜತೆಗೆ ಉಚ್ಚ ನ್ಯಾಯಾಲಯ ಹೊರಡಿಸಿರುವ ಆದೇಶದನುಸಾರ ನ.3 ರಂದು ಬೆಳಗ್ಗೆ 11.30 ಘಂಟೆಯಿಂದ ಸಂಪಿಗೆ ರಸ್ತೆ, 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, 10ನೇ ಅಡ್ಡರಸ್ತೆ, ಮಾರುಕಟ್ಟೆ ರಸ್ತೆಗಳ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು” ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

“4 ಟ್ರ್ಯಾಕ್ಟರ್ ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಿಕೊಂಡು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿದ್ದ ಅನಧಿಕೃತ ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವು ಮಾಡಲಾಯಿತು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಾಚರಣೆ ನಡೆಯುವ ಮುನ್ನ ವ್ಯಾಪಾರಿಗಳ ಗಮನಕ್ಕೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ಹೇಳಲಾಗಿದೆ. ಆದರೂ, ಸುಮಾರು 1.50 ಕೀ.ಮೀ ರಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ಮುಂದುವರೆಸಿದ್ದರು. ಅಂತಹವರ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರಿಗೆ ದಂಡ ವಿಧಿಸುವ ಜತೆಗೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಆ್ಯಪ್‌ ಮೂಲಕ ಸಾಲ, ಅಶ್ಲೀಲ ಫೋಟೋ ಬೆದರಿಕೆ, 45 ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡನ ಪುತ್ರ

ಈ ವೇಳೆ ಕಾರ್ಯಪಾಲಕ ಅಭಿಯಂತರ ಜಯಶಂಕರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಹರ್ಷ ನಾಯ್ಕ್, ಆರೋಗ್ಯಾಧಿಕಾರಿಗಳು, ಪೋಲಿಸ್ ಅಧಿಕಾರಿಗಳು/ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಮಾರ್ಷಲ್‌, ಪೌರಕಾರ್ಮಿಕರು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...