ಬೆಂಗಳೂರು ಹೊರವಲಯ | ಮೇ ಅಂತ್ಯದೊಳಗೆ 110 ಗ್ರಾಮಗಳಿಗೆ ಕಾವೇರಿ ನೀರು ಪೂರೈಕೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಸುವ ₹5,500 ಕೋಟಿ ಯೋಜನೆಯು ಮೇ 2024ರ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ.

ಇದು ಜಪಾನ್ ಅನುದಾನಿತ ಕಾವೇರಿ ನೀರು ಸರಬರಾಜು 5ನೇ ಹಂತದ ಯೋಜನೆಯಾಗಿದೆ. ನೀರು ಪೂರೈಕೆಗೆ ಇತ್ತೀಚಿನ ಪರಿಷ್ಕೃತ ಗಡುವನ್ನು ಮುಂದಿನ ವರ್ಷ ಫೆಬ್ರವರಿ/ಮಾರ್ಚ್ ಎಂದು ನಿಗದಿ ಪಡಿಸಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲುಎಸ್‌ಎಸ್‌ಬಿ) ಅಧ್ಯಕ್ಷ ಪ್ರಶಾಂತ್ ಮನೋಹರ್, “2020ರಲ್ಲಿ ಆರಂಭವಾದ ಈ ಯೋಜನೆಗೆ 36 ತಿಂಗಳ ಗಡುವು ನೀಡಲಾಗಿತ್ತು. ಕೋವಿಡ್ ಮತ್ತು ಅದರ ನಂತರದ ಸಮಸ್ಯೆಗಳಿಂದಾಗಿ ಯೋಜನೆಯ ಕೆಲಸ ವಿಳಂಬವಾಯಿತು. 9 ತಿಂಗಳ ವಿಳಂಬವಾಗಿದೆ. ನಾವು ಈಗ ಕೆಲಸ ಮಾಡುತ್ತಿದ್ದೇವೆ. ಅದೇ, ಟ್ರ್ಯಾಕ್‌ನಲ್ಲಿದ್ದೇವೆ. ಮಾರ್ಚ್ 2024 ರ ವೇಳೆಗೆ ಎಲ್ಲ ಮೂಲಸೌಕರ್ಯಗಳು ಸ್ಥಳದಲ್ಲಿರುತ್ತವೆ. ಮೇ ವೇಳೆಗೆ ಯೋಜನೆಯನ್ನು ಕಾರ್ಯಾರಂಭ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರವು ಯೋಜನೆಯನ್ನು ಜುಲೈ 2023ರ ಗಡುವಿನಿಂದ ಡಿಸೆಂಬರ್ 2023ಕ್ಕೆ ಆರು ತಿಂಗಳ ವಿಸ್ತರಣೆ ಮಾಡಿತ್ತು. ಕೆಲವು ತಿಂಗಳ ಹಿಂದೆ ಉನ್ನತ ಬಿಡ್ಲುಎಸ್‌ಎಸ್‌ಬಿ ಅಧಿಕಾರಿಗಳು 2024ರ ಮೊದಲ ತ್ರೈಮಾಸಿಕದೊಳಗೆ ಅದನ್ನು ಕಾರ್ಯಾರಂಭ ಮಾಡುವ ವಿಶ್ವಾಸವನ್ನು ಹೊಂದಿದ್ದರು.

ಈ ಯೋಜನೆ 225 ಚದರ ಕಿ.ಮೀ ಹರಡಿಕೊಂಡಿದೆ. ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿ ಯೋಜನಾ ವೆಚ್ಚದ 84% ಹಣವನ್ನು ನೀಡುತ್ತಿದೆ. ಆದರೆ, ಬಿಡಬ್ಲೂಎಸ್‌ಎಸ್‌ಬಿ ಮತ್ತು ರಾಜ್ಯ ಸರ್ಕಾರವು ವೆಚ್ಚದ 8% ಹಣವನ್ನು ನೀಡುತ್ತಿದೆ.

ಈ ಯೋಜನೆ ಕಾರ್ಯಾರಂಭ ಮಾಡಿದರೆ ಮಹದೇವಪುರ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ, ಯಲಹಂಕ, ಕೆ.ಆರ್.ಪುರಂ ಮತ್ತು ಬ್ಯಾಟರಾಯನಪುರ ಗ್ರಾಮಗಳಿಗೆ ದಿನಕ್ಕೆ 775 ದಶಲಕ್ಷ ಲೀಟರ್ ನೀರು ಒದಗಿಸಲಾಗುತ್ತದೆ. ಹತ್ತು ಟ್ರಿಲಿಯನ್ ಮಿಲಿಯನ್ ಕ್ಯೂಬಿಕ್ (ಟಿಎಂಸಿ) ಮೀಟರ್ ನೀರು ಸರಬರಾಜಿಗಾಗಿ ಒಂದು ದಶಕದ ಹಿಂದೆ ಈಗಾಗಲೇ ಹಣ ಮಂಜೂರು ಮಾಡಲಾಗಿದೆ.

“ಅರ್ಧಕ್ಕಿಂತ ಹೆಚ್ಚು ಹಳ್ಳಿಗಳಿಗೆ ವಾರಕ್ಕೊಮ್ಮೆ ಅಥವಾ ವಾರಕ್ಕೆ ಎರಡು ಬಾರಿ ನೀರು ಸರಬರಾಜು ಮಾಡಲಾಗುತ್ತಿದೆ. ನಾವು ಅದನ್ನು ಕಮಿಷನ್ ಮಾಡಿದ ನಂತರ, ಅವರಿಗೆ ನಿಯಮಿತವಾಗಿ ನೀರು ಸರಬರಾಜು ಮಾಡಲಾಗುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ₹3 ಕೋಟಿ ಸಾಲ ಪಡೆದ ವಂಚಕರು: ಬಂಧನ

ಯೋಜನೆಯು ಹಲವಾರು ಸಮಸ್ಯೆಗಳನ್ನು ಎದುರಿಸಿದೆ. ಉಕ್ರೇನ್ ಮತ್ತು ರಷ್ಯಾ ಸ್ಟ್ಯಾಂಡ್-ಆಫ್ ಪೂರೈಕೆ ಸರಪಳಿಗೆ ಅಡ್ಡಿಪಡಿಸಿತು. ಭಾರೀ ಮಳೆಯು ಯೋಜನಾ ಸೈಟ್ ಅನ್ನು ಪ್ರವಾಹಕ್ಕೆ ಒಳಪಡಿಸಿತು. ಭೀಮಾ ನದಿಯ ಉಕ್ಕಿ ಹರಿಯುವಿಕೆಯು ಅದರ ಆರಂಭಿಕ ಪೂರ್ಣಗೊಳಿಸುವಿಕೆಯ ಮೇಲೆ ಪರಿಣಾಮ ಬೀರಿದೆ.

ನೀರನ್ನು ಸಂಗ್ರಹಿಸುವ ಒಂಬತ್ತು ನೆಲಮಟ್ಟದ ಜಲಾಶಯಗಳನ್ನು ನಿರ್ಮಿಸಲಾಗುತ್ತಿದೆ. ತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಹಾರೋಹಳ್ಳಿ ಮತ್ತು ತಾತಗುಣಿ ನೀರು ಸರಬರಾಜು ಮಾರ್ಗದಲ್ಲಿ ತಲಾ ಒಂದು ಹೊಸ ಪಂಪಿಂಗ್ ಸ್ಟೇಷನ್‌ಗಳನ್ನು ಹೊಂದಲಿದೆ. ಉಳಿದ ಆರು ಜಿಎಲ್‌ಆರ್‌ಗಳನ್ನು ಗೊಟ್ಟಿಗೆರೆ, ದೊಡ್ಡಕನಹಳ್ಳಿ, ಕಾಡುಗೋಡಿ, ಎಸ್‌ಎಂವಿ ಲೇಔಟ್ 4ನೇ ಬ್ಲಾಕ್, ಲಿಂಗದೀರನಹಳ್ಳಿ ಮತ್ತು ಸಿಂಗಾಪುರದಲ್ಲಿ ನಿರ್ಮಿಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...