ಬೆಂಗಳೂರು | ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಪಾದಚಾರಿ ಒತ್ತುವರಿ ತೆರವುಗೊಳಿಸಿ: ತುಷಾರ್ ಗಿರಿನಾಥ್

Date:

“ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಾಗಾಗಿ, ಕೂಡಲೇ ಒತ್ತುವರಿಯನ್ನು ತೆರವುಗೊಳಿಸಿ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯನಗರ ವಾಣಿಜ್ಯ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಪರಿಶೀಲನೆ ನಡೆಸಿದರು.

ಈ ವೇಳೆ, “ಜಯನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ಬದಿಯ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿರುವುದರಿಂದ, ಒತ್ತುವರಿಯನ್ನು ತೆರವುಗೊಳಿಸಲು ಹಾಗೂ ಅನಧಿಕೃತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿರುವವರನ್ನು ಗುರುತಿಸಿ, ಜತೆಗೆ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮಳಿಗೆಗಳನ್ನು ತೆರವುಗೊಳಿಸಲು ಕ್ರಮವಹಿಸಿ” ಎಂದು ಅಧಿಕಾರಿಗಳಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂದಿನ ದಿನಗಳಲ್ಲಿ ಜಯನಗರ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿ ಹಾಗೂ ಹೊರಗಿನ ಪ್ರದೇಶಗಳಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ವ್ಯಾಪಾರಸ್ಥರಿಂದಾಗಲಿ ಹಾಗೂ ಬೀದಿ ಬದಿಯ ವ್ಯಾಪಾರಿಗಳಿಂದಾಗಲಿ ಒತ್ತುವರಿಯಾಗದಂತೆ ಕ್ರಮವಹಿಸಿ” ಎಂದು ಗಸ್ತಿನಲ್ಲಿರುವ ಮಾರ್ಷಲ್‌ಗಳಿಗೆ ಸೂಚಿಸಿದರು.

“ಜಯನಗರ ವಾಣಿಜ್ಯ ಸಂಕೀರ್ಣದ ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ದೀಪ ವ್ಯವಸ್ಥೆ ಇಲ್ಲ. ಕೂಡಲೇ ವಿದ್ಯುತ್ ದೀಪಗಳನ್ನು ಅಳವಡಿಸಿ, ಅನಧಿಕೃತವಾಗಿ ಒಳಬಾರದಂತೆ ಪ್ರವೇಶ ನಿರ್ಬಂಧಗೊಳಿಸಿ. ಸಂಕೀರ್ಣದ ಬಳಿ ನಿರ್ಮಿಸಬೇಕಾಗಿರುವ ಬ್ಲಾಕ್-2, 3 & 4 ಕಟ್ಟಡದ ಸ್ಥಳವನ್ನು ಪರಿಶೀಲಿಸಿ, ಕಾಮಗಾರಿಯು ಪ್ರಾರಂಭವಾಗದೇ ಇರುವ ಹಿನ್ನಲೆಯಲ್ಲಿ ಬಿಡಿಎ ಅವರೊಂದಿಗೆ ಸಮಾಲೋಚನೆ ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ದಿನವಾದರೂ ಬೋನಿಗೆ ಬೀಳದ ಚಿರತೆ; ವೈದ್ಯ ಸೇರಿದಂತೆ ಮೂವರ ಮೇಲೆ ದಾಳಿ

ಈ ವೇಳೆ ಶಾಸಕರಾದ ಸಿ.ಕೆ.ರಾಮಮೂರ್ತಿ, ದಕ್ಷಿಣ ವಲಯದ ವಲಯ ಆಯುಕ್ತಾದ ವಿನೋತ್ ಪ್ರಿಯಾ, ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಮುಖ್ಯ ಅಭಿಯಂತರರಾದ ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...