ಬೆಂಗಳೂರು | ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು; ನಿವಾಸಿಗಳ ಆಕ್ರೋಶ

Date:

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಬೆಂಗಳೂರಿನ ಬಹುತೇಕ ಕಡೆ ರಸ್ತೆಗಳಿಗೆ ಟಾರು ಹಾಕಲಾಗಿತ್ತು. ಇದೀಗ ಟಾರು ಕಿತ್ತು ಬರುತ್ತಿದ್ದು, ರಸ್ತೆಯ ತುಂಬ ಗುಂಡಿಗಳು ನಿರ್ಮಾಣವಾಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್‌ಎಎಲ್‌ ವಾರ್ಡ್‌ನ ವರ್ತೂರು, ವೈಟ್‌ಫೀಲ್ಡ್‌ ಹಾಗೂ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿದ್ದು, ಟಾರು ಕಿತ್ತು ಹೋಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ.

“ವರ್ತೂರು-ಬಳಗೆರೆ ಹಾಗೂ ಬಳಗೆರೆ ಪಾಣತ್ತೂರು ಮುಖ್ಯರಸ್ತೆಯಲ್ಲಿ ಗುಂಡಿಗಳು ತುಂಬಿವೆ. ಕಳಪೆ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಬಾಕಿ ಬಿಲ್ ಪಾವತಿ ಮಾಡುವುದನ್ನು ತಡೆಹಿಡಿಯಬೇಕು” ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ತೂರು ಸಮೀಪದ ಆದಿತ್ಯ ಫ್ರಾಂಡೋಸೊ ಅಪಾರ್ಟ್‌ಮೆಂಟ್‌ನ ನಿವಾಸಿಯೊಬ್ಬರು ಮಾತನಾಡಿ, “ವಿಧಾನಸಭೆ ಚುನಾವಣೆ ಮುನ್ನವೇ ಟಾರ್‌ ಹಾಕಲಾಗಿದ್ದು, ಎರಡು ತಿಂಗಳಲ್ಲೇ ವರ್ತೂರು ಸಂಪರ್ಕಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಗುಂಡಿಗಳನ್ನು ಬೇಗನೆ ಮುಚ್ಚಬೇಕು. ಇಲ್ಲದಿದ್ದರೆ, ಚಳಿಗಾಲ ಮತ್ತು ಬೇಸಿಗೆ ಕಾಲದಲ್ಲಿ ಧೂಳಿನ ಸಂಬಂಧಿತ ಸೋಂಕುಗಳು ಹೆಚ್ಚಾಗುತ್ತವೆ” ಎಂದರು.

“ರಸ್ತೆ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಹಣ ಪಾವತಿಯಾಗದಂತೆ ಹಾಗೂ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್‌ ಚಂದ್ರ ಅವರಿಗೆ ಮನವಿ ಸಲ್ಲಿಸಲಾಗುವುದು. ಸಂಬಂಧಪಟ್ಟ ಗುತ್ತಿಗೆದಾರರು ರಸ್ತೆಗಳನ್ನು ಬೇಗನೆ ಸರಿಪಡಿಸಬೇಕು. ಸೊರಹುಣ್ಸೆ ಮುಖ್ಯರಸ್ತೆ, ಹಲಸಹಳ್ಳಿ ಮುಖ್ಯರಸ್ತೆ, ಬಳಗೆರೆ-ಪಾಣತ್ತೂರು ರಸ್ತೆ, ಬಳಗೆರೆ-ಗುಂಜೂರು ರಸ್ತೆಗಳಲ್ಲಿ ಇತ್ತೀಚೆಗೆ ಡಾಂಬರೀಕರಣ ಮಾಡಲಾಗಿದೆ” ಎಂದು ವರ್ತೂರಿನ ನಿವಾಸಿ ಜಗದೀಶ್‌ ರೆಡ್ಡಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಸ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯೊಬ್ಬನ ವಿರುದ್ಧ ದೂರು ದಾಖಲು

“ಆರ್ಟಿರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗುತ್ತಿರುವ ಬಗ್ಗೆ ಹೆಚ್ಚಿನ ದೂರುಗಳು ಬಂದಿವೆ. ಬಿಡಬ್ಲ್ಯುಎಸ್‌ಎಸ್‌ಬಿಯ ಕಾಮಗಾರಿಗಳಿಂದಾಗಿ ಈ ಸಮಸ್ಯೆ ಉಂಟಾಗಿದೆ” ಎಂದು ಮಹದೇವಪುರ ವಲಯದ ಕಾರ್ಯನಿರ್ವಾಹಕ ಎಂಜಿನಿಯರ್ ಮುನಿರೆಡ್ಡಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...