ಬೆಂಗಳೂರು | ನೀರಿಗಾಗಿ ನೆರೆಹೊರೆಯವರೊಂದಿಗೆ ಜಗಳ ; ಮಹಿಳೆ ಆತ್ಮಹತ್ಯೆ

Date:

  • ಉತ್ತರ ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ
  • ಸರಸ್ವತಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು

ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಮಹಿಳೆಯೊಬ್ಬರು ನೀರಿನ ಕೊರತೆಯಿಂದಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರಸ್ವತಿ ಕೆ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸರಸ್ವತಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇವರ ಪತಿ ನಾಗರಾಜ ಎ ವಿ, ಇವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಸಹಾಯಕ ಕ್ಯಾಮರಾಮನ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಉತ್ತರ ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಮುಖ್ಯರಸ್ತೆಯಲ್ಲಿ ಏ.21 ರಂದು ಸಂಜೆ 5.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಹಿನ್ನೆಲೆ?

“ನೀರಿನ ವಿಚಾರವಾಗಿ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯ ನೆರೆಹೊರೆಯವರಾದ ಶ್ರೀನಿವಾಸ್ ಮತ್ತು ಭವಾನಿ ಅವರು ಕಾರ್ಪೊರೇಷನ್ ನೀರನ್ನು ಪಂಪ್ ಮಾಡುವ ಬಗ್ಗೆ ತಮ್ಮೊಂದಿಗೆ ಹಾಗೂ ಅಪಾರ್ಟ್‌ಮೆಂಟ್‌ನ ಇತರ ನಿವಾಸಿಗಳೊಂದಿಗೆ ಜಗಳವಾಡುತ್ತಿದ್ದರು. ಉಳಿದವರಿಗೆ ನೀರು ಬಿಡದೆ ತಮ್ಮ ಮನೆಗೆ ನೀರನ್ನೆಲ್ಲ ಪಂಪ್ ಮಾಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಇತ್ತೀಚೆಗೆ ಅಪಾರ್ಟ್‌ಮೆಂಟ್‌ನವರು ಎಲ್ಲರೂ ಸೇರಿ ಸಭೆ ನಡೆಸಿ ಎಲ್ಲರೂ ಸಮಾನವಾಗಿ ನೀರು ಪಡೆಯಬೇಕು ಎಂದು ತೀರ್ಮಾನಿಸಿದ್ದೆವು. ಆದರೆ, ನೆರೆಯ ದಂಪತಿ ಸರಸ್ವತಿಗೆ ನೀರು ಪಂಪ್ ಮಾಡಲು ಬಿಡಲಿಲ್ಲ” ಎಂದು ನಾಗರಾಜ ತಿಳಿಸಿದ್ದಾರೆ.

“ಈ ಬಗ್ಗೆ ಸರಸ್ವತಿ ಅವರನ್ನು ಕೇಳಿದ್ದಕ್ಕೆ ನೆರೆಯ ದಂಪತಿ ಅವಳನ್ನು ಹಲವರ ಮುಂದೆ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನೆರೆಯ ದಂಪತಿಯೊಂದಿಗೆ ಮತ್ತೊಬ್ಬ ನೆರೆಮನೆಯ ಶಿಲ್ಪಾ ಕೂಡ ಕೈಜೋಡಿಸಿದ್ದಾರೆ. ಸಿನಿಮಾ ಚಿತ್ರೀಕರಣ ಮುಗಿಸಿ ಧಾರವಾಡದಿಂದ ವಾಪಸ್ಸಾಗುತ್ತಿದ್ದ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ಪತ್ನಿ ಕರೆ ಮಾಡಿ, ಘಟನೆ ನಡೆದ ಬಗ್ಗೆ ತಿಳಿಸಿದ್ದಾಳೆ. ಕೂಡಲೇ ನಾನು ಈ ಬಗ್ಗೆ ಯಲಹಂಕ ಪೊಲೀಸರಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿಯಿಂದ ಮರಗಳ ಸುತ್ತ ಕಾಂಕ್ರೀಟ್‌; ಕೆರೆ ಹೋರಾಟಗಾರರ ಆಕ್ರೋಶ

“ನಾನು ನನ್ನ ಪತ್ನಿಗೆ ಅವರೊಂದಿಗೆ ಜಗಳವಾಡಬೇಡ. ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡುತ್ತೇನೆ ಎಂದು ಹೇಳಿದೆ. ಪೊಲೀಸರು ಬರುವವರೆಗೂ ಮನೆಯಲ್ಲಿಯೇ ಇರುವಂತೆ ಕೇಳಿಕೊಂಡೆ. ಆದರೆ, ನೆರೆಯ ದಂಪತಿ ಮತ್ತೆ ನನ್ನ ಪತ್ನಿಯೊಂದಿಗೆ ಜಗಳವಾಡಿ ಥಳಿಸಿದ್ದಾರೆ. 112ಕ್ಕೆ ಕರೆ ಮಾಡಿ ದೂರು ನೀಡಿದ್ದೆ. ಸ್ವಲ್ಪ ಸಮಯದ ನಂತರ, ನನ್ನ ನೆರೆಹೊರೆಯವರು ನನಗೆ ಕರೆ ಮಾಡಿ, ತುರ್ತು ಪರಿಸ್ಥಿತಿ ಇರುವುದರಿಂದ ತಕ್ಷಣ ಮನೆಗೆ ಬರುವಂತೆ ಹೇಳಿದರು. ನಾನು ಸಂಜೆ 7.30ರ ನಂತರ ಮನೆಗೆ ತಲುಪಿದೆ” ಎಂದು ವಿವರಿಸಿದ್ದಾರೆ.

ಮಗಳನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಸರಸ್ವತಿ ನೇಣು ಬಿಗಿದುಕೊಂಡಿದ್ದಾಳೆ. ಸರಸ್ವತಿ ಆತ್ನಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಮತ್ತು ಅವಳನ್ನು ರಕ್ಷಿಸಲು ನೆರೆಹೊರೆಯವರು ಬಾಗಿಲು ಮುರಿದು, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೂವರ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಪೊಲೀಸ್‌ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...