ಬೆಂಗಳೂರು | ಸಂಬಂಧಿಕರ ಮನೆಯಲ್ಲಿಯೇ ಕೋಟಿ ಬೆಲೆಬಾಳುವ ಚಿನ್ನ ದೋಚಿ ಪರಾರಿ; ಬಂಧನ

Date:

ಸಂಬಂಧಿಕರ ಮನೆಯಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನ, ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ರಫೀಕ್(35) ಬಂಧಿತ ಆರೋಪಿ. ಬಂಧಿತನಿಂದ ₹1.10 ಕೋಟಿ ಮೌಲ್ಯದ 1.8 ಕೆಜಿ ಚಿನ್ನಾಭರಣ ಹಾಗೂ ₹74 ಸಾವಿರ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಿ ವ್ಯಾಪಾರಿಯಾಗಿದ್ದ ಷಹನವಾಜ್ ತಿಲಕನಗರದ ಎಸ್‌.ಆರ್.ಕೆ ಗಾರ್ಡನ್ ಬಳಿ ತನ್ನ ಕುಟುಂಬದೊಂದಿಗೆ ವಾಸವಿದ್ದರು. ಇವರ ಕುಟುಂಬಕ್ಕೆ ಸಂಬಂಧಿಯಾಗಿದ್ದ ಆರೋಪಿ ಮೊಹಮ್ಮದ್ ರಫೀಕ್ ಆಗಾಗ ಇವರ ಮನೆಗೆ ಬಂದು ಹೋಗುತ್ತಿದ್ದನು. ಮೊದಲಿನಿಂದಲೂ ಷಹನವಾಜ್ ಅವರ ಐಷಾರಾಮಿ ಜೀವನದ ಬಗ್ಗೆ ಈತ ಅಸೂಯೆ ಹೊಂದಿದ್ದನು.

ಷಹನವಾಜ್ ಅವರ ಮನೆಯ ಬೀಗದ ಕೀ ಅಚ್ಚು ತೆಗೆದುಕೊಂಡು ತನ್ನ ಬಳಿ ಇಟ್ಟುಕೊಂಡಿದ್ದನು. ರಾಮನಗರದಲ್ಲಿ ಸಂಬಂಧಿಕರೊಬ್ಬರ ಮದುವೆ ಇದ್ದ ಕಾರಣ ಷಹನವಾಜ್ ಕುಟುಂಬ ತೆರಳಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಗಮನಿಸಿ ಆರೋಪಿ ನಕಲಿ ಕೀ ಬಳಸಿ, ಮನೆಗೆ ನುಗ್ಗಿ 2.5 ಕೆ‌ಜಿ ತೂಕದ ಚಿನ್ನಾಭರಣ, ₹8 ರಿಂದ ₹10 ಲಕ್ಷ ನಗದು ದೋಚಿ ಪರಾರಿಯಾಗಿದ್ದನು.

ಸೆಪ್ಟೆಂಬರ್ 25ರ ರಾತ್ರಿ ಷಹನವಾಜ್ ಕುಟುಂಬ ಮನೆಗೆ ಹಿಂತಿರುಗಿ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.

ತಕ್ಷಣ ಷಹನವಾಜ್ ತಿಲಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಲು ರಜೆಗಳ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಜನ; ವಾಹನ ಸಂಚಾರ ದಟ್ಟಣೆ ಹೆಚ್ಚಳ

ಆರೋಪಿಯಿಂದ ಸದ್ಯ ಪೊಲೀಸರು 1.8 ಕೆ.ಜಿ ಚಿನ್ನಾಭರಣ ಹಾಗೂ ₹74 ಸಾವಿರ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಹಣವನ್ನು ಆರೋಪಿ ತನ್ನ ಸಾಲಗಳನ್ನು ತೀರಿಸಲು ಬಳಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಷಹನವಾಜ್ ಅವರ ಮನೆಯಲ್ಲಿ ಮದುವೆ ತಯಾರಿ ನಡೆಯುತ್ತಿದ್ದ ಹಿನ್ನೆಲೆ, ಚಿನ್ನಾಭರಣ ಹಾಗೂ ನಗದು ತಂದಿಡಲಾಗಿತ್ತು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...