ಬೆಂಗಳೂರು | ಮಹಿಳಾ ಸಹ-ಪೈಲಟ್ ಮೇಲೆ ಅತ್ಯಾಚಾರ; ಪೈಲಟ್ ವಿರುದ್ಧ ಎಫ್‌ಐಆರ್‌

Date:

ಚಾರ್ಟರ್ಡ್ ವಿಮಾನದ ಕರ್ತವ್ಯದಲ್ಲಿದ್ದಾಗ ತನ್ನ ಮೇಲೆ ಪೈಲಟ್‌ ಅತ್ಯಾಚಾರ ಎಸಗಿದ್ದಾನೆಂದು ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಘಟನೆಯು ಬೆಂಗಳೂರಿನಲ್ಲಿ ನಡೆದಿದ್ದು, ಸಂತ್ರಸ್ತೆ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಘಟನೆ ಬೆಂಗಳೂರಿನಲ್ಲಿ ನಡೆದಿದ್ದ ಕಾರಣ ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

ಸಂತ್ರಸ್ತೆ ದಾಖಲಿಸಿರುವ ದೂರಿನ ಪ್ರಕಾರ, ನವೆಂಬರ್ 18ರಂದು ಘಟನೆ ನಡೆದಿದೆ. ಸಂತ್ರಸ್ತ ಮಹಿಳಾ ಸಹ-ಪೈಲಟ್ ಮತ್ತು ಇಬ್ಬರು ಪುರುಷ ಪೈಲಟ್‌ಗಳು ಬೇಗಂಪೇಟೆ ವಿಮಾನ ನಿಲ್ದಾಣದಿಂದ ಪುಟ್ಟಪರ್ತಿ ಮೂಲಕ ಬೆಂಗಳೂರಿಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸಿದ್ದರು. ಮರುದಿನ ಅವರನ್ನು ಮತ್ತೊಂದು ವಿಮಾನ ಚಾಲನೆಗೆ ನಿಯೋಜಿಸಿದ್ದರಿಂದ, ಮೂವರೂ ಹೋಟೆಲ್‌ನಲ್ಲಿ ತಂಗಿದ್ದರು.

ಅಂದು ರಾತ್ರಿ, ಪೈಲಟ್ ರೋಹಿತ್ ಶರಣ್ ಎಂಬಾತ ಧೂಮಪಾನ ಮಾಡಲು ತನ್ನೊಂದಿಗೆ ಹೊರಗೆ ಬರುವಂತೆ ಮಹಿಳಾ ಸಹ-ಪೈಲಟ್‌ಅನ್ನು ಒತ್ತಾಯಿಸಿದ್ದಾನೆ. ಆತನ ಮಾತಿಗೆ ಮಣಿದು ಆತನೊಂದಿಗೆ ಹೊರ ಹೋಗಲು ಸಂತ್ರಸ್ತೆ ಒಪ್ಪಿಕೊಂಡಿದ್ದಾರೆ. ಆದರೆ, ಆತ ಹೊರಗೆ ಕರೆದೊಯ್ಯುವ ಬದಲು, ತಾನು ತಂಗಿದ್ದ ಕೊಠಡಿ ಬಳಿ ಹೋಗಿದ್ದಾನೆ. ಆತನ ಕೊಠಡಿಯ ಬಾಗಿಲ ಬಳಿ ಹೋಗುತ್ತಿದ್ದಂತೆಯೇ, ಆರೋಪಿಯು ಆಕೆಯನ್ನು ಬಲವಂತವಾಗಿ ಕೊಠಡಿಯೊಳಕ್ಕೆ ಎಳೆದಿದ್ದಾನೆ. ಆಕೆಯ ಮೇಲೆ ಹಲ್ಲೆಗೈದು, ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತೆಯು ನವೆಂಬರ್ 20ರಂದು ಹೈದರಾಬಾದ್‌ಗೆ ಮರಳಿದ್ದು, ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ವಿಮಾನ ಮ್ಯಾನೇಜ್‌ಮೆಂಟ್‌ಗೆ ದೂರು ನೀಡಿದ್ದಾರೆ. ಬಳಿಕ, ಬೇಗಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದೀಗ, ಬೆಂಗಳೂರು ಪೊಲೀರಿಗೆ ವರ್ಗಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...