ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

Date:

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಮುದುವೆಯಾಗುವುದಾಗಿ ನಂಬಿಸಿ 7 ತಿಂಗಳ ಗರ್ಭಿಣಿಯಾದ ಬಳಿಕ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಕಾಮುಕ ಆರೋಪಿಯನ್ನು ಬೆಂಗಳೂರು ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಈ ಘಟನೆ ನಡೆದಿದೆ. 36 ವರ್ಷದ ವಿವಾಹಿತ ಮಹಿಳೆಯೊಬ್ಬರು ಖಾಸಗಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ, ಪರಿಚಯವಾದ ಮಹೇಶ ಎಂಬಾತ ಆ ಮಹಿಳೆಯ ಜತೆಗೆ ಸ್ನೇಹ ಬೆಳೆಸಿ ಬಳಿಕ ಪ್ರೀತಿ ಎಂದು ಆಕೆಯ ಹಿಂದೆ ಬಿದ್ದಿದ್ದಾನೆ.

ನೀನು ದಲಿತ ಜನಾಂಗಕ್ಕೆ ಸೇರಿದರೂ ಪರವಾಗಿಲ್ಲ, ನಿನ್ನ ಗಂಡನನ್ನು ಬಿಟ್ಟು ಬಾ, ನಾನು ನಿನ್ನನ್ನೂ ಮದುವೆಯಾಗುತ್ತೇನೆ ಎಂದು ಮಹೇಶ್ ಮಹಿಳೆಗೆ ಹೇಳಿದ್ದಾನೆ. ಮಹಿಳೆ ಇಷ್ಟವಿಲ್ಲ ಎಂದು ಹೇಳಿದ್ದರೂ ಬಿಟ್ಟುಬಿಡದೆ ಆಕೆಯ ಬೆನ್ನುಬಿದ್ದಿದ್ದಾನೆ.

ಈ ವಿಚಾರ ತಿಳಿದ ಮಹಿಳೆಯ ಪತಿ ಜಗಳ ಮಾಡಿ ಆಕೆಯನ್ನು ತೊರೆದಿದ್ದಾನೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡ ಆರೋಪಿ ಆಕೆಯ ಜತೆಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಮಹಿಳೆ ಗರ್ಭಿಣಿಯಾಗಿದ್ದಾಳೆ. ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ.

ಮಹಿಳೆ ಈ ವಿಚಾರವನ್ನು ಆರೋಪಿ ಮಹೇಶ ತಂಗಿಗೆ ತಿಳಿಸಿದ್ದಾರೆ. ಮಹೇಶನ ತಂಗಿ ಮಹಿಳೆಗೆ ಹೀನ ಜಾತಿಯವಳು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಈ ಘಟನೆ ಬಳಿಕ ಮಹೇಶ ಮತ್ತು ಮಹಿಳೆ ಇಬ್ಬರೂ ಬಾಡಿಗೆ ಮನೆ ಮಾಡಿ ಸಂಸಾರ ನಡೆಸಿದ್ದಾರೆ.

ಕೆಲ ದಿನಗಳ ಬಳಿಕ ಮಹೇಶ್ ಮನೆಗೆ ಬರುವುದನ್ನೇ ನಿಲ್ಲಿಸಿದ್ದಾನೆ. ಇದರಿಂದ ಅನುಮಾನಗೊಂಡ ಮಹಿಳೆ ಕೆಲವರನ್ನು ವಿಚಾರಿಸಿದಾಗ ಮಹೇಶಗೆ ಈಗಾಗಲೇ ಮದುವೆಯಾಗಿರುವ ವಿಚಾರ ತಿಳಿದುಬಂದಿದೆ. ಇದರಿಂದ ಮನನೊಂದು ಆರೋಪಿ ಮಹೇಶ್ ಹಾಗೂ ಆತನ ತಂಗಿ ವಿರುದ್ಧ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

ಮಹಿಳೆ ನೀಡಿದ ದೂರಿನ ಮೇಲೆ ಆರೋಪಿ ವಿರುದ್ಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ನೆಲಮಂಗಲ ಟೌನ್ ಪೊಲೀಸ್ ಅಧಿಕಾರಿಯೊಬ್ಬರು, “ದಲಿತ ಮಹಿಳೆಯೆಂದು ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಮೋಸ ಮಾಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...