ಬೆಂಗಳೂರು | ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ಧರಣಿ

Date:

  • ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗೆ ಸರ್ಕಾರ ಒತ್ತು ನೀಡಬೇಕು
  • ಬೈಕ್​ ಸುಡುವುದಾಗಿ ಬೆದರಿಕೆ ಹಾಕಿದ್ದ ಒರ್ವ ಆಟೋ ಚಾಲಕ

ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ನೇತೃತ್ವದಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ, ಸೋಮವಾರ ನಗರದ ಪ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಈ ಬಗ್ಗೆ ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಸಾವಿರಾರು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ನಿರಂತರವಾಗಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ಹಲ್ಲೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವಿಡಿಯೋಗಳು ವೈರಲ್ ಆಗಿವೆ. ಕೆಲವು ದಿನಗಳ ಹಿಂದೆ, ಒರ್ವ ಆಟೋ ಚಾಲಕ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಬೈಕ್ ಚಾಲಕನ ಹೆಲ್ಮೆಟ್ ಅನ್ನು ಒಡೆದು ಹಾಕಿದ್ದ ಘಟನೆ ನಡೆದಿತ್ತು. ಇಂದಿರಾನಗರ ಮೆಟ್ರೊ ನಿಲ್ದಾಣದ ಬಳಿ ಒರ್ವ ವಿದೇಶಿ ಯುವಕನ ಮೊಬೈಲ್ ಅನ್ನು ಆಟೋ ಚಾಲಕ ಒಡೆದು ಹಾಕಿ. ಆತನ ಮೇಲೆ ಕೈ ಮಾಡಲು ಮುಂದಾಗಿದ್ದನು. ಬೈಕ್​​ ಟ್ಯಾಕ್ಸಿ ರೈಡರ್ ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ವಾಹನವನ್ನು ಬಳಸಿದ್ದಕ್ಕಾಗಿ ಆತನನ್ನು ಅವಾಚ್ಯವಾಗಿ ನಿಂದಿಸಿದಲ್ಲದೇ, ಬೈಕ್​ ಸುಡುವುದಾಗಿ ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಹೀಗೆ ನಗರದಲ್ಲಿ ಬೈಕ್​​ ಟ್ಯಾಕ್ಸಿ ರೈಡರ್​ಗಳ ಮೇಲೆ ಆಟೋ ಚಾಲಕರು ಪದೇ ಪದೇ ಕಿರುಕುಳ ನೀಡುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ಈ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಕ್ಕೆ ಆಗ್ರಹಿಸಿ ಬೈಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟೋ ಚಾಲಕರು ತಮ್ಮ ಸಮಸ್ಯೆಗೆ ಸಾರಿಗೆ ಇಲಾಖೆ ಜೊತೆ ಹಾಗೂ ಸರ್ಕಾರದ ಜೊತೆ ಮಾತಾಡಿ ಪರಿಹರಿಸಿಕೊಳ್ಳಡಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ದೌರ್ಜನ್ಯ ಮಾಡಿದರೆ ಏನು ಪ್ರಯೋಜನ ಎಂದು ಬೈಕ್ ಟ್ಯಾಕ್ಸಿ ಚಾಲಕರು ಪ್ರಶ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...