ಬೆಂಗಳೂರು | ರೈಡ್ ಕ್ಯಾನ್ಸಲ್ ಆಗದ ರ‍್ಯಾಪಿಡೋದಿಂದ ‘ಆಟೋ ಪ್ಲಸ್’ ಹೊಸ ಸೇವೆ ಆರಂಭ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಜನರು ಎಲ್ಲಿಗಾದರೂ ತುರ್ತಾಗಿ ಹೋಗಬೇಕಾಗಿರುವ ಸಂದರ್ಭದಲ್ಲಿ ಆ್ಯಪ್ ಆಧಾರಿತ ಆಟೋ ಅಥವಾ ಕ್ಯಾಬ್‌ಗೆ ಮೊರೆ ಹೋಗುವುದು ಹೆಚ್ಚು. ಈ ವೇಳೆ, ಚಾಲಕರು ರೈಡ್‌ ಕ್ಯಾನ್ಸಲ್ ಮಾಡುವ ಸಾಧ್ಯತೆ ಹೆಚ್ಚಾಗಿ ಇರುತ್ತದೆ. ಇನ್ನು ನಗರದಲ್ಲಿ ಓಡಾಡುವ ಆಟೋಗಳು ಗ್ರಾಹಕರು ಕರೆದ ಕಡೆ ಬರುವುದಿಲ್ಲ. ಬಂದರೂ ಮೀಟರ್ ಮೇಲೆ ಇಷ್ಟು ಹಣ ಜಾಸ್ತಿ ಕೊಡಬೇಕು ಎಂದು ಕೇಳುತ್ತಾರೆ. ಈ ಎಲ್ಲ ಸಮಸ್ಯೆಗಳ ಮಧ್ಯೆ ಪ್ರಯಾಣಿಕರಿಗೆ ಹೆಚ್ಚಿನ ದರದೊಂದಿಗೆ ರೈಡ್ ಕ್ಯಾನ್ಸಲ್ ಆಗುವುದಿಲ್ಲ ಎಂದು ರ‍್ಯಾಪಿಡೋ ಭರವಸೆ ನೀಡಿ, ‘ಆಟೋ ಪ್ಲಸ್’ ಸೇವೆ ಆರಂಭ ಮಾಡಿದೆ.

ಅಪ್ಲಿಕೇಶನ್ ಆಧಾರಿತ ಅಗ್ರಿಗೇಟರ್ ರ‍್ಯಾಪಿಡೋ ಬೆಂಗಳೂರಿನಲ್ಲಿ ‘ಆಟೋ ಪ್ಲಸ್’ ಸೇವೆನ್ನು ಪ್ರಾರಂಭಿಸಿದೆ. ಇದು ಪ್ರೀಮಿಯಂ ಆಟೋರಿಕ್ಷಾ ಸೇವೆಯಾಗಿದ್ದು, ರೈಡ್ ಬುಕ್ ಮಾಡಿದ ತಕ್ಷಣ ಆಟೋ ಚಾಲಕರಿಂದ ಸವಾರಿ ಅಥವಾ ರೈಡ್ ರದ್ದಾಗುವುದಿಲ್ಲ ಎಂದು ಖಾತರಿಪಡಿಸುತ್ತದೆ. ಆಟೋ ಪ್ಲಸ್ ಸೇವೆಯು ಸಾಮಾನ್ಯ ಆಟೋ ದರಗಳಿಗೆ ಹೋಲಿಸಿದರೆ ಗ್ರಾಹಕರಿಗೆ 25 ರಿಂದ 30 ರಷ್ಟು ದುಬಾರಿಯಾಗಲಿದೆ.

ಆ್ಯಪ್‌ ಆಧಾರಿತ ಆಟೋ ಸೇವೆ ನೀಡುತ್ತಿದ್ದ ಓಲಾ, ಉಬರ್‌ ಕಂಪನಿಗಳು 2 ಕಿ.ಮೀ ಗೆ ಪ್ರಯಾಣಿಕರಿಂದ ಕನಿಷ್ಠ ₹100 ದರ ವಿಧಿಸಿ ಜನರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿದ್ದವು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ಪರಿಣಾಮ, ಸಾರಿಗೆ ಇಲಾಖೆಯು ಓಲಾ, ಉಬರ್‌ ಕಂಪನಿಗಳ ಆಟೋ ಸೇವೆ ಸ್ಥಗಿತಕ್ಕೆ ಆದೇಶಿಸಿತ್ತು. ಆಟೋ ಸೇವೆ ಬ್ಯಾನ್ ಮಾಡಿದ್ದ ಆರ್‌ಟಿಒ ನಿರ್ಧಾರಕ್ಕೆ ಓಲಾ, ಉಬರ್ ವಿರೋಧ ವ್ಯಕ್ತಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣವು ಹೈಕೋರ್ಟ್‌ ಮೆಟ್ಟಿಲೇರಿತು. ಕಂಪನಿಗಳೊಂದಿಗೆ ಚರ್ಚಿಸಿ ದರ ನಿಗದಿ ಮಾಡುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ, ಆ್ಯಪ್‌ ಆಧಾರಿತ ಸೇವೆ ಒದಗಿಸುತ್ತಿರುವ ಓಲಾ, ಉಬರ್‌ ಕಂಪನಿಗಳ ಆಟೋ ರಿಕ್ಷಾ ಪ್ರಯಾಣ ದರವನ್ನು ರಾಜ್ಯ ಸರಕಾರ ನಿಗದಿಪಡಿಸಿತ್ತು.

ಸಾಮಾನ್ಯ ಆಟೋಗಳಲ್ಲಿ ಕನಿಷ್ಠ ಪ್ರಯಾಣ ದರವು 2 ಕಿ.ಮೀಗೆ ₹30 ಇದೆ. ಅಗ್ರಿಗೇಟರ್‌ ಕಂಪನಿಗಳು ₹30 ಜತೆಗೆ ಶೇ. 5ರಷ್ಟು ಸೇವಾ ಶುಲ್ಕ ಹಾಗೂ ಶೇ.5 ರಷ್ಟು ಜಿಎಸ್‌ಟಿ ಶುಲ್ಕವನ್ನಷ್ಟೇ ಪ್ರಯಾಣಿಕರಿಂದ ಸಂಗ್ರಹಿಸಬೇಕು. ಇದರಂತೆ ಕನಿಷ್ಠ ದರವು ₹33 ಆಗಲಿದೆ. ನಂತರದ ಪ್ರತಿ ಕಿ.ಮೀಗೆ ₹15 ಜತೆಗೆ ಶೇ.10 ರಷ್ಟು ಹೆಚ್ಚುವರಿ ದರವನ್ನು ಪ್ರಯಾಣಿಕರು ಪಾವತಿಸಬೇಕು ಎಂದು ಸರ್ಕಾರ ನವೆಂಬರ್ 2021ರಲ್ಲಿ ಆಟೋ ದರ ನಿಗದಿ ಮಾಡಿ ಸೂಚನೆ ನೀಡಿತ್ತು.

ಆಯಾ ಕಾಲಕ್ಕೆ ನಿಗದಿಯಾಗುವ ಆಟೋ ಪ್ರಯಾಣ ದರದ ಮೇಲೆ ಶೇ. 10 ರಷ್ಟನ್ನು ಮಾತ್ರ ಹೆಚ್ಚಳ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮೋಟಾರು ವಾಹನಗಳ ಕಾಯಿದೆ 1988 ರ ಕಲಂ 67 ರಡಿ ಹೊರಡಿಸಿರುವ ಆದೇಶದಂತೆ ಈ ಅವಕಾಶ ಕಲ್ಪಿಸಲಾಗಿದೆ. ಅಗ್ರಿಗೇಟರ್‌ ಸೇವೆ ಒದಗಿಸಲು ಪರವಾನಗಿ ಪಡೆದಿರುವ ಸಂಸ್ಥೆಗಳು ಮಾತ್ರ ಈ ದರದ ಆಧಾರದ ಮೇಲೆ ಆಟೋ ಸೇವೆ ಕಲ್ಪಿಸಬಹುದಾಗಿದೆ.

ಆದರೆ, ರ‍್ಯಾಪಿಡೋನ ನಿಯಮಿತ ಆಟೋರಿಕ್ಷಾ ಕನಿಷ್ಠ ಶುಲ್ಕ ₹46 ಆಗಿದ್ದು, ಆಟೋ ಪ್ಲಸ್ ಕನಿಷ್ಠ ಬೇಡಿಕೆ ₹71 ಇದೆ. ಇವೆರಡೂ ಕರ್ನಾಟಕ ಹೈಕೋರ್ಟ್ ನಿಗದಿಪಡಿಸಿದ ಆಟೋ ಅಗ್ರಿಗೇಟರ್ಗಳ ದರಕ್ಕಿಂತ ಹೆಚ್ಚಾಗಿದೆ.

ಹೈಕೋರ್ಟ್‌ ತೀರ್ಪು ನೀಡಿದ ಬಳಿಕ ಓಲಾ ಮತ್ತು ಉಬರ್ ನ್ಯಾಯಾಲಯದ ಆದೇಶದ ದರಗಳಿಗೆ ಬದ್ಧವಾಗಿವೆ. ಇತ್ತೀಚೆಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟ ಪ್ರಾರಂಭ ಮಾಡಿರುವ ‘ನಮ್ಮ ಯಾತ್ರಿ’ ಸಹ ಗ್ರಾಹಕರಿಂದ ಹೆಚ್ಚಿನ ದರವನ್ನು ಪಡೆಯುತ್ತಿದೆ ಎಂಬ ದೂರುಗಳು ಕೇಳಿಬಂದಿವೆ.

ಆಟೋ ಪ್ಲಸ್‌ ಸೇವೆಗಳು ಗ್ರಾಹಕರು ಮತ್ತು ಆಟೋ ಚಾಲಕರಿಗೆ ಇಬ್ಬರಿಗೂ ಪ್ರಯೋಜನವಿದೆ. ಗ್ರಾಹಕರಿಗೆ ರೈಡ್ ಖಾತ್ರಿ ಪಡಿಸುತ್ತಿದೆ ಮತ್ತು ಚಾಲಕರಿಗೆ ಆದಾಯದ ಸ್ಥಿರತೆಯನ್ನು ಒದಗಿಸುತ್ತದೆ ಎಂದು ಸಂಸ್ಥೆ ಹೇಳಿದೆ

ಈ ಸುದ್ದಿ ಓದಿದ್ದೀರಾ? ರ‍್ಯಾಪಿಡೋ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಸ್ತ್ರಸಂಹಿತೆಗೆ ಎಎಪಿ ವಿರೋಧ

ಪ್ರಸ್ತುತ ಆಟೋ ಪ್ಲಸ್‌ನಲ್ಲಿ 10,000 ಆಟೋ ಚಾಲಕರು ನೋಂದಣಿಯಾಗಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ 50,000 ಚಾಲಕರನ್ನು ಸೇವೆಗೆ ಸೇರಿಸಲು ಕಂಪನಿ ಯೋಜನೆ ರೂಪಿಸಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 2023 ರಲ್ಲಿ ಹೈದರಾಬಾದ್ನಲ್ಲಿಆಟೋ ಪ್ಲಸ್ಸೇವೆಯನ್ನು ಪ್ರಾರಂಭಿಸಲಾಗಿತ್ತು. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ, ಬೆಂಗಳೂರಿನಲ್ಲಿಯೂ ಸೇವೆ ಆರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...