ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

Date:

  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ
  • ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಏ. 15ರಂದು (ಇಂದು) ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ.ರಸ್ತೆ ಯಿಂದ ಕಬ್ಬನ್‌ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲ ರಸ್ತೆ ವಿಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧಿಸಲಾಗಿದೆ.

ಸಂಚಾರ ಮಾರ್ಪಾಡು

ಯಾವುದೇ ಮಾದರಿಯ ಗೂಡ್ಸ್ ವಾಹನಗಳು ಕ್ವೀನ್ಸ್ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ಸಿದ್ದಲಿಂಗಯ್ಯ ಸರ್ಕಲ್‌ ಕಡೆಯಿಂದ ಎಂ.ಜಿ ರಸ್ತೆಗೆ ಹೋಗಲು ಬಯಸುವ ಗೂಡ್ಸ್‌ ವಾಹನಗಳು ರೆಸಿಡೆನ್ಸಿ ರಸ್ತೆಯ ಮೂಲಕ ಸಂಚರಿಸಬಹುದು.

ಸಿದ್ದಲಿಂಗಯ್ಯ ಸರ್ಕಲ್ ಕಡೆಯಿಂದ ಎಂ.ಜಿ ರಸ್ತೆಗೆ ಹೋಗಲು ಬಯಸುವ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳನ್ನು ರೆಸಿಡೆನ್ಸಿ ರಸ್ತೆಯ ಮೂಲಕ ಎಂಜಿ ರಸ್ತೆಗೆ ಕಡೆಗೆ ಸಂಚರಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ತಲೆಮಾರಿಗೆ ಹಳೆಯ ನೆನಪು 4 | ಸಿಹಿ ನೀರಿನ ಕಣಜ ಅಕ್ಕಿತಿಮ್ಮನಹಳ್ಳಿ ಕೆರೆ ಮೇಲಿದೆ ‘ಹಾಕಿ ಕ್ರೀಡಾಂಗಣ’

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು (ಸ್ಥಳ ಲಭ್ಯತೆಯ ಮೇಲೆ)

ಕಿಂಗ್ಸ್ ರಸ್ತೆ, ಬಿಆರ್‌ಎ ಮೈದಾನ ಮೇಟ್ರೋ ಲೇನ್ ಕೆಳಗೆ, ಕಂಠೀರವ ಸ್ಟೇಡಿಯಂ ಯು.ಬಿ.ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ. ಬಿಲ್ಡಿಂಗ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದ್ದು, ಸಾರ್ವಜನಿಕರು ಸಹಕರಿಸಲು ನಗರ ಸಂಚಾರ ಪೊಲೀಸ್‌ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...