ಬೆಂಗಳೂರು | ಪೊಲೀಸ್ ವೇಷ ಧರಿಸಿ ಉದ್ಯಮಿ ಮನೆಯಲ್ಲಿ ದರೋಡೆ: ದೂರು ದಾಖಲು

Date:

ಪೊಲೀಸರ ವೇಷ ಧರಿಸಿದ ದರೋಡೆಕೋರರು ಉದ್ಯಮಿ ಮನೆಯೊಳಗೆ ನುಗ್ಗಿ 700 ಗ್ರಾಂ ಚಿನ್ನಾಭರಣ ಮತ್ತು 60 ಲಕ್ಷ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.

ಉದ್ಯಮಿ ಮನೋಹರ್ ಎಂಬುವವರ ಮನೆಯಲ್ಲಿ ಚಿನ್ನ ಮತ್ತು ನಗದು ಹಣ ಕಳ್ಳತನವಾಗಿದೆ. ಇವರು ಎಚ್ಎಂಟಿ ಲೇಔಟ್ನಲ್ಲಿರುವ ಎಸ್.ಎನ್.ಆರ್ ಪಾಲಿಫಿಲಮ್ಸ್ ಪ್ಯಾಕೇಜಿಂಗ್ ಕಂಪನಿ ಮಾಲೀಕರಾಗಿದ್ದಾರೆ.

ಉದ್ಯಮಿ ಮನೋಹರ ಅವರು ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡ 7 ಜನ ಖದೀಮರು, ಪೊಲೀಸರ ವೇಷ ಧರಿಸಿ ರಾತ್ರಿ 7:30ರ ಸುಮಾರಿಗೆ ಮನೆಗೆ ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಮನೋಹರ್ ಪತ್ನಿ ಸುಜಾತಾ ಮತ್ತು ಮಗ ರೂಪೇಶ್ ಇಬ್ಬರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ವೇಷ ಧರಿಸಿ ಮನೆಗೆ ನುಗ್ಗಿದ ಖದೀಮರು ಏಕಾಏಕಿ ಡ್ರ್ಯಾಗರ್ ಮತ್ತು ಮಚ್ಚು ತೋರಿಸಿ ಹಣ ಮತ್ತು ಚಿನ್ನ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ, ರೂಪೇಶ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿರಿಯಾನಿ ಕೇಳಿದರೆ ಕುಷ್ಕಾ ನೀಡಿದ ಹೋಟೆಲ್ ಮಾಲೀಕ; ₹1000 ದಂಡ ವಿಧಿಸಿದ ನ್ಯಾಯಾಲಯ

700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ನಗದು ದರೋಡೆ ಮಾಡಿದ ದರೋಡೆಕೋರರು ಮನೆಯಲ್ಲಿನ ಸಿಸಿಟಿವಿ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.

ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...