ಬೆಂಗಳೂರು | ರೋಬೋಟ್‌ ನೆರವಿನಿಂದ 30 ವರ್ಷದ ರೋಗಿಗೆ ಮಗುವಿನ ಮೂತ್ರಪಿಂಡ ಕಸಿ

Date:

  • ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ರೋಗಿಗೆ ಮಗುವಿನ ಕಿಡ್ನಿ ಕಸಿ
  • ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮೂತ್ರಪಿಂಡ ಕಸಿ

ರಾಜಧಾನಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ರೋಬೋಟ್‌ ನೆರವಿನಿಂದ 13 ತಿಂಗಳ ಮಗುವಿನ ಮೂತ್ರಪಿಂಡವನ್ನು 30 ವರ್ಷದ ರೋಗಿಯೊಬ್ಬರಿಗೆ ಕಸಿ ಮಾಡುವಲ್ಲಿ ಯಶಸ್ವಿಯಾಗಿದೆ.

30 ವರ್ಷದ ರೋಗಿಯೊಬ್ಬರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಇವರಿಗೆ ಆಸ್ಪತ್ರೆಯ ಹಿರಿಯ ನಿರ್ದೇಶಕ (ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ) ಡಾ. ಮೋಹನ್ ಕೇಶವಮೂರ್ತಿ ಅವರು ನಾಲ್ಕು ಗಂಟೆಗಳಲ್ಲಿ ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು 13 ತಿಂಗಳ ಮಗುವಿನ ಮೂತ್ರಪಿಂಡವನ್ನು ಕಸಿ ಮಾಡಿದ್ದು, ಈ ಕಾರ್ಯವಿಧಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

30 ವರ್ಷದ ರೋಗಿಯೊಬ್ಬರು ರಕ್ತಹೀನತೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಹಾಗೆಯೇ ಡಯಾಲಿಸಿಸ್‌ನಿಂದ ತೊಂದರೆ ಅನುಭವಿಸುತ್ತಿದ್ದರು. ಇವರಿಗೆ ಮೂತ್ರಪಿಂಡ ಕಸಿ ಮಾಡುವ ಅವಶ್ಯಕತೆ ಇತ್ತು. ಹಾಗಾಗಿ, ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ ಮಗುವಿನ ಕಿಡ್ನಿ ದಾನ ಮಾಡಲು ಪೋಷಕರು ಒಪ್ಪಿದ ಹಿನ್ನೆಲೆ ಮಗುವಿನ ಮೂತ್ರಪಿಂಡವನ್ನು ರೋಗಿಗೆ ಕಸಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾತನಾಡಿದ ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಡಾ ಮೋಹನ್ ಕೇಶವಮೂರ್ತಿ, “ನಾಲ್ಕು ಗಂಟೆಗಳಲ್ಲಿ ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮೂತ್ರಪಿಂಡ ಕಸಿ ಮಾಡಲಾಗಿದೆ. ಮೂತ್ರಪಿಂಡವನ್ನು ದಾನ ಮಾಡಿದ ವ್ಯಕ್ತಿಯ ವಯಸ್ಸು ಮುಖ್ಯವಲ್ಲ. ಇಲ್ಲಿ ಮೂತ್ರಪಿಂಡದ ಕೆಲಸ ರಕ್ತವನ್ನು ಶುದ್ಧೀಕರಿಸುವುದಾಗಿದೆ. ಮೂತ್ರಪಿಂಡವನ್ನು ವಯಸ್ಕರ ದೇಹದಲ್ಲಿ ಕಸಿ ಮಾಡಿದ ನಂತರ ಅದು ಅವರ ಕಾರ್ಯಕ್ಕೆ ಸರಿಯಾಗಿ ಹೊಂದಿಕೊಳ್ಳುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ವಿದ್ಯಾರ್ಥಿ ಮೇಲೆ ಹಲ್ಲೆ: 7 ಆರೋಪಿಗಳ ಬಂಧನ

“ಮೂತ್ರಪಿಂಡದ ಕಾರ್ಯ ಸುಮಾರು 300 ಪ್ರತಿಶತದಷ್ಟು ವಿಸ್ತರಿಸುತ್ತದೆ. ದಾನಿ ಮತ್ತು ಸ್ವೀಕರಿಸುವವರ ರಕ್ತನಾಳ ಮತ್ತು ಮೂತ್ರಪಿಂಡದ ಮೂತ್ರನಾಳಗಳನ್ನು ದಾನಿಯ ಮೂತ್ರಕೋಶಕ್ಕೆ ಸಂಪರ್ಕಿಸಲು ರೋಬೋಟ್‌ ಸಹಾಯ ಪಡೆಯಲಾಗಿದೆ. ಎರಡೂ ಮೂತ್ರಪಿಂಡಗಳನ್ನು ಒಟ್ಟಿಗೆ ಕಸಿ ಮಾಡುವ ಎನ್-ಬ್ಲಾಕ್ ಪ್ರಕ್ರಿಯೆಯು ಅಪರೂಪವಾಗಿದೆ. ಮೂತ್ರಪಿಂಡಗಳ ಬೆಂಚ್ ಶಸ್ತ್ರಚಿಕಿತ್ಸೆಗೆ ಅತ್ಯಂತ ನಿಖರತೆಯ ಅಗತ್ಯವಿರುತ್ತದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನ ಕೈಗೊಳ್ಳಲು ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ

ಮಾರ್ಚ್‌ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರವಾಗಿ ತೀರ್ಮಾನ...

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...