ಬೆಂಗಳೂರು | ಸಾಲು ಸಾಲು ರಜೆ; ಮೂರು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

Date:

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ಕೆಲಸ ಅರಸಿ ಬಂದು ನಗರದಲ್ಲಿರುವ ಐಟಿ-ಬಿಟಿ ಸೇರಿದಂತೆ ಹಲವಾರು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನಗರದಲ್ಲಿ ಮೂಲ ಬೆಂಗಳೂರಿಗರು ಸಿಗುವುದಕ್ಕಿಂತ ವಲಸೆ ಬಂದ ಕಾರ್ಮಿಕರೇ ದುಪ್ಪಟ್ಟಾಗಿದ್ದಾರೆ. ಇನ್ನು ಗುರುವಾರದಿಂದ ಸೋಮವಾರದವರೆಗೆ ಸಾಲು ಸಾಲು ರಜೆ ಇರುವ ಹಿನ್ನೆಲೆ, ಬಹುತೇಕ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಬುಧವಾರ ಊರಿಗೆ ತೆರಳಲು ಒಮ್ಮೆಲೆ ನೂರಾರು ಜನ ರಸ್ತೆಗೆ ಇಳಿದ ಕಾರಣ ನಗರದ ಬಹುತೇಕ ಭಾಗಗಳಲ್ಲಿ 2 ಗಂಟೆಗಳಿಗೂ ಹೆಚ್ಚು ಕಾಲ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ಸೆ.28 ರಂದು ಈದ್‌ ಮಿಲಾದ್ ಹಬ್ಬ, ಸೆ.29 ರಂದು ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋರಾಟಗಾರ ವಾಟಾಳ್​ ನಾಜರಾಜ್​ ನೇತೃತ್ವದಲ್ಲಿ ನಾನಾ ಸಂಘಟನೆಗಳು ‘ಕರ್ನಾಟಕ ಬಂದ್’​ಗೆ ಕರೆ ನೀಡಿವೆ. ಶನಿವಾರ ಮತ್ತು ಭಾನುವಾರ ಹಲವಾರು ಖಾಸಗಿ ಕಂಪನಿಗಳಿಗೆ ರಜೆ ಇದೆ. ಇನ್ನು ಅ.​​2 ರಂದು ಗಾಂಧಿ ಜಯಂತಿ ಹಿನ್ನೆಲೆ ರಜೆ ಇದೆ. ಹೀಗೆ ಸಾಲು ಸಾಲು ರಜೆಗಳು ಇರುವುದರಿಂದ ಜನರು ಬೆಂಗಳೂರು ಬಿಟ್ಟು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಬುಧವಾರ ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಯಿತು. ನೂರಾರು ಜನ ರಸ್ತೆಗೆ ಬಂದಿದ್ದರಿಂದ ಕಾರ್ಪೊರೇಷನ್ ವೃತ್ತದಿಂದ ಮೆಜೆಸ್ಟಿಕ್ ಮಾರ್ಗದಲ್ಲಿ ಸಂಪೂರ್ಣ ವಾಹನ ದಟ್ಟಣೆ ಉಂಟಾಗಿತ್ತು. ಇದರಿಂದ ಬೆಂಗಳೂರಿನ ಪ್ರತಿ ರಸ್ತೆಯಲ್ಲೂ ಸಂಚಾರ ಮಂದಗತಿಯಲ್ಲಿ ಸಾಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಬೆಂಗಳೂರು ಭಾರೀ ಸಂಚಾರ ದಟ್ಟಣೆಗೆ ಸಾಕ್ಷಿಯಾಯಿತು. ಕೀಲೋ ಮೀಟರ್‌ ವರೆಗೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದ ಪರಿಣಾಮ ಗಂಟೆಗಟ್ಟಲೇ ರಸ್ತೆಯಲ್ಲಿ ಕಾದ ವಾಹನ ಸವಾರರು, ಶಾಲಾ ಮಕ್ಕಳು ಹೈರಾಣಾದರು.

ಮಹದೇವಪುರ ವಲಯದಲ್ಲಿ ಬುಧವಾರ ಸಂಜೆ ಸಾಧಾರಣ ಮಳೆ ಸುರಿಯಿತು. ಇದರಿಂದ ಹೊರ ವರ್ತುಲ ರಸ್ತೆ ಮತ್ತು ಆರ್ಟಿರಿಯಲ್ ರಿಂಗ್ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಗಣೇಶ ವಿಸರ್ಜನೆ ಮತ್ತು ಜನ ಸಂಚಾರ ಹೆಚ್ಚಾಗಿ ಇರುವುದು ವಾಹನ ದಟ್ಟಣೆಗೆ ಮತ್ತಷ್ಟು ಕಾರಣವಾಗಿದೆ. ಸಾಯಂಕಾಲ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಾರೀ ದಟ್ಟಣೆ ಉಂಟಾಗಿತ್ತು.

ಈ ಸಂಚಾರ ದಟ್ಟಣೆ ಬಗ್ಗೆ ಹಲವು ಜನ ಟ್ವೀಟ್‌(ಎಕ್ಸ್) ಮಾಡಿದ್ದು, “ಕೇವಲ 8 ಕಿ.ಮೀ ಕ್ರಮಿಸಲು ಕಳೆದ 2.5 ಗಂಟೆಗಳಿಂದ ಓಆರ್‌ಆರ್‌ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದೆ. ಇನ್ನೂ ಮನೆಗೆ ತಲುಪಿಲ್ಲ. ಇಂದಿನ ಟ್ರಾಫಿಕ್ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ” ಎಂದು ತ್ರಿಲೋಚನ ದೇಕಾ ಎಂಬ ಟ್ವೀಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

“ಓಆರ್‌ಆರ್‌, ಸರ್ಜಾಪುರ, ವರ್ತೂರು ರಸ್ತೆ ಸಂಚಾರ ದಟ್ಟಣೆಗೆ ಕುಖ್ಯಾತಿಗೆ ಪಡೆದಿವೆ. ಇತರ ಎಲ್ಲ ಪ್ರಮುಖ ರಸ್ತೆಗಳು, ಸರ್ವೀಸ್ ರಸ್ತೆಗಳಲ್ಲಿ ಹಿಂದೆಂದೂ ಇಲ್ಲದ ಟ್ರಾಫಿಕ್ ಜಾಮ್ ಬುಧವಾರ ಉಂಟಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೆಕ್ ಕಾರಿಡಾರ್ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದಾಗಬೇಕು. ಈ ಸಂಚಾರ ದಟ್ಟಣೆಯೂ ಸರ್ಕಾರದ ಸಂಪೂರ್ಣ ವೈಫಲ್ಯ ತೋರುತ್ತದೆ” ಎಂದು ನಮ್ಮ ಬಳಗೆರೆ ಎಂಬ ಟ್ವಿಟರ್ ಬಳಕೆದಾರರು ಹೇಳಿದ್ದಾರೆ.

“ಮಹದೇವಪುರ ಮತ್ತು ಓಆರ್‌ಆರ್‌ನಲ್ಲಿ ಲಕ್ಷಾಂತರ ಜನರು ಟ್ರಾಫಿಕ್‌ನಲ್ಲಿ ಸಿಲುಕಿ ಬಿದ್ದಿದ್ದಾರೆ. ಕಳೆದ 2 ಗಂಟೆಗಳಲ್ಲಿ 3-4 ಕಿಮೀ ಚಲಿಸಲಾಗಿದೆ. ಸಂಪೂರ್ಣ ಪ್ರದೇಶ ವಾಹನ ಸಂಚಾರ ದಟ್ಟಣೆಯಿಂದ ಬಂದ್ ಆಗಿದೆ. ದಟ್ಟಣೆಯನ್ನು ಕಡಿಮೆ ಮಾಡಿ ಮತ್ತು ಟ್ರಾಫಿಕ್ ನಿರ್ವಹಣೆಯ ಬಗ್ಗೆ ಗಂಭೀರವಾಗಿ ಯೋಚಿಸಿ” ಎಂದು ಬೆಳ್ಳಂದೂರು ಉಳಿಸಿ ಟ್ವೀಟ್ ಮಾಡಿದ್ದಾರೆ.

ವಾಹನ ಸಂಚಾರ ದಟ್ಟಣೆ ಉಂಟಾಗಲು ಮತ್ತೊಂದು ಕಾರಣವೆಂದರೆ, ಬೆಂಗಳೂರಿನಲ್ಲಿ ಬುಧವಾರದಂದು ಭಾರತ ಪ್ರವಾಸದಲ್ಲಿರುವ ಹಾಸ್ಯನಟ ಟ್ರೆವರ್ ನೋಹ್ ಅವರು ನಗರದ ಹೊರ ವರ್ತುಲ ರಸ್ತೆಯಲ್ಲಿ ನಡೆಸಬೇಕಿದ್ದ ಪ್ರದರ್ಶನ ರದ್ದುಗೊಳಿಸಿದ್ದರು. ಅವರು ಸಹ ಸುಮಾರು 30 ನಿಮಿಷ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

ಹಾಸ್ಯನಟರ ಕಾರ್ಯಕ್ರಮಕ್ಕೆ ಟಿಕೆಟ್ ಖರೀದಿಸಿದ್ದ ಹಲವಾರು ಬೆಂಗಳೂರು ನಿವಾಸಿಗಳು ಹಾಜರಾಗಲು ತಮ್ಮ ಕಚೇರಿಯಿಂದ ಬೇಗ ಹೊರಟಿದ್ದರು. ಇದು ಅವರ ಪ್ರದರ್ಶನಕ್ಕೆ ಹೋಗುವ ಓಆರ್‌ಆರ್‌ನಲ್ಲಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಿತ್ತು.

ಆಡಳಿತ ನಿರ್ಲಕ್ಷ್ಯಯಿಂದ ಸಂಚಾರ ದಟ್ಟಣೆ ಉಂಟಾಗಿದೆ. ಕಚೇರಿಗೆ, ಮನೆಗೆ ತೆರಳಲು ಸಮಸ್ಯೆಯಾಗಿದೆ. ಸುಮಾರು 5 ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿಯೇ ದಿನ ಕಳೆಯಬೇಕಾಗಿದೆ ಎಂದು ಸಾರ್ವಜನಿಕರು, ಪ್ರಯಾಣಿಕರು ಆಡಳಿತದ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಟ್ರಾಫಿಕ್

ಐಬಿಐ ಸಂಚಾರ ವರದಿಯ ಪ್ರಕಾರ, ಸಂಜೆ 7.30ರಿಂದ ರಾತ್ರಿವರೆಗೆ ಸುಮಾರು 1.5 ಲಕ್ಷದಿಂದ 2 ಲಕ್ಷ ವರೆಗೆ ಓಡಾಡಬೇಕಿದ್ದ ವಾಹನಗಳ ಸಂಖ್ಯೆ ಬುಧವಾರ ರಾತ್ರಿ 3.59 ಲಕ್ಷ ವಾಹನಗಳಿಗೆ ಏರಿಕೆ ಆಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...