ಬೆಂಗಳೂರು | ವಿಜ್ಞಾನಿಯ ಕಾರಿಗೆ ಕಲ್ಲೆಸೆತ; ಮೂವರ ಬಂಧನ

Date:

ವಿಜ್ಞಾನಿಯ ಕಾರಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೊರವಲಯದ ರಾವುತನಹಳ್ಳಿ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಆಗಸ್ಟ್‌ 24ರಂದು ರಾತ್ರಿ 12:45ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ಐವರ ತಂಡ ಮಾರಕಾಸ್ತ್ರಗಳನ್ನು ಹಿಡಿದು ನಿಲ್ಲಿಸಲು ಪ್ರಯತ್ನಿಸಿದರು. ಅವರು ನಿಲ್ಲಿಸದಿದ್ದಾಗ ಬೈಕ್‌ಗಳಲ್ಲಿ ಕಾರನ್ನು ಹಿಂಬಾಲಿಸಿ, ಕಲ್ಲೆಸೆದು ಗಾಜು ಒಡೆದು ಹಾಕಿದ್ದರು.

ದರೋಡೆ ಮಾಡಲು ಐವರ ತಂಡ ವಿಜ್ಞಾನಿಯ ಕಾರನ್ನು ಬೈಕ್‌ನಲ್ಲಿ ಹಿಂಬಾಲಿಸಿತ್ತು. ಕಾರಿನ ಹಿಂಬದಿಯ ಗಾಜಿಗೆ ಕಲ್ಲೆಸಿದಿದ್ದರು. ಜತೆಗೆ ವಿಜ್ಞಾನಿಯ ಮೇಲೆ ಹಲ್ಲೆ ಮಾಡಲು ಪ್ರಯತ್ನ ಮಾಡಲಾಗಿತ್ತು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ವಿಜ್ಞಾನಿ ಅಶುತೋಷ್ ಮಾದನಾಯಕನಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

“ಆರೋಪಿಗಳಾದ ಮೈಲಾರಿ (22), ನವೀನ್ (22) ಹಾಗೂ ಶಿವರಾಜ್ (30) ಬಂಧಿತರು. ಇವರನ್ನು ಸೋಮವಾರ ರಾತ್ರಿ ರಾವುತನಹಳ್ಳಿ ಬಳಿ ದರೋಡೆಗೆ ಯೋಜಿಸುತ್ತಿದ್ದಾಗ ಬಂಧಿಸಲಾಗಿದೆ. ಇವರಿಂದ ಶಸ್ತ್ರಾಸ್ತ್ರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮ ಅಲಿಯಾಸ್ ಸೋನು ಮತ್ತು ಕೀರ್ತಿ ಅಲಿಯಾಸ್ ಉಮೇಶ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೂವರು ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 2030ಕ್ಕೆ ಕೆಐಎನಲ್ಲಿ ಮೂರನೇ ಟರ್ಮಿನಲ್!

ದೂರು ದಾಖಲಿಸುವ ಮೊದಲು ವಿಜ್ಞಾನಿ ಸಿಂಗ್ ಅವರು ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಜತೆಗೆ ಹಾನಿಗೊಳಗಾದ ಕಾರಿನ ಫೋಟೋಗಳನ್ನು ಅಪ್ಲೋಡ್ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...