ಬೆಂಗಳೂರು | ರೈಲಿನ ಮೂಲಕ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿ ಬಂಧನ

Date:

ಹೊಸ ವರ್ಷಾಚರಣೆಗೆ ಮಾದಕ ವಸ್ತುವನ್ನು ಬೆಂಗಳೂರಿಗೆ ರೈಲಿನ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೈಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಒಡಿಸ್ಸಾದ ಸಿಮುಲಿಯಾ ಬಲೇಶ್ವರ ವಾಸಿ ನಿತ್ಯಾನಾದ್ ದಾಸ್(37), ತ್ರಿಪುರದ ನಾರ್ಥ್ ಭಾಗನ್ನ ರಾಜೇಶ್ ದಾಸ್(25), ಬಿಹಾರದ ಕುಮ್ರಾವಿಷ್ಣುಪುರದ ಅಮರ್ಜಿತ್ (23), ಒಡಿಸ್ಸಾದ ಬಾಲಾಂಗಿರ್ ಜಿಲ್ಲೆಯ ನಿಕೇಶ್ ರಾಣಾ (23), ಒಡಿಸ್ಸಾದ ಕೊಂದಮಾಲ್ನ ಜಲಂಧರ್ ಕನ್ಹರ್(20), ಬೈಕುಂಟಾ ಕನ್ಹರ್ ಹಾಗೂ ಸಾಗರ್ ಕನ್ಹರ್ ಎಂಬುವರನ್ನು ಬಂಧಿತ ಆರೋಪಿಗಳು.

ಹೊಸ ವರ್ಷ ಹಿನ್ನೆಲೆಯಲ್ಲಿ ಮಾದಕ ವಸ್ತು ಕಳ್ಳಸಾಗಣೆ ತಡೆಗೆ ರೈಲ್ವೆ ಪೊಲೀಸರು ಡಿ.22 ರಿಂದ ವಿಶೇಷ ತಂಡಗಳನ್ನು ರಚಿಸಿ ಬೆಂಗಳೂರಿಗೆ ಆಗಮಿಸುತ್ತಿದ್ದ ರೈಲುಗಳನ್ನು ಶೋಧ ಮಾಡುತ್ತಿದ್ದಾರೆ. ರೈಲ್ವೆ ಪೊಲೀಸ್ ಘಟಕದ ವಿಶೇಷ ತಂಡ ₹60 ಲಕ್ಷ ಮೌಲ್ಯದ 60.965 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಾಂತಿ ಎಕ್ಸ್‌ಪ್ರೆಸ್, ಶೇಷಾದ್ರಿ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ವಾಸ್ಕೋ-ಡ-ಗಾಮಾ ಅಮರಾವತಿ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಸಾಗಿಸುತ್ತಿದ್ದುದು ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಆರೋಪಿ ನಿತ್ಯಾನಂದ ದಾಸ್ ಮತ್ತು ರಾಜೇಶ್ ಫುಡ್ ಡೆಲೆವರಿ ಬಾಯ್ ಏಜೆಂಟ್ಗಳಂತೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ನೌಕರರ ಮೇಲಿದ್ದ 6,969 ಪ್ರಕರಣ ಖುಲಾಸೆ

ಈ ಸಂಬಂಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆ, ಬೈಯ್ಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಹುಬ್ಬಳ್ಳಿಯಲ್ಲಿ ತಲಾ 1 ಪ್ರಕರಣ ದಾಖಲಾಗಿದೆ. 7 ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...