ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

Date:

ಸಿಲಿಂಡರ್ ಸ್ಪೋಟಗೊಂಡು ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಎಲ್‌ಬಿಎಸ್‌ ಲೇಔಟ್‌ನಲ್ಲಿ ನಡೆದಿದೆ.

ಅಫ್ರೋಜ್, ಪಸಿಯಾ ಭಾನು, ಹಸ್ಮಾ, ಶಾಹಿದ್ ಸೇರಿದಂತೆ ಆರು ಜನರಿಗೆ ಗಾಯಗಳಾಗಿದ್ದು, ಈ ಪೈಕಿ ಪಸಿಯಾ ಭಾನು ಮತ್ತು ಹಸ್ಮಾ ಇಬ್ಬರ ಸ್ಥಿತಿ ಗಂಭೀರವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ದೆಹಲಿ ಮೂಲದ ಹಸ್ಮಾ ಬಾನು ಎಂಬುವವರು ಮನೆ ಕೆಲಸ ಮಾಡಿಕೊಂಡು ಬೆಂಗಳೂರು ಎಲ್‌ಬಿಎಸ್‌ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಇವರ ಮನೆಯ ಸಿಲಿಂಡರ್‌ ಸ್ಟೋಟಗೊಂಡು ಅಕ್ಕಪಕ್ಕದ ಐದು ಮನೆಗಳಿಗೆ ಹಾನಿಯಾಗಿದೆ. ಜತೆಗೆ, ಮನೆಯಲ್ಲಿದ್ದ ಒಟ್ಟು ಏಳು ಮಂದಿಗೆ ಗಂಭೀರ ಗಾಯವಾಗಿದ್ದು, ಎಲ್ಲ ಗಾಯಾಳುಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಮೂಲದ ಹಸ್ಮಾ ಬಾನು ಎಂಬುವವರ ಮನೆಯಲ್ಲಿ ರಾತ್ರಿ ಗ್ಯಾಸ್ ಸೋರಿಕೆಯಾಗಿದ್ದು, ಮನೆಯ ಎಲ್ಲ ಕಿಟಕಿ ಬಾಗಿಲು ಬಂದ್‌ ಮಾಡಿದ್ದರಿಂದ ಸೋರಿಕೆಯಾದ ಅನಿಲ ಹೊರಗೆ ಹೋಗಲು ಆಗಿಲ್ಲ. ಮನೆಗಳು ಚಿಕ್ಕ ಚಿಕ್ಕದಾಗಿರುವ ಕಾರಣಕ್ಕೆ ಎಲ್ಲೆಡೆ ಗ್ಯಾಸ್‌ ಅನಿಲ ಸೇರಿಕೊಂಡಿದೆ. ಎಲ್ಲ ಕಿಟಕಿಗಳು ಬಂದ್ ಆಗಿದ್ದರಿಂದ ಬೆಳಗ್ಗೆ ಎದ್ದಾಗ ಮಹಿಳೆ ಮನೆಯಲ್ಲಿ ಲೈಟ್‌ ಹಾಕಲು ಸ್ವಿಚ್ ಹಾಕಿದಾಗ ಲೈಟ್‌ ಬಂದಿದ್ದರಿಂದ ತಕ್ಷಣವೇ ಇಡೀ ಮನೆ ಸ್ಪೋಟಗೊಂಡಿರಬಹುದು. ಇನ್ನು ಮನೆಗಳ ಗೋಡೆಗಳು ಒಂದಕ್ಕೊಂದು ಅಟ್ಯಾಚ್ ಆಗಿರುವುದರಿಂದ ಹಾನಿಯ ಪ್ರಮಾಣ ಐದು ಮನೆಗಳಿಗೆ ವ್ಯಾಪಿಸಿದೆ. ಇದೇ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ.

ಈ ಘಟನೆಯಲ್ಲಿ ಇಬ್ಬರ ದೇಹದ ಭಾಗಗಳು ಬಹುತೇಕ ಸುಟ್ಟುಹೋಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಡ್ಯೂಟಿ, ರಜೆ ನೀಡಲು ಒಂದೂವರೆ ಕೋಟಿ ರೂ. ಲಂಚ ಪಡೆದಿದ್ದ 7 ಅಧಿಕಾರಿಗಳ ಅಮಾನತು

“ಬೆಳಗ್ಗೆ 7.10ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಮ್ಮ ಅಮ್ಮ ಮೊದಲ ಮಹಡಿಯಲ್ಲಿ ಇದ್ದರು. ನಾವು ಮತ್ತು ನಮ್ಮ ತಂದೆ ಕೆಳಗೆ ಇದ್ದೆವು. ಈ‌ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ. ಆದರೆ, ಪಕ್ಕದಲ್ಲಿ ದೆಹಲಿ ಮೂಲದ ಮಹಿಳೆ ವಾಸವಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಈ‌ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ. ನನಗೆ ಕರೆಂಟ್ ಹೊಡೆದು ಬಿದ್ದುಹೋಗಿದ್ದೆ. ಆಸ್ಪತ್ರೆಗೆ ಸೇರಿಸಲು ನನ್ನನ್ನು ಕರೆತಂದಿದ್ದಾರೆ. ಒಟ್ಟು ಐದು ಮನೆಗೆ ಹಾನಿ ಆಗಿದೆ. ಏಳು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಗಾಯಾಳು ಅಫ್ರೋಜ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...