ಬೆಂಗಳೂರು | 56 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಕದ್ದಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

Date:

ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಿಂದ 56 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಕದ್ದಿದ್ದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಸೈಬರ್ ಕ್ರೈಂ ಘಟಕ ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಬಂಧಿಸಿರುವುದಾಗಿ ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಂಧಿತ ಆರೋಪಿಯನ್ನು ಹರಿಯಾಣ ಮೂಲದ ಶುಭಾಂಗ್ ಜೈನ್ ಎಂದು ಗುರುತಿಸಲಾಗಿದೆ. ಆರೋಪಿಯು ಸೈಫರ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸಾಫ್ಟ್‌ವೇರ್ ಡೆವಲಪರ್ ಆಗಿ ಕೆಲಸ ಮಾಡುತ್ತಿದ್ದ. ಎಲ್ಲ ಕಂಪನಿಗಳ ವ್ಯಾಲೆಟ್‌ ಪ್ರವೇಶ ಮತ್ತು ನಿಯಂತ್ರಣವನ್ನು ಹೊಂದಿದ್ದ ಆರೋಪಿ, ಆ ಕಂಪನಿಗಳ ಕ್ರಿಪ್ಟೋಕರೆನ್ಸಿಗಳನ್ನು ತನ್ನ ಖಾಸಗಿ ವ್ಯಾಲೆಟ್‌ಗೆ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

“ಆರೋಪಿ ಜೈನ್ 2021ರ ಮೇ ಮತ್ತು 2022ರ ಏಪ್ರಿಲ್‌ ನಡುವೆ ಸೈಫರ್ ಟೆಕ್ನಾಲಜೀಸ್‌ನಲ್ಲಿ ಕೆಲಸ ಮಾಡಿದರು. ಮಾರುಕಟ್ಟೆ ವಿಶ್ಲೇಷಣೆ ಮತ್ತು ಹಣಕಾಸು ವ್ಯವಹಾರ ವಿಭಾಗದಲ್ಲಿ ಆತ ವ್ಯವಹರಿಸಿದ್ದರು. ಆತನಿಗೆ ಕಂಪನಿಯ ವ್ಯಾಪಾರ ನಿರ್ವಹಣೆ ಲಾಗ್‌ಇನ್‌ ಮಾಹಿತಿಯನ್ನು ನೀಡಿತ್ತು. ಬಳಿಕ, ಕಂಪನಿಯ ಕ್ರಿಪ್ಟೋಕರೆನ್ಸಿಗಳು ಕಾಣೆಯಾಗಿರುವುದನ್ನು ಸಂಸ್ಥೆಯ ಮಾಲೀಕರು ಗಮನಿಸಿತ್ತು. ಕಂಪನಿಯ ಸಿಇಒ ಅಖಿಲ್ ಗುಪ್ತಾ ಅವರು 2022ರ ಏಪ್ರಿಲ್ 28ರಂದು ಸುಬ್ರಹ್ಮಣ್ಯನಗರ ಪೊಲೀಸರಿಗೆ ದೂರು ಸಲ್ಲಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣವನ್ನು ಸಿಐಡಿಯ ಸೈಬರ್ ಕ್ರೈಂ ಘಟಕಕ್ಕೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ ಸೈಬರ್ ಘಟಕದ ತಂಡವು ಆರೋಪಿಯನ್ನು ಬಂಧಿಸಿದೆ. “ಆರೋಪಿ ಜೈನ್ ಅವರು ಕ್ರಿಪ್ಟೋಕರೆನ್ಸಿಗಳನ್ನು ತಮ್ಮ ಸಂಬಂಧಿಕರ ವ್ಯಾಲೆಟ್‌ಗಳಿಗೆ ವರ್ಗಾಯಿಸಿದ್ದರು. ನಂತರ ಹಣವನ್ನು ವಿತ್‌ಡ್ರಾ ಮಾಡಿಕೊಂಡಿದ್ದರು. ಅವರು ಐಷಾರಾಮಿ ಹೋಟೆಲ್‌ಗಳಲ್ಲಿ ವಾಸಿಸುತ್ತಿದ್ದರು. ಆತ ಸ್ಥಳದಿಂದ ಸ್ಥಳಕ್ಕೆ ತನ್ನ ವಾಸವನ್ನು ಬದಲಿಸುತ್ತಿದ್ದರು. ಹೀಗಾಗಿ, ಆತನ ಚಲನವಲನಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ತೊಡಕಾಗುತ್ತಿತ್ತು” ಎಂದು ತನಿಖಾ ತಂಡದ ಭಾಗವಾಗಿದ್ದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಟ್ರಸ್ಟ್ ಆಸ್ಪತ್ರೆಗಾಗಿ ಭೂಮಿ ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು ಆರೋಪ

2024ರ ಜುಲೈ 29ರಂದು ಪೊಲೀಸರು ಆತನ ಫೋನ್‌ ನಂಬರ್ ಪತ್ತೆ ಹಚ್ಚಿ, ಫೋನ್‌ ಕರೆಗಳ ಮಾಹಿತಿಯನ್ನು ಪರಿಶೀಲಿಸಿದಾಗ, ಆತನ ಹೆಚ್ಚಾಗಿ ಮನೆ ಬ್ರೋಕರ್‌ಗಳಿಗೆ ಕರೆ ಮಾಡಿರುವುದು ಕಂಡುಬಂದಿತ್ತು. ಆತನ ಫೋನ್‌ ಸ್ವಿಚ್‌ ಆಫ್‌ ಆಗಿದ್ದರಿಂದ,ಆತ ಫೋನ್‌ ಸ್ವಿಚ್ ಆನ್ ಮಾಡಲು ಪೊಲೀಸರು ಕಾಯುತ್ತಿದ್ದರು. ಆತ ಮತ್ತೆ ಫೋನ್ ಸ್ವಿಚ್ ಆನ್ ಮಾಡಲು ಒಂದು ತಿಂಗಳು ಸಮಯ ಹಿಡಿಯಿತು. ಇತ್ತೀಚೆಗೆ ಆತ ಫೋನ್‌ ಆನ್‌ ಮಾಡಿದ್ದು, ಮೊಬೈಲ್ ನೆಟ್‌ವರ್ಕ್‌ ಸಹಾಯದಿಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...