ಬೆಂಗಳೂರು | ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆಗೆ ಚೂರಿ ಇರಿದ ಅಳಿಯ

Date:

  • ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ಅಳಿಯನೊಬ್ಬ ಸ್ವಂತ ಅತ್ತೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ತನ್ನ ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆ ಜತೆಗೆ ಗಲಾಟೆಗೆ ಇಳಿದಿದ್ದ ಅಳಿಯ ಗಲಾಟೆ ನಡುವೆ ಚಾಕುವಿನಿಂದ ಇರಿದಿದ್ದಾನೆ. ಬುಧವಾರ ಈ ಘಟನೆ ನಡೆದಿದ್ದು, ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೀತಾ ಅಳಿಯನಿಂದ ಹಲ್ಲೆಗೊಳಗಾದ ಮಹಿಳೆ. ಮನೋಜ್ ಬಂಧಿತ ವ್ಯಕ್ತಿ. ಆರೋಪಿಯೂ ಕಳೆದ ಮೂರು ವರ್ಷಗಳ ಹಿಂದೆ ವರ್ಷಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ತದನಂತರ ಗಂಡ ಕೆಲಸ ಮಾಡುತ್ತಿಲ್ಲ ಎಂದು ವರ್ಷಿತಾ ತವರು ಮನೆ ಸೇರಿದ್ದಳು. ಹಾಗಾಗಿ, ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಮನೋಜ್ ಅತ್ತೆ ಮನೆಗೆ ಬಂದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಅತ್ತೆ ಮತ್ತು ಅಳಿಯನ ಮಧ್ಯೆ ಗಲಾಟೆ ನಡೆದಿದೆ. ಜಗಳದ ನಡುವೆಯೇ ಅತ್ತೆಗೆ ಅಳಿಯ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿನಿ ಸಾವು | ಬಸ್‌ ಚಾಲಕರಿಗೆ ನಿರ್ದೇಶನ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು | ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಸಾವು

ಬೆಂಗಳೂರಿನಲ್ಲಿ ಜೂನ್ 13ರಂದು ಭಾರೀ ಮಳೆಯಾಗಿದೆ. ನಗರದ ಕಾಡುಗೋಡಿ ಸಮೀಪದ ಚನ್ನಸಂದ್ರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಓರ್ವ ರೈತ ಮತ್ತು ಹಸು ಮೃತಪಟ್ಟ ಘಟನೆ ನಡೆದಿದೆ.

ಚನ್ನಸಂದ್ರ ನಿವಾಸಿ ಕೃಷ್ಣಪ್ಪ (55) ಮೃತ ರೈತ. ರಾತ್ರಿ ಸುರಿದ ಮಳೆಗೆ ವಿದ್ಯುತ್ ವೈರ್ ಕಟ್ ಆಗಿ ಬಿದಿತ್ತು. ಜೂನ್ 14ರಂದು ಬೆಳಗ್ಗೆ ಮೇವಿಗೆಂದು ಕೃಷ್ಣಪ್ಪ ತನ್ನ ಹಸುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ, ವಿದ್ಯುತ್ ತಗುಲಿ ರೈತ ಮತ್ತು ಹಸು ಮೃತಪಟ್ಟಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...