ಬೆಂಗಳೂರು | ಬೀದಿನಾಯಿ ಬೊಗಳಿದ್ದಕ್ಕೆ ದಾರಿಹೋಕನ ಮೇಲೆ ಹಲ್ಲೆ; ಆರೋಪಿ ಬಂಧನ

Date:

ಬೆಂಗಳೂರಿನಲ್ಲಿ ನಾಯಿ ಬೊಗಳಿದ್ದಕ್ಕೆ ವೃದ್ಧನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಲ್ಲೇಶ್ವರಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ರಾಜು (57) ಬಂಧಿತ ಆರೋಪಿ. ಬಾಲಸುಬ್ರಹ್ಮಣ್ಯ (62) ಹಲ್ಲೆಗೊಳಗಾದವರು.

ಆ.21ರಂದು ರಾತ್ರಿ 8ರ ಸುಮಾರಿಗೆ ಮಲ್ಲೇಶ್ವರದ ಗಣೇಶ ದೇವಸ್ಥಾನದ ಬಳಿ ರಾಜು ನಡೆದುಕೊಂಡು ಹೋಗುತ್ತಿದ್ದಾಗ ಬೀದಿನಾಯಿ ಬೊಗಳಿದೆ. ಈ ವೇಳೆ ಅಟ್ಟಿಸಿಕೊಂಡು ಸ್ವಲ್ಪ ದೂರ ಹಿಂಬಾಲಿಸಿದೆ. ಬಳಿಕ, ಆ ನಾಯಿ ರಸ್ತೆಯ ಇನ್ನೊಂದು ಬದಿಯ ಪಾದಚಾರಿ ಮಾರ್ಗದತ್ತ ಓಡಿ ಕಣ್ಮರೆಯಾಗಿದೆ. ಈ ವೇಳೆ, ರಾಜು ಹಿಂದೆ ಬರುತ್ತಿದ್ದ ಬಾಲಸುಬ್ರಹ್ಮಣ್ಯ ಅವರೇ ನಾಯಿ ಮಾಲೀಕ ಹಾಗೂ ಆತನೇ ನಾಯಿಯನ್ನು ಕಚ್ಚುವಂತೆ ಛೂ ಬಿಟ್ಟದ್ದಾನೆ ಎಂದು ಭಾವಿಸಿ ಏಕಾಏಕಿ ವೃದ್ಧನ ಜತೆಗೆ ಜಗಳ ಪ್ರಾರಂಭಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ವೃದ್ಧನಿಗೆ ಮಾತನಾಡಲು ಅವಕಾಶ ಮಾಡಿಕೊಡದ ಆರೋಪಿ ರಾಜು ತನ್ನ ಬಳಿ ಇದ್ದ ಚಾಕು ತೆಗೆದು ವೃದ್ಧನ ಕುತ್ತಿಗೆಗೆ ಇರಿಯಲು ಮುಂದಾದಾಗ ಅದು ಆತನ ದವಡೆಗೆ ಚುಚ್ಚಿದೆ. ಮತ್ತೊಮ್ಮೆ ಇರಿಯಲು ಮುಂದಾದಾಗ ಬಾಲಸುಬ್ರಹ್ಮಣ್ಯ ಬಲಗೈ ಅಡ್ಡ ಹಿಡಿದಿದ್ದಾರೆ. ಆಗ ಕೈ ಬೆರಳಿಗೆ ಗಾಯವಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಕ್ಕೆ 1.5 ಲಕ್ಷಕ್ಕೂ ಹೆಚ್ಚು ಮಂದಿ ಸಾವು: ಎಂ ಎ ಸಲೀಂ

ಈ ಗಲಾಟೆ ಆರಂಭವಾದಾಗ ಬಾಲಸುಬ್ರಹ್ಮಣ್ಯ ಸಹಾಯಕ್ಕಾಗಿ ಕಿರುಚಾಡಿದ ಪರಿಣಾಮ ದಾರಿಹೋಕರು ವೃದ್ಧನನ್ನು ರಕ್ಷಿಸಲು ಮುಂದಾದಾಗ ಗಾಬರಿಗೊಂಡ ಆರೋಪಿ ರಾಜು ಪರಾರಿಯಾಗಿದ್ದಾನೆ.

ಹಲ್ಲೆಯಿಂದ ಗಾಯಗೊಂಡಿದ್ದ ವೃದ್ಧನನ್ನು ಸ್ಥಳೀಯರು ಕೆ ಸಿ ಜನರಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಳಿಕ, ಘಟನೆ ಬಗ್ಗೆ ವೃದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ರಾಜುನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...