ಬೆಂಗಳೂರು | ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ : ಸಚಿವ ಈಶ್ವರ ಖಂಡ್ರೆ

Date:

  • ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆ : ಸಚಿವ ಖಂಡ್ರೆ
  • ತ್ಯಾಜ್ಯ ಹರಿಸುವವರ ವಿರುದ್ಧ ಕ್ರಮಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ

“ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಕೊಳಚೆ ನೀರು ಹರಿಸುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಬೆಳ್ಳಂದೂರು ಕೆರೆ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, “ಪ್ರಸ್ತುತ 14 ತ್ಯಾಜ್ಯ ಜಲ ಸಂಸ್ಕರಣೆ ಘಟಕ (ಎಸ್.ಟಿ.ಪಿ.) ಕಾರ್ಯ ನಿರ್ವಹಿಸುತ್ತಿದ್ದು, ಇವುಗಳ ಸಾಮರ್ಥ್ಯ 560 ಎಂ.ಎಲ್.ಡಿ ಆಗಿದೆ. ಈ ಪೈಕಿ 5ನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ” ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, “ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ ತ್ಯಾಜ್ಯ ಜಲ ಸಂಸ್ಕರಣೆ ಘಟಕ (ಎಸ್.ಟಿ.ಪಿ)ಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಬೇಕು. ಬೆಂಗಳೂರಿನಲ್ಲಿರುವ ಎಲ್ಲ ಕೆರೆಗಳ ನೀರು ಕುಡಿಯಲು ಯೋಗ್ಯವಾದರೆ, ನೀರಿನ ಸಮಸ್ಯೆ ಪರಿಹರಿಸಬಹುದು. ಆದರೆ, ಹೆಚ್ಚುತ್ತಿರುವ ಜನಸಂಖ್ಯೆ, ಅನಧಿಕೃತವಾಗಿ ತಲೆಎತ್ತುತ್ತಿರುವ ಕಟ್ಟಡಗಳು, ಒತ್ತುವರಿಯ ಪರಿಣಾಮವಾಗಿ ದೊಡ್ಡ ಪ್ರಮಾಣದಲ್ಲಿ ಘನ ಮತ್ತು ದ್ರವ ತ್ಯಾಜ್ಯ ಕೆರೆಗಳನ್ನು ಮತ್ತು ಜಲ ಮೂಲಗಳನ್ನು ಸೇರುತ್ತಿವೆ. ಇದನ್ನು ನಿಯಂತ್ರಿಸುವ ಗುರುತರ ಜವಾಬ್ದಾರಿ ಇದ್ದು, ಜಲ ಕಾಯಿದೆಯ ರೀತ್ಯ ತ್ಯಾಜ್ಯ ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐಟಿ, ಬಿಟಿ ನಗರ ಬೆಂಗಳೂರಿನತ್ತ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಆಗಲೇಬೇಕು. ನಗರದ ಜನಸಂಖ್ಯೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಸವಾಲಾಗಿದೆ. ಮುಂದಿನ ದಿನಗಳಲ್ಲಿ ಜಲಕ್ಷಾಮ ತಲೆದೋರುವ ಸಾಧ್ಯತೆಯೂ ಇದ್ದು, ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆಯಾಗಿದೆ. ಈ ಕೆರೆಗಳಿಗೆ ತ್ಯಾಜ್ಯ ಜಲ ಸೇರದಂತೆ ಪರಿಸರ ಮಾಲಿನ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“2017ರಲ್ಲಿ ಬೆಳ್ಳಂದೂರು ಕೆರೆಯಲ್ಲಿ ನೊರೆ ಉಕ್ಕಿ ಹರಿದಿದ್ದಷ್ಟೇ ಅಲ್ಲದೆ, ಬೆಂಕಿಯ ಜ್ವಾಲೆ ಕಾಣಿಸಿಕೊಂಡು ದೊಡ್ಡ ಸುದ್ದಿಯಾಗಿತ್ತು. ಆಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಂಡಳಿಯು ರಾಜ್ಯ ಸರ್ಕಾರದ 5 ಇಲಾಖೆಗಳಿಗೆ ನಿರ್ದೇಶನ ನೀಡಿದೆ. ತಮ್ಮ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಮತ್ತು ಪರಿಸರ ಇಲಾಖೆ ಈ ನಿಟ್ಟಿನಲ್ಲಿ ಮಾಲಿನ್ಯ ತಡೆಗೆ ತನ್ನ ಪಾಲಿನ ಕರ್ತವ್ಯವನ್ನು ಯಾವುದೇ ಲೋಪಕ್ಕೆ ಆಸ್ಪದವಿಲ್ಲದಂತೆ ನಿರ್ವಹಿಸಬೇಕು. ಯಾರೇ ಕೆರೆಗೆ ತ್ಯಾಜ್ಯ ತಂದು ಸುರಿದರೆ, ರಾಸಾಯನಿಕ ಮತ್ತು ಸಂಸ್ಕರಿಸದ ತ್ಯಾಜ್ಯವನ್ನು ನೇರವಾಗಿ ಹರಿಯಬಿಟ್ಟರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವಂತೆ ಸೂಚಿಸಿದರು. ಬೆಂಗಳೂರಿನ ಯಾವುದೇ ಕೆರೆಯಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಎಚ್ಚರ ವಹಿಸಬೇಕು. ಕೆರೆಯಲ್ಲಿ ತ್ಯಾಜ್ಯ ಸುರಿಯದಂತೆ ನೋಡಿಕೊಳ್ಳಬೇಕು” ಎಂದರು.

“ರಾತ್ರಿಯ ವೇಳೆ ಮಾತ್ರ ಕೊಳಚೆ ಸ್ಥಳಾಂತರಿಸುವುದು ಸೂಕ್ತ ಎಂಬ ಅಭಿಪ್ರಾಯವಿದೆ. ಹೀಗಾಗಿ, ಹೆಚ್ಚುವರಿ ವಾಹನ ಬಳಕೆ ಮಾಡಿ ಕಾಮಗಾರಿ ಶೀಘ್ರ ಮುಗಿಸಿ, ಕೆರೆ ಪುನಶ್ಚೇತನ ಮಾಡಿದರೆ ಒಳಿತಾಗುತ್ತದೆ. ಹೊಸ ಎಸ್.ಟಿ.ಪಿ.ಗಳ ನಿರ್ಮಾಣದ ಜೊತೆಗೆ ಹಳೆಯ 5 ಎಸ್.ಟಿ.ಪಿ.ಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ. ಮುಂದಿನ 10 ವರ್ಷಗಳ ಅವಧಿಗೆ ಅಗತ್ಯವಾದ ಎಸ್.ಟಿ.ಪಿಗಳ ನಿರ್ಮಾಣವೂ ಆಗಬೇಕು. ಕೆಲಸ ಅರ್ಧಕ್ಕೆ ನಿಂತರೆ ಮಾಡಿದ ಹಣವೂ ವ್ಯರ್ಥವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ ಅವಧಿ ವಿಸ್ತರಣೆ: ಕೆಎಸ್‌ಆರ್‌ಟಿಸಿ

ನೋಟಿಸ್ ಜಾರಿ

“ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮಗು ಮೃತಪಟ್ಟು ಹಲವರು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಜೀವ ಜಲ ವಿಷವಾದರೆ ಬದುಕುವುದು ಹೇಗೆ? ಇಂತಹ ನಿರ್ಲಕ್ಷ್ಯ ತಾಳುವ ಅಧಿಕಾರಿ ಎಷ್ಟೇ ದೊಡ್ಡವರಾದರೂ, ಪ್ರಭಾವಿಯಾದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.

ಈ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ್ ರಾಜ್ ಮತ್ತಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...