ಬೆಂಗಳೂರು | 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Date:

ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ. ಇವರು ಖಾಸಗಿ ಕಾಲೇಜವೊಂದರಲ್ಲಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದರು.

ವಿಜಯಲಕ್ಷ್ಮೀ ತಂದೆ-ತಾಯಿಗೆ ವಿಚ್ಛೇದನವಾದ ಬಳಿಕ, ತನ್ನ ತಾಯಿ ಯಶೋಧ ಅವರ ಜತೆಗೆ ನಗರದ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆ.19ರಂದು ವಿಜಯಲಕ್ಷ್ಮೀ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದರಂತೆ, ಇವರು ಕಳೆದ ಒಂದು ವಾರದಿಂದ ಡಿಪ್ರೆಷನ್​ಲ್ಲಿದ್ದರು ಎಂದು ತಿಳಿದುಬಂದಿದೆ.

ಸೆ.21 ರಂದು ವಿಜಯಲಕ್ಷ್ಮೀ ಸಾವನ್ನಪ್ಪಿದ್ದಾರೆ. ಸ್ನೇಹಿತರ ಮನೆಗೆ ಮಗಳು ಹೋಗಿರಬಹುದು ಎಂದು ಭಾವಿಸಿದ್ದ ತಾಯಿ ಒಂದು ದಿನ ಕಳೆದ ಬಳಿಕ ಮಗಳು ಮನೆಗೆ ವಾಪಸ್ ಬರದೇ ಇದ್ದಾಗ, ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಈ ವೇಳೆ ಮಗಳ ಸಾವಿನ ಸುದ್ದಿ ತಿಳಿದಿದೆ.

ಈ ಸುದ್ದಿ ಓದಿದ್ದೀರಾ? ಓಲಾ, ರ್‍ಯಾಪಿಡೋಗಳಿಂದ ಬೈಕ್ ಟ್ಯಾಕ್ಸಿ : ಆಟೋ ಚಾಲಕರಿಗೆ ಎದುರಾದ ಮತ್ತೊಂದು ಸಂಕಷ್ಟ

ಯುವತಿ ಸಾಯುವ ಮುನ್ನ ಮಂಗಳೂರಿಗೆ ತೆರಳಿದ್ದಳು ಎಂದು ತಿಳಿದುಬಂದಿದೆ. ಹಾಗೇ, ಒಬ್ಬರಿಗೆ ಕರೆ ಮಾಡಿದ್ದು, ಯಾರಿಗೆ ಕರೆ ಮಾಡಿದ್ದರು. ಮಂಗಳೂರಿಗೆ ಏಕೆ ಹೋಗಿದ್ದರು ಎಂಬ ಪ್ರಶ್ನೆ ಮೂಡಿದೆ.

ಘಟನೆ ಸಂಬಂಧ ತಾಯಿ ನೀಡಿದ ದೂರಿನ ಮೇರೆಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನ ಮರಣೊತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ಬಗ್ಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್, “ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡದ 13ನೇ ಮಹಡಿಯಿಂದ ಜಿಗಿದು ಓರ್ವ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂದು ತಿಳಿದುಬಂದಿದೆ. ಸೆ.19 ರಂದು ಮನೆಯಿಂದ ಹೋದವರು ಧರ್ಮಸ್ಥಳಕ್ಕೆ ತೆರಳಿದ್ದಾಳೆ. ಹುಡುಗಿ ಧರ್ಮಸ್ಥಳದಲ್ಲಿ ಸುತ್ತಾಡಿದ್ದಾಗ ಈಕೆಯನ್ನು ನೋಡಿದ ಒಬ್ಬರು ಬೆಂಗಳೂರಿಗೆ ವಾಪಸ್ ಕಳುಹಿಸಿದ್ದಾರೆ” ಎಂದರು.

“ಬೆಂಗಳೂರಿಗೆ ವಾಪಸ್ ಬಂದ ಹುಡುಗಿ ಅಪಾರ್ಟ್ಮೆಂಟ್ ಒಳಗೆ ಹೋಗಿದ್ದಾಳೆ. ಈ ವೇಳೆ, ಅಪಾರ್ಟ್‌ಮೆಂಟ್ ಸೆಕ್ಯೂರಿಟಿ ಗಾರ್ಡ್‌ ತಡೆದಾಗ 9ನೇ ಮಹಡಿಗೆ ಹೋಗಬೇಕು ಎಂದು ಹೇಳಿದ್ದಾಳೆ. ಸೆಕ್ಯೂರಿಟಿ ಗಾರ್ಡ್‌ ಆ ನಿವಾಸಿ ಅವರಿಗೆ ಕರೆ ಮಾಡಿ ಕೇಳಿದಾಗ ಅತಿಥಿ ಬಂದಿದ್ದಾರೆ ಎಂದು ನಿವಾಸಿ ಕಳುಹಿಸಿಕೊಡಿ ಎಂದು ಹೇಳಿದ್ದಾರೆ. ಬಳಿಕ ಹುಡುಗಿ 13ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡುಗಿ ಮಾನಸಿಕವಾಗಿ ನೊಂದಿದ್ದಳು ಎಂಬುದು ತಿಳಿದುಬಂದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...