ಬೆಂಗಳೂರು ಉಪನಗರ ರೈಲು ಯೋಜನೆ : 5.5 ಕಿ.ಮೀ ವಿಸ್ತರಣೆ

Date:

ರೈಲ್ವೆಯ ಮಹತ್ವದ ಯೋಜನೆಯಾದ ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ)ನ್ನು 148.17 ಕಿಮೀಗೆ ಯೋಜಿಸಲಾಗಿತ್ತು. ಇದೀಗ, ಸಾರ್ವಜನಿಕರ ಬೇಡಿಕೆ ಮೇರೆಗೆ ಸರಿಸುಮಾರು 5.5 ಕಿಮೀ ವಿಸ್ತರಿಸಲು ಸಿದ್ಧವಾಗಿದೆ.

ರಾಜಾನುಕುಂಟೆ- ಹೀಳಲಿಗೆ (ಕಾರಿಡಾರ್ 4) ವೈಟ್ ಫೀಲ್ಡ್ – ಕೆಂಗೇರಿ (ಕಾರಿಡಾರ್ 2) ಮಾರ್ಗದಲ್ಲಿ ವಿಸ್ತರಣೆಗೆ ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದ್ದು, ಇದೀಗ ಕೇಂದ್ರ ಸರ್ಕಾರದ ಅನುಮೋದನೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯದ (ಡಲ್ಟ್‌) ಈ ಪ್ರಸ್ತಾವನೆಯನ್ನು ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸಸ್ (K-RIDE) ಅನುಷ್ಠಾನಗೊಳಿಸುವ ನೋಡಲ್ ಏಜೆನ್ಸಿಯು ಅಂಗೀಕರಿಸಿದೆ. ಈಗ ಅದನ್ನು ನೈಋತ್ಯ ರೈಲ್ವೆ ಮೂಲಕ ರೈಲ್ವೆ ಮಂಡಳಿಗೆ ಅದರ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೀಳಲಿಗೆ ಕಾರಿಡಾರ್ (ಕನಕ ಲೈನ್) ಅನ್ನು ಚಂದಾಪುರದವರೆಗೆ ಸುಮಾರು ಒಂದು ಕಿಮೀ ವಿಸ್ತರಿಸಲು ಡಲ್ಟ್‌ ಪ್ರಸ್ತಾಪಿಸಿದೆ. ಕೆಂಗೇರಿ ಮಾರ್ಗವನ್ನು (ಪಾರಿಜಾತ ಲೈನ್) ಅನ್ನು ಚಲ್ಲಘಟ್ಟ ಕಡೆಗೆ ವಿಸ್ತರಿಸಲಾಗುವುದು” ಎಂದು ಕೆ-ರೈಡ್ ಮೂಲಗಳು ತಿಳಿಸಿವೆ.

“ಕಾರ್ಯಸಾಧ್ಯತೆಯ ಅಧ್ಯಯನದ ನಂತರವೇ ನಿಖರವಾದ ದೂರವು ತಿಳಿಯುತ್ತದೆ. ಸದ್ಯಕ್ಕೆ ಸುಮಾರು 4.5 ಕಿ.ಮೀ.ಗೆ ಇದನ್ನು ಪ್ರಸ್ತಾಪಿಸಲಾಗಿದೆ” ಎಂದು ಡಲ್ಟ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಹೋರಾಟಗಾರ ಪೃಥ್ವಿನ್ ರೆಡ್ಡಿ ಮಾತನಾಡಿ, “ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಅವರು ಆನೇಕಲ್, ಹೀಳಲಿಗೆ ಮತ್ತು ಹುಸ್ಕೂರು ರೈಲು ನಿಲ್ದಾಣಗಳಿಗೆ ಭೇಟಿ ನೀಡಿದಾಗ ಉಪನಗರ ಮಾರ್ಗವನ್ನು ವಿಸ್ತರಿಸುವಂತೆ ಸ್ಥಳೀಯರು ಒತ್ತಾಯಿಸಿದರು. 46.88 ಕಿಮೀ ಕನಕ ಮಾರ್ಗದ ಗುತ್ತಿಗೆಯನ್ನು ಇತ್ತೀಚೆಗೆ ಲಾರ್ಸನ್ ಮತ್ತು ಟೂರ್ಬೋ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾಯಿತು” ಎಂದರು.

ಈ ಸುದ್ದಿ ಓದಿದ್ದೀರಾ? ಸ್ವಂತ ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ ಎನ್‌. ಎ. ಹ್ಯಾರಿಸ್‌ ಬೆಂಗಳೂರನ್ನು ಅಭಿವೃದ್ಧಿ ಪಡಿಸುತ್ತಾರೆಯೇ? ಎಎಪಿ ವಿರೋಧ

“ಈ ಪ್ರಸ್ತಾವಿತ ವಿಸ್ತರಣೆಗಳು 452 ಕಿಮೀ 2ನೇ ಹಂತದ ಯೋಜನೆಯಲ್ಲಿ ಕಾಣಿಸಿಕೊಂಡಿವೆ. ನಾವು ಕೈಗೊಳ್ಳಲು ಬಯಸಿದ ಪೂರ್ವ-ಕಾರ್ಯಸಾಧ್ಯತೆಯ ಅಧ್ಯಯನವನ್ನು ನವೆಂಬರ್ 2023 ರಲ್ಲಿ ನೈರುತ್ಯ ರೈಲ್ವೆ ತಿರಸ್ಕರಿಸಿದೆ. ಇದೇ ಪ್ರಸ್ತಾವನೆಯನ್ನು 2023ರ ಡಿಸೆಂಬರ್ 28 ರಂದು ನೈರುತ್ಯ ರೈಲ್ವೆಗೆ ಸಲ್ಲಿಸಿದ್ದೇವೆ. ನಮ್ಮ ವಿನಂತಿಯನ್ನು ಮರುಪರಿಶೀಲಿಸುವಂತೆ ಕೇಳಿಕೊಳ್ಳುತ್ತೇವೆ. ನೈರುತ್ಯ ರೈಲ್ವೆ ಮತ್ತೊಮ್ಮೆ ಪ್ರಸ್ತಾವನೆಯನ್ನು ತಿರಸ್ಕರಿಸಿದರೆ, ರೈಲ್ವೆ ಮಂಡಳಿಗೆ ಹೊಸ ಪ್ರಸ್ತಾವನೆಯನ್ನು ಸಲ್ಲಿಸುತ್ತೇವೆ. ಈ ಹೆಚ್ಚುವರಿ 4.5 ಕಿ.ಮೀ. ಇದಕ್ಕೆ ರಾಜ್ಯದಿಂದ ಒಪ್ಪಿಗೆ ಸಿಕ್ಕಿದ್ದು, ಕೇಂದ್ರ ಮಾತ್ರ ಇದನ್ನು ಅನುಮೋದಿಸಬೇಕಿದೆ” ಎಂದು ಹಿರಿಯ ಕೆ-ರೈಡ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...