ಬೆಂಗಳೂರು | ಕೊಂದು ಮೃತದೇಹವನ್ನು ಬೈಕ್‌ನಲ್ಲಿ ತಂದ ಆರೋಪಿ

Date:

  • ಸರ್ಜಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ದ್ವಿಚಕ್ರ ವಾಹನದಲ್ಲಿ ಮೃತದೇಹ ಊರಿಗೆ ತಂದ ಆರೋಪಿ

ಪಾರ್ಟಿಗೆಂದು ಸ್ನೇಹಿತನನ್ನು ಕರೆದು, ಆತನನ್ನು ಕೊಲೆ ಮಾಡಿ ಮೃತದೇಹವನ್ನು ಬೈಕ್‌ನಲ್ಲಿ ಊರಿಗೆ ತಂದ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.

ಮೊಹಮ್ಮದ್ ಸಲೀಂ ಕೊಲೆಯಾದ ದುರ್ದೈವಿ. ಚರಣ್ ಮತ್ತು ನಾರಾಯಣಪ್ಪ ಬಂಧಿತ ಆರೋಪಿಗಳು.

ಜುಲೈ 31ರಂದು ಚರಣ್ ಎಂಬುವವನ ಬರ್ತಡೇ ಪಾರ್ಟಿ ಮಾಡಲಾಗುತ್ತಿತ್ತು. ಈ ವೇಳೆ, ಮೊಹಮ್ಮದ್ ಸಲೀಂ ಎಂಬಾತನನ್ನು ಪಾರ್ಟಿಗೆ ಕರೆದಿದ್ದಾರೆ. ಇದರ ಹಿಂದೆ ಆರೋಪಿಗಳು ಸಲೀಂನನ್ನು ಕೊಲ್ಲವ ಸಂಚು ರೂಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಲೀಂ ಪಾರ್ಟಿಗೆ ಬರುತ್ತಿದ್ದಂತೆ ಮದ್ಯಪಾನ ಮಾಡಿಸಿ ಬಳಿಕ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಮೃತದೇಹವನ್ನು ಅಲ್ಲಿಯೇ ಬಿಟ್ಟು ತೆರಳಿದ್ದಾರೆ. ಆರೋಪಿ ನಾರಾಯಣಪ್ಪ ಊರಿಗೆ ತೆರಳಿದ ಬಳಿಕ ಮನೆಯವರೆಲ್ಲ ಸಲೀಂ ಎಲ್ಲಿ ಎಂದು ವಿಚಾರಿಸಿದಾಗ ನಾರಾಯಣಪ್ಪ ಮತ್ತೆ ಮೃತದೇಹ ಇರುವ ಸ್ಥಳಕ್ಕೆ ತೆರಳಿ ತನ್ನದೆ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಊರಿಗೆ ತಂದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮದ್ಯ ಸೇವಿಸಿ ಟ್ಯಾಂಕರ್ ಚಾಲನೆ; ಪಾದಾಚಾರಿಗಳ ಸಾವು

ಮೃತದೇಹ ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಸರ್ಜಾಪುರ ಠಾಣೆಯ ಪೊಲೀಸರು ನಾರಾಯಣಪ್ಪ ಮತ್ತು ಚರಣ್ ಅವರನ್ನು ವಶಕ್ಕೆ ಪಡೆದು ವಿಚಾರ ನಡೆಸುತ್ತಿದ್ದಾರೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...