ಬೆಂಗಳೂರು ಜೋಡಿ ಹತ್ಯೆ | ಯುವತಿಗೋಸ್ಕರ ನಡೆಯಿತಾ? ಜಿ ನೆಟ್ ಅರುಣ್ ಪಾತ್ರವಿದೆಯಾ?

Date:

  • ಪಂಪಾ ಬಡಾವಣೆಯಲ್ಲಿ ಮಂಗಳವಾರ ನಡೆದ ಘಟನೆ
  • ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಹಾಡಹಗಲೇ ಜೋಡಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷಣಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದ್ದು, ಯುವತಿಗೋಸ್ಕರ ಈ ಹತ್ಯೆ ನಡೆದಿದೆಯಾ, ಇದರಲ್ಲಿ ಜಿ ನೆಟ್ ಅರುಣ್ ಪಾತ್ರವಿದೆಯಾ ಎಂಬ ಸಂಶಯ ಹುಟ್ಟಿಕೊಂಡಿದೆ.

ಬೆಂಗಳೂರಿನ ಹೆಬ್ಬಾಳ ಸಮೀಪದ ಪಂಪಾ ಬಡಾವಣೆಯಲ್ಲಿ ಮಂಗಳವಾರ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಸಿಇಒ ವಿನುಕುಮಾರ್ ಮತ್ತು ಏರೋನಿಕ್ಸ್‌ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಅವರ ಹತ್ಯೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಠಾಣೆಯ ಪೊಲೀಸರು ಶಬರೀಶ್ ಅಲಿಯಾಸ್ ಫೆಲಿಕ್ಸ್‌, ಶಿವು ಹಾಗೂ ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಏರೋನಿಕ್ಸ್‌ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಫೆಲಿಕ್ಸ್‌ ವ್ಯವಹಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ಕೊಲೆಗೆ ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿತ್ತು.

ಇದೀಗ ಆರೋಪಿ ಫೆಲಿಕ್ಸ್‌ ಹುಡುಗಿ ವಿಚಾರಕ್ಕಾಗಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಡಿ ಫಣೀಂದ್ರನ ಜತೆ ಜಗಳ ಮಾಡಿಕೊಂಡು ಕೊಲೆ ಮಾಡುವ ಬೆದರಿಕೆ ಹಾಕಿದ್ದನು ಎನ್ನಲಾಗಿದೆ.

ಫೆಲಿಕ್ಸ್‌ ಹಾಗೂ ಏರೋನಿಕ್ಸ್‌ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಇಬ್ಬರು ಬನ್ನೇರುಘಟ್ಟದಲ್ಲಿದ್ದ ಜಿ ನೆಟ್ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಆರೋಪಿ ಫೆಲಿಕ್ಸ್‌ ಜತೆಗೆ ಯುವತಿಯೊಬ್ಬಳು ಸಲುಗೆಯಿಂದಿದ್ದಳು. ಅದೇ ಹುಡುಗಿ ಎಂಡಿ ಫಣಿಂದ್ರ ಜತೆಗೂ ಸಲುಗೆಯಿಂದ ಇದ್ದಳು. ಹೀಗೆ ಇರುವುದನ್ನು ಸಹಿಸದ ಫೆಲಿಕ್ಸ್‌ ಇದೇ ವಿಚಾರವಾಗಿ ಎಂಡಿ ಫಣಿಂದ್ರನ ಜತೆಗೆ ಜಗಳವಾಡುತ್ತಿದ್ದನು. ನನ್ನ ಹುಡುಗಿ ವಿಚಾರಕ್ಕೆ ಬಂದರೆ ನಿನ್ನನ್ನು ಮುಗಿಸಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಜೋಡಿ ಕೊಲೆ; ಮೂವರು ಆರೋಪಿಗಳ ಬಂಧನ

ಇದೀಗ ತನಿಖೆ ಆರಂಭಿಸಿರುವ ಅಮೃತಹಳ್ಳಿ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರೆಸಿದ್ದಾರೆ. ಜಿ ನೆಟ್‌ ಕಂಪನಿಯ ಮಾಲೀಕ ಅರುಣ್ ಕುಮಾರ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಬಿ.ಎಂ.ಲಕ್ಷ್ಮೀಪ್ರಸಾದ್, “ಮಂಗಳವಾರ ಮಧ್ಯಾಹ್ನ ಸುಮಾರು 3.30ರಿಂದ ಸಂಜೆ 4 ಗಂಟೆಗೆ ಇಬ್ಬರ ಕೊಲೆಯಾಗಿದೆ. ಆರೋಪಿಗಳು ಕೆಲಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಆಫೀಸ್‌ಗೆ ಬಂದು ಕೊಲೆ ಮಾಡಿ ಹಿಂಬಾಗಿಲಿನಿಂದ ಪರಾರಿಯಾಗಿದ್ದರು. ಇದರಲ್ಲಿ ಜಿ ನೆಟ್‌ ಕಂಪನಿಯ ಮಾಲೀಕ ಅರುಣ್‌ ಕುಮಾರ್ ಶಾಮೀಲಾಗಿರುವ ಶಂಕೆ ಇದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲೆ ಕುಣಿಗಲ್​ನಲ್ಲಿ ಬಂಧಿಸಲಾಗಿದೆ” ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಅಮೃತಹಳ್ಳಿ ಪೊಲೀಸರನ್ನು ಈ ದಿನ.ಕಾಮ್ ಸಂಪರ್ಕಿಸಿದ್ದು, ಪೊಲೀಸರು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸದೇ, ಕರೆಯನ್ನು ಕಟ್ ಮಾಡಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...