ಬೆಂಗಳೂರು | ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

Date:

  • ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ ಸಾಧ್ಯತೆ
  • ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಪ್ರಯಾಣ

ನಮ್ಮ ಮೆಟ್ರೋ ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.

ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆಯಿದೆ. ಸುರಕ್ಷಾ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಬೈಯಪ್ಪನಹಳ್ಳಿ-ಕೆ.ಆರ್.ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭವಾಗಿದೆ.

“ಬುಧವಾರ ಮೊದಲನೇ ರೈಲು ಪ್ರಾಯೋಗಿಕ ಸಂಚಾರವು ಕೆ.ಆರ್.ಪುರ ಮತ್ತು ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ಸಂಜೆ 6.04 ಗಂಟೆಗೆ ಪ್ರಾರಂಭವಾಗಿ ಮತ್ತೆ ಮರಳಿ ಕೆ.ಆರ್.ಪುರ ನಿಲ್ದಾಣಕ್ಕೆ ತಲುಪಿತು” ಎಂದು ನಮ್ಮ ಮೆಟ್ರೋ ಟ್ವೀಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈಟ್ ಫೀಲ್ಡ್‌ನಿಂದ ಬೈಯಪ್ಪನಹಳ್ಳಿ‌ ಮಾರ್ಗದಲ್ಲಿ ಸಂಚರಿಸುವ ಜನ ಕೆ.ಆರ್.ಪುರದಲ್ಲಿ ಇಳಿದು ನಂತರ ಬೇರೆ ಸಾರಿಗೆ ಅವಲಂಬಿಸಬೇಕಿತ್ತು. ಆದರೆ, ಈಗ ಬೈಯಪ್ಪನಹಳ್ಳಿ ಹಾಗೂ ಕೆ.ಆರ್.ಪುರ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಸುಲಭವಾಗಿ ಹಾಗೂ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳೆಸಬಹುದು. 

ಈ ಸುದ್ದಿ ಓದಿದ್ದೀರಾ? ಇಬ್ಬರು ಕಳ್ಳರಿಂದ 18 ಮೊಬೈಲ್, 11 ದ್ವಿಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು

ಬೈಯಪ್ಪನಹಳ್ಳಿ-ಕೆ.ಆರ್‌.ಪುರ ಮೆಟ್ರೋ 2.1 ಕಿ.ಮೀ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ 1.9 ಕಿ.ಮೀ ಮೆಟ್ರೋ ಕಾಮಗಾರಿ ಬಾಕಿ ಇದೆ. ಇವೆರಡೂ ಪೂರ್ಣಗೊಂಡ ಬಳಿಕ ಚಲ್ಲಘಟ್ಟ-ವೈಟ್‌ಫೀಲ್ಡ್‌ವರೆಗಿನ 43.5 ಕಿ.ಮೀ ನೇರಳೆ ಮಾರ್ಗ ಪೂರ್ಣವಾದಂತಾಗಲಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...