ಬೆಂಗಳೂರು | ₹50.70 ಕೋಟಿ ವೆಚ್ಚದಲ್ಲಿ ಆರು ಜಂಕ್ಷನ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿದ ಸರ್ಕಾರ

Date:

  • ₹150 ಕೋಟಿ ವೆಚ್ಚದಲ್ಲಿ 75 ಜಂಕ್ಷನ್‌ ಅಭಿವೃದ್ಧಿಪಡಿಸಲು ಮತ್ತೊಂದು ಯೋಜನೆ
  • ದೂರದ ಬಸ್‌ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಮಾಡಲು ಬಿಬಿಎಂಪಿ ಮುಂದು

₹50.70 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಆರು ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ದೊಡ್ಡನೆಕುಂದಿ ಮುಖ್ಯರಸ್ತೆ (₹9.60 ಕೋಟಿ), ಬಾಣಸವಾಡಿ 8ನೇ ಮುಖ್ಯರಸ್ತೆ (₹23.54 ಕೋಟಿ), ಆನಂದ್ ರಾವ್ ವೃತ್ತ (₹2.16 ಕೋಟಿ), ಮೈಸೂರು ರಸ್ತೆಯ ಬಿಎಚ್‌ಇಎಲ್ ಜಂಕ್ಷನ್ (₹3.28 ಕೋಟಿ), ಸುಮನಹಳ್ಳಿ ಜಂಕ್ಷನ್ (₹2.70 ಕೋಟಿ) ಹಾಗೂ ಶಿವಾನಂದ ವೃತ್ತ (₹4.36 ಕೋಟಿ)ವನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿಗೆ ಸರ್ಕಾರದಿಂದ ಅನುಮೋದನೆ ದೊರಕಿದೆ. ಇದಲ್ಲದೇ, ಒಟ್ಟು ₹150 ಕೋಟಿ ವೆಚ್ಚದಲ್ಲಿ 75 ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿ ಇನ್ನೊಂದು ಯೋಜನೆಯನ್ನು ರೂಪಿಸಿದೆ.

ಇವುಗಳಲ್ಲಿ, ಎರಡು ಪ್ರಸ್ತಾವನೆಗಳನ್ನು ಸೆನ್ಸಿಂಗ್ ಲೋಕಲ್ ಮತ್ತು ಯಂಗ್ ಲೀಡರ್ಸ್ ಫಾರ್ ಆಕ್ಟಿವ್ ಸಿಟಿಜನ್ಸ್ ಎಂಬ ಎರಡು ಎನ್‌ಜಿಒಗಳು ಸಲ್ಲಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ವಿನ್ಯಾಸದ ಪ್ರಕಾರ, ಬಾಣಸವಾಡಿಯ 8ನೇ ಮೇನ್ ಅನ್ನು ಕೋರಮಂಗಲ ಕಣಿವೆಯ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ದೊಡ್ಡನೆಕುಂದಿ ಗ್ರಾಮದಲ್ಲಿ 16.4 ಕಿ.ಮೀ ರಸ್ತೆಯನ್ನು ಸಮರ್ಪಕ ಪಾದಚಾರಿ ಸೌಲಭ್ಯ ಕಲ್ಪಿಸುವ ಮೂಲಕ ಸೌಂದರ್ಯೀಕರಿಸಲಾಗುತ್ತದೆ.

ಈ ಪಟ್ಟಿಯಲ್ಲಿ ಮೂರು ಮೇಲ್ಸೇತುವೆಗಳೂ ಸೇರಿದ್ದು, ಈ ಮೇಲ್ಸೇತುವೆಗಳ ಕೆಳಗಿರುವ ಖಾಲಿ ಜಾಗಗಳನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿ ಮುಂದಾಗಿದೆ.

ಶಿವಾನಂದ ವೃತ್ತದ ಮೇಲ್ಸೇತುವೆಯಲ್ಲಿ ಸ್ಕೇಟಿಂಗ್ ರಿಂಕ್ ಮತ್ತು ಬಾಸ್ಕೆಟ್‌ಬಾಲ್ ಅಂಕಣ, ವಿಜಯನಗರ ವೃತ್ತದಲ್ಲಿ ಚನ್ನಪಟ್ಟಣದ ಆಟಿಕೆಗಳ ಪ್ರದರ್ಶನ, ಆನಂದ್ ರಾವ್ ಮೇಲ್ಸೇತುವೆ ಮತ್ತು ಜಂಕ್ಷನ್‌ನಲ್ಲಿ ದೂರದ ಬಸ್‌ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಶಿವಾನಂದ ವೃತ್ತದಲ್ಲಿ ಸ್ಕೇಟಿಂಗ್ ರಿಂಕ್ ಮತ್ತು ಬಾಸ್ಕೆಟ್‌ಬಾಲ್ ಅಂಕಣ ನಿರ್ಮಾಣದ ಯೋಜನೆಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದ್ದು, ಖಾಲಿ ಜಾಗವನ್ನು ಪಾರ್ಕಿಂಗ್ ಮಾಡಲು ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅನಿಲ ಸೋರಿಕೆಯಿಂದ ಗ್ಯಾಸ್ ಸಿಲಿಂಡರ್ ಸ್ಫೋಟ; ವ್ಯಕ್ತಿಗೆ ಗಾಯ

ಈ ಮೇಲ್ಸೇತುವೆಗಳು ಮತ್ತು ಸರ್ಕಲ್‌ಗಳು ಮಾತ್ರವಲ್ಲದೆ, ₹5.06 ಕೋಟಿ ವೆಚ್ಚದಲ್ಲಿ ನಗರದಲ್ಲಿ ಪ್ರಮುಖ ಸ್ಥಳಗಳ ಮಾರ್ಗ, ಹತ್ತಿರದ ಕ್ರೀಡಾ ಮೈದಾನಗಳು ಹಾಗೂ ಪ್ರಮುಖ ಸ್ಥಳಗಳ ಮಹತ್ವವನ್ನು ತಿಳಿಸುವ ಮಾಹಿತಿ ಫಲಕಗಳನ್ನು ಹಾಕಲು ಬಿಬಿಎಂಪಿ ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...