ಬೆಂಗಳೂರು | ಟೆಕ್ಕಿ ಕುಟುಂಬದ ಸಾವಿಗೆ ಗಂಡ-ಹೆಂಡತಿ ಮನಸ್ತಾಪ ಕಾರಣ!

Date:

  • ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಮೃತದೇಹಗಳೊಂದಿಗೆ ಮೂರು ದಿನ ಕಳೆದಿದ್ದ ವಿರಾರ್ಜುನ ವಿಜಯ್

ಟೆಕ್ಕಿ ಕುಟುಂಬದ ನಾಲ್ವರ ಸಾವಿಗೆ ಸಂಬಂಧಿಸಿದಂತೆ, ಗಂಡ-ಹೆಂಡತಿಯ ಮನಸ್ತಾಪ ಸಾವಿಗೆ ಕಾರಣವೆಂದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದುಬಂದಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಮೂಲದ ವೀರಾರ್ಜುನ ವಿಜಯ್ (31), ಹೇಮಾವತಿ (29) ಹಾಗೂ ಇಬ್ಬರು ಮಕ್ಕಳಾದ ಮೋಕ್ಷಾ ಮೇಘನಯನಾ (ಎರಡೂವರೆ ವರ್ಷ), ಸೃಷ್ಟಿ ಸುನಯನಾ(8 ತಿಂಗಳು) ಸಾವನ್ನಪ್ಪಿದವರು.

ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ಗುರುವಾರ ಈ ಘಟನೆ ಬೆಳಕಿಗೆ ಬಂದಿದೆ. ಈ ದಂಪತಿ ಆರು ವರ್ಷದ ಹಿಂದೆ ಮದುವೆ ಮಾಡಿಕೊಂಡಿದ್ದರು. ವೀರಾರ್ಜುನ ವಿಜಯ್ ಕುಟುಂಬ ಕಾಡುಗೋಡಿಯ ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ವಿರಾರ್ಜುನ ವಿಜಯ್ ಕುಂದಲಹಳ್ಳಿ ಬಳಿಯಿರುವ ಕಂಪನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ‌ ಮಾಡುತ್ತಿದ್ದರು. ಈತನು ಷೇರು ವ್ಯವಹಾರದಲ್ಲಿ ತೊಡಗಿದ್ದನು ಎಂಬ ಮಾಹಿತಿ ಇದೆ.

ವೀರಾರ್ಜುನ ವಿಜಯ್ ಜು.31ರಂದು ಪತ್ನಿಯನ್ನು ಕೊಂದು, ನಂತರ ಆಗಸ್ಟ್ 1ರಂದು ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದಿದ್ದನು. ಮೂರು ದಿನಗಳ ಕಾಲ ಶವಗಳೊಂದಿಗೆ ಕಳೆದು ಆ.2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಮನೆಯಿಂದ ದುವಾರ್ಸನೆ ಬಂದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ನೋಡಿದಾಗ ನಾಲ್ವರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಹೇಮಾವತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಬೆಡ್ ರೂಂನ ನೆಲದ ಮೇಲೆ ಬಿದ್ದಿದ್ದವು. ವೀರಾರ್ಜುನ ವಿಜಯ್ ಶವ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಹೇಮಾವತಿಯ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿತ್ತು. ಮೊದಲು ಹೇಮಾವತಿ, ನಂತರ ಮಕ್ಕಳು ಕೊನೆಗೆ ವೀರಾರ್ಜುನ ವಿಜಯ್ ಮೃತಪಟ್ಟಿರುವುದು ಎಫ್ಎಸ್ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯಲ್ಲಿ ಬಹಿರಂಗವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜೈಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ನ ಕೊಲೆ

ನಾಲ್ಕು ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕುಟುಂಬಸ್ಥರಿಗೆ ಮೃತದೇಹಗಳನ್ನ ಶುಕ್ರವಾರ ಹಸ್ತಾಂತರಿಸಲಾಗಿದೆ. ಮೃತದೇಹಗಳನ್ನು ಆಂಧ್ರಪ್ರದೇಶಕ್ಕೆ ಕೊಂಡೊಯ್ಯಲಾಗಿದೆ ಎಂದು ಕಾಡುಗೋಡಿ ಠಾಣಾ ಪೊಲೀಸರು ತಿಳಿಸಿದ್ದಾರೆ‌.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕಾಡುಗೋಡಿ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಮಠಪತಿ, “ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದೇವೆ. ಅವರ ಕುಟುಂಬದ ಸಂಬಂಧಿಕರ ಎಲ್ಲರ ಬಳಿಯೂ ವಿಚಾರಿಸಿದಾಗ ಅವರಿಗೆ ಆರ್ಥಿಕವಾಗಿ ಯಾವುದೇ ಸಮಸ್ಯೆ ಇರಲಿಲ್ಲ ಎಂದು ತಿಳಿಸಿದ್ದಾರೆ. ವೀರಾರ್ಜುನ ವಿಜಯ್ ಎಂಬುವವರು ಅವರ ಆಫೀಸ್‌ನಲ್ಲಿ ಸಹೋದ್ಯೋಗಿಗಳಿಗೆ ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿಕೊಡುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ, ಷೇರು ವ್ಯವಹಾರದಲ್ಲಿ ನಷ್ಟವಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಗಂಡ-ಹೆಂಡತಿಯ ನಡುವೆ ಮನಸ್ತಾಪ ಇತ್ತು ಎಂಬ ಬಗ್ಗೆ ಪ್ರಾಥಮಿಕ ಹಂತದ ತನಿಖೆಯಲ್ಲಿ ತಿಳಿದು ಬಂದಿದೆ. ಇನ್ನೂ ತನಿಖೆ ಮುಂದುವರೆದಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...