ಬೆಂಗಳೂರು | ಈಜಿಪುರ ಮೇಲ್ಸೇತುವೆಯ ಸ್ಥಳ ಇದೀಗ ‘ಸ್ಮಾರಕ’; ನೆಟ್ಟಿಗರ ಅಪಹಾಸ್ಯ

Date:

  • ಈಜಿಪುರ ಮೇಲ್ಸೇತುವೆ ನೀವು ನೋಡಲೇಬೇಕಾದ ಸ್ಮಾರಕವೆಂದು ನೆಟ್ಟಿಗರು ಅಪಹಾಸ್ಯ
  • ಕಳೆದ 6 ವರ್ಷಗಳಿಂದ ನಿಂತಲ್ಲೇ ನಿಂತಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಆರು ವರ್ಷಗಳಿಂದ ನಿರ್ಮಾಣ ಹಂತದಲ್ಲಿಯೇ ಉಳಿದಿರುವ ಈಜಿಪುರ ಮೇಲ್ಸೇತುವೆಯ ಸ್ಥಳವನ್ನು ಗೂಗಲ್ ಲೊಕೇಶನ್​ನಲ್ಲಿ ಹುಡುಕಿದಾಗ ‘ಸ್ಟೋನ್‌ಹೆಂಜ್’ ಎಂದು ತೋರಿಸುತ್ತಿದೆ. ಇದೀಗ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳಾಗುತ್ತಿವೆ.

ಕ್ಯಾಲೆಬ್ ಫ್ರೈಸೆನ್ ಎಂಬ ಟ್ವಿಟ್ಟರ್ ಬಳಕೆದಾರವೊಬ್ಬರು ‘ಸ್ಟೋನ್‌ಹೆಂಜ್’ ಎಂಬ ಟೈಟಲ್​ನಡಿ ಸರ್ಚ್ ಮಾಡಲಾದ ಗೂಗಲ್ ಲ್ಯಾಂಡ್ ಮಾರ್ಕ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅಪೂರ್ಣವಾಗಿರುವ ಈಜಿಪುರ ಮೇಲ್ಸೇತುವೆ ಕೂಡ ಲಿಸ್ಟ್ ಆಗಿದೆ. ಈ ಬಗ್ಗೆ ಹಲವರು ನೀವು ನೋಡಲೇಬೇಕಾದ ಸ್ಮಾರಕವೆಂದು ನೆಟ್ಟಿಗರು ಅಪಹಾಸ್ಯ ಮಾಡಿದ್ದಾರೆ.

ಈಜಿಪುರ ಮೇಲ್ಸೇತುವೆ ಬಗ್ಗೆ ರಾಮ್‌ಕುಮಾರ್ ಎಂಬುವವರು, “ಈ ಮೇಲ್ಸೇತುವೆಯನ್ನು ನನ್ನ ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರಾರಂಭಿಸಲಾಯಿತು. ಈಗ ನನ್ನ ಮಗು 5 ವರ್ಷಕ್ಕೆ ಬೆಳೆದಿದೆ. ಶಾಲೆಗೆ ಹೋಗುತ್ತಿದೆ. ನಾನು ನನ್ನ ಮಗುವಿನೊಂದಿಗೆ ಈ ಸ್ಥಳದಲ್ಲಿ ಹಾದುಹೋಗುವಾಗ ಪ್ರತಿ ಬಾರಿ ಈ ಮೇಲ್ಸೇತುವೆ ಬಗ್ಗೆ ಉತ್ತಮ ಕಥೆಯನ್ನು ಹೇಳುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಈ ಸುದ್ದಿ ಓದಿದ್ದೀರಾ? ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದ ಪೇದೆಗಳು ಅಮಾನತು

“ಮೇಲ್ಸೇತುವೆ ಬಳಿಯ ಸೋನಿ ಸಿಗ್ನಲ್ ಪಕ್ಕದಲ್ಲಿಯೇ ವಾಸಿಸುತ್ತಿದ್ದೇನೆ. ಇಲ್ಲಿ ಉದ್ದನೆಯ ಪಿಲ್ಲರ್‌ಗಳನ್ನು ನಿರ್ಮಿಸಿ ಹಾಗೆಯೇ ಕೈ ಬಿಟ್ಟಿದ್ದಾರೆ. ಈ ಮೇಲ್ಸೇತುವೆ ಈಜಿಪುರ ಮತ್ತು ಮಡಿವಾಳಕ್ಕೆ ಸಂಪರ್ಕ ಕಲ್ಪಿಸಬೇಕಿತ್ತು. ಕಳೆದ 5 ವರ್ಷಗಳಿಂದ ಪ್ರತಿದಿನ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇನ್ನೂ ಯೋಜನೆಯನ್ನು ಪೂರ್ಣಗೊಳಿಸಲು ಯಾವುದೇ ಯೋಜನೆಗಳಿಲ್ಲ. ಇದು ನಿಜವಾಗಿಯೂ ಕರುಣಾಜನಕ” ಎಂದು ಅಶ್ವತ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಚುನಾವಣೆ ಹಿನ್ನಲೆ, ಹಲವು ರಸ್ತೆ, ಹೆದ್ದಾರಿ ಹಾಗೂ ಮೇಲ್ಸೇತುವೆಗಳನ್ನು ಉದ್ಘಾಟನೆ ಮಾಡಲಾಗಿದೆ. ಆದರೆ, ಕಳೆದ 6 ವರ್ಷಗಳಿಂದ ನಿಂತಲ್ಲೇ ನಿಂತಿರುವ ಕಾಮಗಾರಿ ಬಗ್ಗೆ ಸರ್ಕಾರ ಇನ್ನೂ ಗಮನ ಹರಿಸುತ್ತಿಲ್ಲ, ಈ ಬಗ್ಗೆ ಹಲವು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ‘ಸ್ಟೋನ್‌ಹೆಂಜ್’ನಲ್ಲಿ ಈಜಿಪುರ ಮೇಲ್ಸೇತುವೆಯನ್ನು ಗೂಗಲ್​ನಿಂದ ತೆಗೆದು ಹಾಕಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...