ಬೆಂಗಳೂರು | ಮಾರುಕಟ್ಟೆಯಲ್ಲಿ ಮತ್ತೆ ಏರಿಕೆ ಕಂಡ ಟೊಮ್ಯಾಟೊ ದರ : ಕೆಜಿಗೆ 120-150 ರೂಪಾಯಿ

Date:

  • ಟೊಮ್ಯಾಟೊ ಬೆಲೆ ಏರಿಕೆ ಜತೆಗೆ ಕ್ಯಾರೆಟ್‌, ಬೀನ್ಸ್‌ ದರ ದುಪ್ಪಟ್ಟು
  • ಹಾಪ್‌ಕಾಮ್ಸ್‌ನಲ್ಲಿ ಮಾರುಕಟ್ಟೆಗಿಂತ ಕೆಜಿಗೆ ₹5​-10 ದರ ವ್ಯತ್ಯಾಸ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಅದರಲ್ಲೂ ಟೊಮ್ಯಾಟೊ ದರ ಕೆಜಿಗೆ ₹120-150 ಏರಿಕೆಯಾಗಿದೆ. ಇದೀಗ ಬೀನ್ಸ್‌, ಕ್ಯಾರೆಟ್‌ ದರ ಕೂಡ ನಗರದ ಮಾರುಕಟ್ಟೆಗಳಲ್ಲಿ ₹100ರ ಗಡಿ ದಾಟಿವೆ. ಗ್ರಾಹಕರು ಬೆಲೆ ಏರಿಕೆಯಿಂದ ಅಕ್ಷರಶಃ ಕಂಗಾಲಾಗಿದ್ದಾರೆ.

ಹವಾಮಾನ ವೈಪರೀತ್ಯ, ಅಕಾಲಿಕ ಮಳೆ, ರೋಗ ಸೇರಿದಂತೆ ಹಲವಾರು ಕಾರಣಗಳಿಂದ ಈ ಬಾರಿ ಟೊಮ್ಯಾಟೊ ದರದಲ್ಲಿ ಏರಿಕೆ ಕಂಡಿದೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದ್ದು, ಸದ್ಯಕ್ಕೆ ಈ ಬೆಲೆ ಇಳಿಯುವ ಸಾಧ್ಯತೆ ಕಡಿಮೆ ಎನ್ನುತ್ತಿದ್ದಾರೆ ವ್ಯಾಪಾರಿಗಳು.

ಕೆ.ಆರ್‌.ಮಾರುಕಟ್ಟೆಯಲ್ಲಿ ಸಾಧಾರಣ 24 ಕೆಜಿ ಬಾಕ್ಸ್‌ ಟೊಮ್ಯಾಟೊ ಬೆಲೆ ₹1800ಗೆ ಮಾರಾಟವಾಗಿದೆ. ಕ್ಯಾರೆಟ್‌ ಬೆಲೆ ಏರುಗತಿಗೆ ಬಂದಿದೆ. ಕೆಜಿಗೆ ₹100-110 ನಂತೆ ಮಾರಾಟವಾಗುತ್ತಿದೆ. ಹಾಪ್‌ಕಾಮ್ಸ್‌ನಲ್ಲಿ ಮಾರುಕಟ್ಟೆಗಿಂತ ₹5​-10 ದರ ವ್ಯತ್ಯಾಸವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಲೆ ಏರಿಕೆಯಿಂದ ಒಂದು ಕೆಜಿ ತರಕಾರಿ ಕೊಳ್ಳುವ ಬದಲಾಗಿ ಅರ್ಧ-ಕಾಲು ಕೆಜಿ ಖರೀದಿ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಹಕರು ಬೇಸರ ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆ ಕೊಲೆ ಮಾಡಿ ತಿಂಗಳು ಕಾಲ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಟೊಮ್ಯಾಟೊ ಬೆಲೆ ₹109-121ಕ್ಕೆ ಏರಿಕೆಯಾಗಿದೆ. ಟೊಮ್ಯಾಟೊ(ನಾಟಿ) ₹125, ಟೊಮ್ಯಾಟೊ(ಜಾಮುನ್‌) ₹120, ಬೀನ್ಸ್‌ ₹120, ಬೀನ್ಸ್‌ಕಾಳು ₹110, ಕ್ಯಾರೆಟ್‌ ₹110, ಹಸಿ ಮೆಣಸಿನಕಾಯಿ ₹170, ಹಸಿರು ಬಟಾಣಿ ₹190, ಈರುಳ್ಳಿ‌ ದರ ₹59- 65, ಬಿಟ್ರೋಟ್ ₹52-57, ಆಲೂಗಡ್ಡೆ ₹37-41, ಬೇಬಿ ಕಾರ್ನ್ ₹64-71ವರೆಗೂ ಏರಿಕೆ ಕಂಡಿದೆ.

ದಪ್ಪ‌ ಮೆಣಸಿನ‌ಕಾಯಿ ₹55-61, ಹುರುಳಿಕಾಯಿ ₹55-61, ಹೂ ಕೂಸು ₹31-34, ನುಗ್ಗೆಕಾಯಿ ₹115-127 ಏರಿಕೆಯಾಗಿದೆ. ದಪ್ಪ ಬದನೆಕಾಯಿ‌ ₹32-36, ಬೆಳ್ಳುಳ್ಳಿ ₹44-48, ಶುಂಠಿ ₹81-89, ಬೆಂಡೆಕಾಯಿ ₹44-48, ಮೂಲಂಗಿ ₹36-39 ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...