ದೇಶದಲ್ಲೇ ಅಗ್ರಸ್ಥಾನ ಪಡೆದ ಬೆಂಗಳೂರು: ಕಳೆದ ವರ್ಷ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ದಾಖಲು

Date:

ಆ್ಯಸಿಡ್ ದಾಳಿ ಹಿಂಸಾತ್ಮಕ ಆಕ್ರಮಣದ ಒಂದು ರೂಪವಾಗಿದೆ. ಸಾಮಾನ್ಯವಾಗಿ ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣಗಳು ಕಂಡುಬಂದಿವೆ. ಇದೀಗ, ರಾಜ್ಯ ರಾಜಧಾನಿ ಬೆಂಗಳೂರಿನ ಜನರನ್ನು ಬೆಚ್ಚಿಬೀಳಿಸುವ ಆಘಾತಕಾರಿ ವಿಷಯವೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ) ವರದಿ ಬಿಡುಗಡೆ ಮಾಡಿದ್ದು, 19 ಮೆಟ್ರೋಪಾಲಿಟನ್ ನಗರಗಳ ಪೈಕಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಆ್ಯಸಿಡ್ ದಾಳಿ ನಡೆದಿವೆ ಎಂದು ಹೇಳಿದೆ.

ಎನ್‌ಸಿಆರ್‌ಬಿ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ”ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಕಳೆದ ವರ್ಷ(2022) ಬೆಂಗಳೂರಿನಲ್ಲಿ ಎಂಟು ಮಹಿಳೆಯರು ಆ್ಯಸಿಡ್ ದಾಳಿಗೆ ಒಳಗಾಗಿದ್ದಾರೆ. ಇದರಿಂದ ಒಟ್ಟಾರೆ, ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ಮೂವರು ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿ ಯತ್ನ ನಡೆದಿದೆ ಮತ್ತು ಐದು ಮಹಿಳೆಯರ ಮೇಲೆ ಆ್ಯಸಿಡ್‌ ಹಾಕಲಾಗಿದೆ” ಎಂದು ತಿಳಿಸಿದೆ.

”ಹೊಸದಿಲ್ಲಿಯಲ್ಲಿ ಏಳು ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿ ನಡೆದಿದ್ದು, ರಾಷ್ಟ್ರ ರಾಜಧಾನಿಯು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಐದು ಆ್ಯಸಿಡ್‌ ಪ್ರಕರಣಗಳು ದಾಖಲಾಗಿರುವ ಅಹಮದಾಬಾದ್‌ ಮೂರನೇ ಸ್ಥಾನದಲ್ಲಿದೆ. ಹೈದರಾಬಾದ್‌ ಮತ್ತು ಅಹಮದಾಬಾದ್‌ ನಗರದಲ್ಲಿ ತಲಾ ಎರಡು ಆ್ಯಸಿಡ್‌ ದಾಳಿ ಯತ್ನ ಪ್ರಕರಣಗಳು ನಡೆದಿವೆ” ಎಂದು ಎನ್‌ಸಿಆರ್‌ಬಿ ವಿಶ್ಲೇಷಣೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಾರ್ಟ್‌ಮೆಂಟ್‌ನಿಂದ ಆಯತಪ್ಪಿ ಬಿದ್ದು ನವವಿವಾಹಿತೆ ಸಾವು

2022ರಲ್ಲಿ ಯುವತಿ ಮೇಲೆ ನಡೆದ ಆ್ಯಸಿಡ್‌ ದಾಳಿ

2022ರ ಏಪ್ರಿಲ್‌ನಲ್ಲಿ ನಡೆದ ಆ್ಯಸಿಡ್‌ ದಾಳಿ ಪ್ರಕರಣವೊಂದು ಇಡೀ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು.

ಸುಂಕದಕಟ್ಟೆಯಲ್ಲಿ 24 ವರ್ಷದ ಎಂ.ಕಾಂ ಪದವೀಧರೆ ಮೇಲೆ ಆ್ಯಸಿಡ್‌ ದಾಳಿ ನಡೆದಿತ್ತು. ಈ ಪ್ರಕರಣದ ಆರೋಪಿ ನಾಗೇಶ್‌ ಬಾಬು. ಆರೋಪಿ ಸಂತ್ರಸ್ತ ಯುವತಿಯನ್ನು ಹಲವು ವರ್ಷಗಳಿಂದ ಹಿಂಬಾಲಿಸುತ್ತಿದ್ದನು. ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಯುವತಿಯನ್ನು ಪೀಡಿಸುತ್ತಿದ್ದನು. ಯುವತಿಯು ಆತನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆರೋಪಿಯು ಆ್ಯಸಿಡ್‌ ಎರಚಿದ್ದನು.

ಬಳಿಕ ಆರೋಪಿ ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮಕ್ಕೆ ಹೋಗಿ ತಲೆಮರೆಸಿಕೊಂಡಿದ್ದನು. ಈ ವ್ಯಕ್ತಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ಸ್ವಾಮಿ ವೇಷದಲ್ಲಿದ್ದಾಗ ಪೊಲೀಸರು ಬಂಧಿಸಿದ್ದರು.

2023ರ ಜೂನ್‌ನಲ್ಲಿ ಸಂತ್ರಸ್ತ ಯುವತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಅವರ ಸೆಕ್ರೆಟರಿಯೇಟ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು.

ಇದೇ ರೀತಿಯ ಮತ್ತೊಂದು ಪ್ರಕರಣವು ಜೂನ್ 10, 2022 ರಂದು ವರದಿಯಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಸ್ನೇಹಿತೆಯ ಮುಖದ ಮೇಲೆ ಆ್ಯಸಿಡ್‌ ಎರಚಿದ್ದನು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...