ಬೆಂಗಳೂರು | ಸೇಡು ತೀರಿಸಿಕೊಳ್ಳಲು ಪತಿ ಮೊಬೈಲ್‌ನಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಿದ ಪತ್ನಿ: ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಪತಿ ಮೇಲೆ ಸೇಡು ತೀರಿಸಿಕೊಳ್ಳಲು ಪತ್ನಿಯೊಬ್ಬರು ಪೊಲೀಸರಿಗೆ ಮತ್ತು ತನಿಖಾ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸದ್ಯ ಈಕೆಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾರಾಣಿ (36) ಬಂಧಿತ ಮಹಿಳೆ. ಇವರು ಮೂಲತಃ ಮಹಾರಾಷ್ಟ್ರದ ಸಾಂಗ್ಲಿಯವರು. ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬನ್ನಿಹಟ್ಟಿಯ ಕಿರಣ್ ಎಂಬುವವರನ್ನು ಕಳೆದ 13 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಬೆಂಗಳೂರಿನ ನೇಕಾರ್ ಕಂಪನಿಯೊಂದರಲ್ಲಿ ಮ್ಯಾನೇಜರ್‌ ಆಗಿ ಕಿರಣ್ ಕಳೆದ ಒಂದೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆ, ದಂಪತಿ ಬೆಂಗಳೂರಿನ ಆನೇಕಲ್‌ನ ಮಾರುತಿ ಬಡಾವಣೆಯಲ್ಲಿ ವಾಸವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ಕಳೆದ 6 ತಿಂಗಳ ಹಿಂದೆ ಉದ್ಯೋಗ ಹುಡುಕುವ ‘ಅಪ್ನಾ’ ಆ್ಯಪ್‌ ಮೂಲಕ ವಿದ್ಯಾರಾಣಿ ಅವರಿಗೆ ಬಿಹಾರ ಮೂಲದ ರಾಮ್‌ ಪ್ರಸಾದ್ (38) ಎಂಬುವರ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು‌. ಇವರಿಬ್ಬರೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಕ್ರಮೇಣ ಇವರ ಸಂಪರ್ಕ ಪ್ರೀತಿಗೆ ತಿರುಗಿದೆ.

ಈ ಬಗ್ಗೆ ವಿದ್ಯಾರಾಣಿ ಪತಿ ಕಿರಣ್‌ಗೆ ತಿಳಿದು ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಒಂದು ದಿನ ಕೋಪಗೊಂಡ ಪತಿ ವಿದ್ಯಾರಾಣಿ ಮೊಬೈಲ್‌ ಒಡೆದುಹಾಕಿದ್ದಾರೆ.

ಇದರಿಂದ ಪತಿ ಮೇಲೆ ಸೇಡು ತೀರಿಸಿಕೊಳ್ಳಲು ವಿದ್ಯಾರಾಣಿ, ಮತ್ತೊಂದು ಮೊಬೈಲ್‌ ಫೋನ್‌ ಖರೀದಿಸಿ ಸ್ನೇಹಿತ ರಾಮಪ್ರಸಾದ್‌ ಅವರೊಂದಿಗೆ ಸಂಪರ್ಕ ಬೆಳೆಸಿದ್ದರು.

ಕಿರಣ್‌ನನ್ನು ಪೊಲೀಸ್‌ ಪ್ರಕರಣದಲ್ಲಿ ಸಿಲುಕಿಸಲು ರಾಮಪ್ರಸಾದ್‌ ಸಂಚು ರೂಪಿಸಿ, ಹಲವೆಡೆ ಆರ್‌ಡಿಎಕ್ಸ್‌ ಬಾಂಬ್‌ ಹಾಕಲಾಗಿದೆ ಎಂಬ ಬೆದರಿಕೆ ಸಂದೇಶವನ್ನು ವಿದ್ಯಾರಾಣಿಗೆ ಕಳುಹಿಸಿದ್ದನು. ವಿದ್ಯಾರಾಣಿ ತನ್ನ ಪತಿ ಮೊಬೈಲ್‌ನಿಂದ ಪೊಲೀಸರಿಗೆ ಮತ್ತು ಕೇಂದ್ರ ತನಿಖಾ ತಂಡಕ್ಕೆ ಬಾಂಬ್‌ ಹಾಕುವ ಸಂದೇಶ ರವಾನಿಸಿದ್ದಳು.

ಈ ಸುದ್ದಿ ಓದಿದ್ದೀರಾ? ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಈ ಘಟನೆ ನಡೆದ ದಿನ, ಡಿಸೆಂಬರ್ 1ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಹೀಗಾಗಿ, ಈ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದ, ಪೊಲೀಸರು ನಂಬರ್‌ ಮತ್ತು ಐಪಿ ಆಡ್ರಸ್‌ ಆಧರಿಸಿ ಆನೇಕಲ್‌ನ ಮನೆಗೆ ಬಂದು ದಂಪತಿಯನ್ನು ವಶಕ್ಕೆ ಪಡೆದು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ, ವಿದ್ಯಾರಾಣಿ ತನ್ನ ಪತಿಯ ಮೊಬೈಲ್‌ನಿಂದ ತನಿಖಾ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವುದು ಬಯಲಾಗಿದೆ. ಸದ್ಯ ಆರೋಪಿ ವಿದ್ಯಾರಾಣಿಯನ್ನು ಬಂಧಿಸಿರುವ ಪೊಲೀಸರು, ಬಿಹಾರ ಮೂಲದ ರಾಮಪ್ರಸಾದ್‌ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...