ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

Date:

  • ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 ‘ನಮ್ಮ ಕ್ಲಿನಿಕ್’
  • ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರಿಂದ ರೋಗಿಗಳ ಆರೈಕೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 438 ‘ನಮ್ಮ ಕ್ಲಿನಿಕ್’ ತೆರೆಯಲು ಹಿಂದಿನ ಬಿಜೆಪಿ ಸರ್ಕಾರ ಯೋಜಿಸಿತ್ತು. ಅದರಂತೆಯೇ ಬೆಂಗಳೂರಿನಲ್ಲಿ ಪ್ರಸ್ತುತವಾಗಿ 224 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 19 ಕ್ಲಿನಿಕ್‌ಗಳು ಆರಂಭವಾಗಬೇಕಿದೆ. ಈ ತಿಂಗಳಲ್ಲಿ ಬಾಕಿ ಉಳಿದ ಕ್ಲಿನಿಕ್‌ಗಳನ್ನು ತೆರೆಯಲು ಬಿಬಿಎಂಪಿ ಯೋಜಿಸಿದೆ.

ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಈ ಹಿಂದಿನ ಬಿಜೆಪಿ ಸರ್ಕಾರ ಯೋಜನೆ ರೂಪಿಸಿತ್ತು. ಇದು ದೆಹಲಿಯ ಮೊಹಲ್ಲಾ ಕ್ಲಿನಿಕ್ ಮಾದರಿಯ ಯೋಜನೆಯಾಗಿತ್ತು.

2022ರ ಡಿ. 14ರಂದು ಆಗಿನ ಆರೋಗ್ಯ ಸಚಿವ ಕೆ ಸುಧಾಕರ್ ಅವರು ಎಲ್ಲ 438 ನಮ್ಮ ಕ್ಲಿನಿಕ್‌ಗಳನ್ನು ಜನವರಿ ಅಂತ್ಯದೊಳಗೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಯೊಂದು ನಮ್ಮ ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯ, ಒಬ್ಬರು ನರ್ಸಿಂಗ್ ಸಿಬ್ಬಂದಿ, ಒಬ್ಬ ಲ್ಯಾಬ್ ಟೆಕ್ನಿಷಿಯನ್ ಮತ್ತು ಒಬ್ಬರು ಡಿ-ಗ್ರೂಪ್ ನೌಕರರು ಇರಬೇಕಿತ್ತು. ಆದರೆ, ನಗರದ ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರೇ ರೋಗಿಗಳಿಗೆ ಆರೈಕೆ ಮಾಡುತ್ತಿದ್ದಾರೆ. ವೈದ್ಯರ ಕೊರತೆ ಹೆಚ್ಚಾಗಿದೆ. ಇನ್ನೂ ಕೆಲವು ಕ್ಲಿನಿಕ್‌ಗಳಲ್ಲಿ ವೈದ್ಯರು ದೀರ್ಘ ಅವಧಿ ರಜೆ ತೆಗೆದುಕೊಳ್ಳುತ್ತಿದ್ದಾರೆ.

ಪ್ರಸವಪೂರ್ವ ಆರೈಕೆ, ಹದಿಹರೆಯದವರ ಆರೈಕೆ, ಕುಟುಂಬ ಯೋಜನೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಗಾಯಗಳು, ಎನ್‌ಸಿಡಿಗಳಿಗೆ ತಡೆಗಟ್ಟುವ ಆರೈಕೆ, ಮೌಖಿಕ ಆರೈಕೆ, ಕಣ್ಣಿನ ಆರೈಕೆ, ಇಎನ್‌ಟಿ, ಮಾನಸಿಕ ಆರೋಗ್ಯ, ವೃದ್ಧಾಪ್ಯ ಆರೈಕೆ ಮತ್ತು ಪ್ರಯೋಗಾಲಯ ಸೇವೆಗಳು ಸೇರಿದಂತೆ ಹಲವಾರು ಆರೋಗ್ಯ ರಕ್ಷಣಾ ಪ್ಯಾಕೇಜ್‌ಗಳನ್ನು ಈ ಕ್ಲಿನಿಕ್‌ನಲ್ಲಿ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿತ್ತು. ಜೊತೆಗೆ, ಟೆಲಿ-ಕನ್ಸಲ್ಟೇಶನ್, ಯೋಗ ಮತ್ತು ರೆಫರಲ್ ಸೇವೆಗಳಂತಹ ಕ್ಷೇಮ ಚಟುವಟಿಕೆಗಳು ಸಹ ಚಿಕಿತ್ಸಾಲಯಗಳ ಮೂಲಕ ಲಭ್ಯವಾಗಬೇಕಿತ್ತು. ಆದರೆ, ಇದರಲ್ಲಿ ಹಲವಾರು ಚಿಕಿತ್ಸೆಗಳು ಜನರಿಗೆ ತಲುಪುತ್ತಿಲ್ಲ ಎಂಬುದು ಅನೇಕರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

“ನಗರದಲ್ಲಿ 224 ನಮ್ಮ ಕ್ಲಿನಿಕ್‌ಗಳಿದ್ದು ಇನ್ನೂ 19 ಕ್ಲಿನಿಕ್‌ಗಳು ಆರಂಭವಾಗಬೇಕಿದೆ. ವೆಬ್‌ಸೈಟ್‌ನಲ್ಲಿ 109 ಕ್ಲಿನಿಕ್‌ಗಳ ಮಾಹಿತಿಯನ್ನು ಅಪ್‌ಡೇಟ್ ಮಾಡಲಾಗಿದ್ದು, ಬಾಕಿ ಕ್ಲಿನಿಕ್‌ಗಳ ಪಟ್ಟಿಯನ್ನು ಕೂಡಲೇ ಅಪ್‌ಡೇಟ್ ಮಾಡಲಾಗುವುದು. ಉಳಿದ ಕ್ಲಿನಿಕ್‌ಗಳ ನಿರ್ಮಾಣ ಕಾರ್ಯ ವಿಳಂಬವಾಗಿದೆ. ಶೀಘ್ರವೇ ಅವುಗಳನ್ನು ಆರಂಭಿಸಲು ಸ್ಥಳಗಳನ್ನು ಅಂತಿಮಗೊಳಿಸಲಾಗುವುದು” ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ತ್ರೀಲೋಕ್ ಚಂದ್ರ ಹೇಳಿದರು.

“ಈಗಾಗಲೇ ಅಸ್ತಿತ್ವದಲ್ಲಿರುವ ಕ್ಲಿನಿಕ್‌ಗಳಲ್ಲಿ ನಿಯಮಿತ ವೈದ್ಯರಿದ್ದಾರೆ. 50 ಕ್ಲಿನಿಕ್‌ಗಳಿಗೆ ಮಾತ್ರ ವೈದ್ಯಕೀಯ ಕಾಲೇಜುಗಳಿಂದ ಸ್ನಾತಕೋತ್ತರ ಪದವೀಧರರನ್ನು ನೇಮಿಸಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...