ಬೆಂಗಳೂರು | ಮಹಿಳೆ ಮೇಲೆ ಆಟೋ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

Date:

ರೈಡ್ ಹೇಲಿಂಗ್ ಆ್ಯಪ್ ಮೂಲಕ ಬುಕ್ ಮಾಡಿದ್ದ ‘ಆಟೋ ರೈಡ್’ಅನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆಯೊಬ್ಬರ ಮೇಲೆ ಓಲಾ ಆಟೋ ಚಾಲಕನೊಬ್ಬ ಹಲ್ಲೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಆಟೋ ಚಾಲಕ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಟೋ ಚಾಲಕ ಮತ್ತು ಮಹಿಳೆಯ ನಡುವಿ ವಾಗ್ವಾದದ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ಕಪಾಳಕ್ಕೆ ಹೊಡೆದಿರುವ ಚಾಲಕ, ಆಕೆಯ ಮೊಬೈಲ್‌ಅನ್ನು ಕಸಿದುಕೊಳ್ಳಲು ಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆರೋಪಿ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ, ಆಟೋ ಚಾಲಕ ಮಹಿಳೆಯ ವಿರುದ್ಧ ಕಿರುಚಾಡುವುದು ಕಂಡುಬಂದಿದೆ. ಆಕೆ ಯಾಕೆ ಕೂಗಾಡುತ್ತಿದ್ದಾರಾ ಎಂದು ಪ್ರಶ್ನಿಸಿದಾಗ, ‘ತೇರಾ ಬಾಪ್ ದೇತಾ ಹೈ ಕ್ಯಾ ಗ್ಯಾಸ್ ಕೆ ಪೈಸೆ?’ (ನಿಮ್ಮ ತಂದೆ ನನಗೆ ಇಂಧನಕ್ಕೆ ಹಣ ಕೊಡುತ್ತಾರೆ?) ಎಂದು ಆಟೋ ಚಾಲಕ ನಿಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಡಿಯೋವನ್ನು ಮಹಿಳೆಯು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನಿನ್ನೆ ಬೆಂಗಳೂರಿನಲ್ಲಿ, ನನ್ನ ಸ್ನೇಹಿತ ಮತ್ತು ನಾನು ಪೀಕ್ ಅವರ್‌ನಿಂದಾಗಿ ಓಲಾದಲ್ಲಿ ಎರಡು ಆಟೋಗಳನ್ನು ಬುಕ್ ಮಾಡಿದ್ದೆವು. ಒಂದು ಆಟೋ ಮೊದಲು ಬಂದ ಬಳಿಕ, ಮತ್ತೊಂದು ಆಟೋವನ್ನು ನಾವು ರದ್ದುಗೊಳಿಸಿದೆವು. ನಂತರ ಬಂದ ಇನ್ನೊಬ್ಬ ಆಟೋ ಚಾಲಕ ಕೋಪದಿಂದ ನಮ್ಮನ್ನು ಹಿಂಬಾಲಿಸಿದನು. ಪರಿಸ್ಥಿತಿ ಬಗ್ಗೆ ವಿವರಿಸಿದರೂ ಆತ ಕೂಗಾಡಲು ಆರಂಭಿಸಿದ. ಅವಾಚ್ಯವಾಗಿ ನಿಂದಿಸಿ, ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ” ಎಂದು ಬರೆದಿದ್ದಾರೆ.

ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಂಚಾರ ಮತ್ತು ರಸ್ತೆ ಸುರಕ್ಷತಾ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, “ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ಇಂತಹ ಕೃತ್ಯಗಳು ಆಟೋ ಚಾಲಕರ ಸಮುದಾಯಕ್ಕೆ ಕೆಟ್ಟ ಹೆಸರನ್ನು ತರುತ್ತವೆ. ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದಿದ್ದಾರೆ.

ಆರೋಪಿ ಆಟೋ ಚಾಲಕನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಭಾರತದಲ್ಲಿ ನಿಮ್ಮ ವ್ಯವಹಾರ ರದ್ದು ಮಾಡುತ್ತೇವೆ: ವಿಕಿಪೀಡಿಯಗೆ ಹೈಕೋರ್ಟ್‌ ಎಚ್ಚರಿಕೆ

ಪೀಕ್ ಅವರ್‌ನ ಕಾರಣ ಓಲಾದಲ್ಲಿ ತಾನು ಮತ್ತು ಅವಳ ಸ್ನೇಹಿತ ಆರಂಭದಲ್ಲಿ ಎರಡು ಆಟೋಗಳನ್ನು ಬುಕ್ ಮಾಡಿದ್ದೇವೆ ಮತ್ತು ಅವಳು ಬುಕ್ ಮಾಡಿದ ಆಟೋ ಮೊದಲು ಬಂದಾಗ ತನ್ನ ಸ್ನೇಹಿತನು ಬುಕ್ ಮಾಡಿದ ಒಂದನ್ನು ರದ್ದುಗೊಳಿಸಿದೆ ಎಂದು ಮಹಿಳೆ ಹೇಳಿದರು, ನಂತರ ರದ್ದುಪಡಿಸಿದ ಕ್ಯಾಬ್‌ನಿಂದ ಚಾಲಕನು ಹಿಂಬಾಲಿಸಿ ಅವರನ್ನು ನಿಂದಿಸಿದನು.

ಮಹಿಳೆಯ ಪೋಸ್ಟ್‌ಗೆ ಓಲಾ ಪ್ರತಿಕ್ರಿಯಿಸಿದ್ದು, ‘ಘಟನೆಯು ಆತಂಕಕಾರಿಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...