ಬೆಂಗಳೂರು | 20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು; ಕೆಲಸದಾಕೆ ಬಂಧನ

Date:

₹20 ಲಕ್ಷ ಮೌಲ್ಯದ 374 ಗ್ರಾಂ ಚಿನ್ನಾಭರಣ ಕದ್ದಿದ್ದ ಮನೆಗೆಲಸ ಮಾಡುವ ಮಹಿಳೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಮ್ಮ‌ (53) ಬಂಧಿತ ಆರೋಪಿ. ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿರುವ ರಂಜಿತಾ ಎಂಬುವವರ ಮನೆಯಲ್ಲಿ ಲಕ್ಷ್ಮಮ್ಮ ಕಳೆದ 9 ತಿಂಗಳಿನಿಂದ ಮನೆಗೆಲಸ ಮಾಡಿಕೊಂಡಿದ್ದರು.

ರಂಜಿತಾ ತಮ್ಮ ಮಾವನಿಗೆ ಚಿನ್ನದ ಸರ್ ಕೊಡುವ ಸಲುವಾಗಿ ಕರ್ಬೋರ್ಡ್‌ ತೆಗೆದು ನೋಡಿದಾಗ ಚಿನ್ನ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಮನೆ ಕೆಲಸದಾಕೆ ಮೇಲೆ ಅನುಮಾನ ವ್ಯಕ್ತಪಡಿಸಿ ಮನೆ ಮಾಲಕಿ ರಂಜಿತಾ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಜಿತಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಕ್ಷಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಕ್ಷ್ಮಮ್ಮ ಕಳ್ಳತನ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ‘ಹೆಚ್‌ಎಸ್‌ಆರ್‌ಪಿ’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17ರವರೆಗೂ ಅವಕಾಶ; ಸಾರಿಗೆ ಇಲಾಖೆ

ಚಿನ್ನ ಕದ್ದ ಕಳ್ಳರ ಬಂಧನ

ರಾತ್ರೋರಾತ್ರಿ ಶ್ರೀಮಂತರಾಗಬೇಕು ಎಂಬ ದುರಾಸೆಯಿಂದ ಚಿನ್ನ ಕಳ್ಳತನಕ್ಕೆ ಹೊಂಚು ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಸುಹೇಲ್, ಯೂಸೂಫ್, ಮಹಮ್ಮದ್ ರಿಜ್ವಾನ್ ಹಾಗೂ ಸೈಯ್ಯದ್ ಅಜ್ಮತ್ ಬಂಧಿತ ಆರೋಪಿಗಳು. ವೃತ್ತಿಯಲ್ಲಿ‌ ಸುಹೇಲ್ ಕಾರ್ಪೆಂಟರ್​, ಯೂಸೂಫ್ ವೆಲ್ಡಿಂಗ್, ಮಹಮ್ಮದ್ ರಿಜ್ವಾನ್ ಪೇಂಟರ್, ಸೈಯ್ಯದ್ ಅಜ್ಮತ್ ಕಾರ್ ಸೀಟ್ ಕವರ್ ಹೊಲಿಯುವ ಕೆಲಸ ಮಾಡುತ್ತಿದ್ದರು.

ಇವರಿಗೆ ಹೆಚ್ಚಾಗಿ ಆದಾಯ ಬರುತ್ತಿರಲಿಲ್ಲ. ಹೀಗಾಗಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ನಾಲ್ಕು ಜನ ಸೇರಿ ಚಿನ್ನಾಭರಣ ಅಂಗಡಿಯನ್ನು ಕಳ್ಳತನ ಮಾಡಲು ಹೊಂಚು ಹಾಕಿದ್ದರು. ಅದರಂತೆ ಕದಿರೇನಹಳ್ಳಿ ಪಾರ್ಕ್ ರಸ್ತೆಯಲ್ಲಿರುವ ಸೂಜರ್ ಜ್ಯುವೆಲ್ಲರ್ಸ್​​​ಗೆ ಕಳ್ಳತನ ಮಾಡಲು ತೆರಳಿದ್ದರು. ಈ ವೇಳೆ, ಅಂಗಡಿಯಲ್ಲಿ ಚಿನ್ನ ಬದಲು ಬೆಳ್ಳಿ ಇತ್ತು. ಬಳಿಕ 30 ಕೆಜಿ ಬೆಳ್ಳಿಯನ್ನು ಕಳ್ಳತನ ಮಾಡಿದ್ದರು.

ಕಳ್ಳತನವಾದ ಬಗ್ಗೆ ತಿಳಿದ ಮಾಲೀಕ ಪೊಲೀಸರಿಗೆ ದೂರು ನೀಡಿದ್ದನು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...