ಬೆಂಗಳೂರು | ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನದಲ್ಲಿ ಕನ್ನೇರಿ ಸ್ವಾಮಿ; ಕಾರ್ಯಕ್ರಮದಲ್ಲೇ ಬಸವ ಸಂಘಟನೆಗಳ ಪ್ರತಿಭಟನೆ

Date:

ಲಿಂಗಾಯತರನ್ನು ಹಲವು ಬಾರಿ ದೂಷಿಸಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಯನ್ನು ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನಕ್ಕೆ ಆಹ್ವಾನಿಸಿರುವುದನ್ನು ಬಸವ ಸಂಘಟನೆಗಳು ತೀವ್ರವಾಗಿ ವಿರೋಧಿಸಿದೆ. ಸಮಾವೇಶದಲ್ಲೇ ಬಸವ ಸಂಘಟನೆಗಳ 60ಕ್ಕೂ ಅಧಿಕ ಕಾರ್ಯಕರ್ತರು ಪ್ರತಿಭಟಿಸಿ ಕನ್ನೇರಿ ಸ್ವಾಮಿ ವಿರುದ್ಧ ಘೋಷಣೆ ಕೂಗಿದರು.

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನ ನಡೆದಿದ್ದು, ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF) ಕನ್ನೇರಿ ಸ್ವಾಮಿಯನ್ನು ಆಹ್ವಾನಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವಿವಿಧ ಬಸವ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಹಾಗೆಯೇ ಕನ್ನೇರಿ ಸ್ವಾಮಿಯನ್ನು ಬೆಂಗಳೂರಿನಿಂದ ನಿರ್ಬಂಧಿಸಲು ಬೆಂಗಳೂರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದರು.

ಇದನ್ನು ಓದಿದ್ದೀರಾ? ಮಹಿಳೆಯರಿಗೆ ಅವಮಾನ ಮಾಡಿದ ಕನ್ನೇರಿ ಸ್ವಾಮಿ; ಸಮರ್ಥನೆ ಮಾಡಿಕೊಂಡ ಜಗದೀಶ್ ಶೆಟ್ಟರ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನೇರಿ ಸ್ವಾಮಿ ಮಾತನಾಡಲು ಆರಂಭಿಸುತ್ತಿದ್ದಂತೆಯೇ ಬಸವ ಭಕ್ತರು ಪ್ರತಿಭಟಿಸಿದ್ದು 15 ನಿಮಿಷ ಭಾಷಣವೇ ನಿಂತಿತ್ತು. ಅಲ್ಲಲ್ಲಿ ಕೂತಿದ್ದ ಸಣ್ಣ ಸಣ್ಣ ಗುಂಪುಗಳು ಒಮ್ಮೆಲೇ ಎದ್ದು ಪ್ರತಿಭಟಿಸಲು ಆರಂಭಿಸಿದ್ದು ಭದ್ರತಾ ಸಿಬ್ಬಂದಿಗಳು ಅವರನ್ನು ತಡೆದು ಹೊರಗೆ ಕಳುಹಿಸಿದರು. ಇನ್ನು ಬಸವ ಸಂಘಟನೆಗಳು ನಿನ್ನೆಯೇ ಪ್ರತಿಭಟನೆಗೆ ಕರೆ ನೀಡಿದ್ದ ಕಾರಣ ಆಯೋಜಕರು ಮೊದಲೇ ತಯಾರಿ ನಡೆಸಿದ್ದರು ಎನ್ನಲಾಗಿದೆ. ಕನ್ನೇರಿ ಸ್ವಾಮಿ ಸುತ್ತಲೂ ಬೌನ್ಸರ್‌ಗಳಿದ್ದರು.

ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದ ಹನುಮ ಮಾಲಾಧಾರಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕನ್ನೇರಿ ಸ್ವಾಮಿ ಹನುಮ ಮಾಲಾಧಾರಣೆ ಹಾಗೂ ಆರ್‌ಎಸ್‌ಎಸ್ ಪದ್ಧತಿಯನ್ನು ವಿರೋಧಿಸುವ ಬಸವ ತತ್ವದ ಅನುಯಾಯಿಗಳು ಮತ್ತು ಕೆಲ ಲಿಂಗಾಯತ ಮಠಾಧೀಶರುಗಳು “ಬಸವ ತಾಲಿಬಾನಿಗಳು” ಎಂದು ಹೇಳಿದ್ದರು. ಹಾಗೆಯೇ ಅಶ್ಲೀಲ ಪದ ಬಳಕೆ ಮಾಡಿದ್ದರು.

ಈ ಹೇಳಿಕೆಗೆ ಬಸವ ಸಂಘಟನೆಗಳು ಮತ್ತು ಲಿಂಗಾಯತ ಸಮಾಜ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕನ್ನೇರಿ ಸ್ವಾಮಿ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ದೂರುಗಳು ದಾಖಲಾಗಿವೆ. ಇನ್ನು ಈಗಾಗಲೇ ಶಾಂತಿ ಕಾಪಾಡುವ ಉದ್ದೇಶದಿಂದ ವಿಜಯಪುರ ಜಿಲ್ಲಾಡಳಿತವು ಕನ್ನೇರಿಗೆ ಸ್ವಾಮಿಗೆ ಜಿಲ್ಲಾ ಪ್ರವೇಶವನ್ನು ಎರಡು ತಿಂಗಳ ಕಾಲ ನಿಷೇಧಿಸಿದೆ.

ಇದನ್ನು ಓದಿದ್ದೀರಾ? ನಾನು ಎಂದೆಂದಿಗೂ ಬಸವಾದಿ ಶರಣರ ಅನುಯಾಯಿ: ಸಿಎಂ ಸಿದ್ದರಾಮಯ್ಯ

ಇನ್ನು ಈ ಕಾರ್ಯಕ್ರಮದಲ್ಲೇ ತನ್ನ ಈ ಹಿಂದೆ ‘ಬಸವ ತಾಲಿಬಾನಿಗಳು’ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕನ್ನೇರಿ ಸ್ವಾಮಿ, “ನಾನು ಈ ಹಿಂದೆ ಇವರು ತಾಲಿಬಾನಿಗಳು ಅಂತ ಹೇಳಿದ್ದೆ. ಆದರೆ ನನಗೆ ಪುರಾವೆ ನೀಡೋಕೆ ಆಗಿರಲಿಲ್ಲ. ಆದರೆ ಈಗ ಪುರಾವೆ ಸಿಕ್ಕಿತು. ಬಸವಣ್ಣನವರ ಹೆಸರು ಹೇಳಿಕೊಂಡು ಇವರು ಮಾಡುವುದು ನೋಡಿದ್ರೆ ನಾಚಿಕೆ ಆಗ್ತದೆ” ಎಂದು ಹೇಳಿಕೊಂಡಿದ್ದಾರೆ.

ಬಸವ ಸಂಘಟನೆಗಳನ್ನು, ಲಿಂಗಾಯತರನ್ನು ಅವಹೇಳನ ಮಾಡಿರುವ ಕನ್ನೇರಿ ಸ್ವಾಮಿ ಅವರನ್ನೇ ಲಿಂಗಾಯತ ಜಾಗತಿಕ ಉದ್ಯಮ ಸಮ್ಮೇಳನಕ್ಕೆ ಕರೆದಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಈ ವಿಚಾರದಲ್ಲೇ ಆಯೋಜಕರು ಮತ್ತು ಬಸವ ಸಂಘಟನೆಗಳ ನಡುವೆ ಘರ್ಷಣೆ ನಡೆದಿದೆ. “ನಾವು ಕೋಟ್ಯಂತರ ರೂಪಾಯಿ ಹಾಕಿ ಕಾರ್ಯಕ್ರಮ ಮಾಡುತ್ತಿದ್ದೇವೆ. ನಾವೂ ಲಿಂಗಾಯಿತರೇ” ಎಂದು ಆಯೋಜಕರು ಹೇಳಿಕೊಂಡಿದ್ದಾರೆ. “ನೀವು ಲಿಂಗಾಯತರಾಗಿದ್ದರೆ ಬಸವ ದ್ರೋಹಿ ಕನ್ನೇರಿ ಸ್ವಾಮಿಯನ್ನು ಕರೆಸಿದ್ದು ಯಾಕೆ” ಎಂದು ಆಯೋಜಕರನ್ನು ಪ್ರತಿಭಟನಾಕಾರರು ಪ್ರಶ್ನಿಸಿ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...