ಬಿಬಿಎಂಪಿ | ನಾಮಫಲಕದಲ್ಲಿ ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ 20,977 ನೋಟಿಸ್‌ ಜಾರಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಈ ಹಿನ್ನೆಲೆ, ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ ಪಾಲಿಕೆ 20,977 ನೋಟಿಸ್‌ ಜಾರಿ ಮಾಡಿದೆ.

“ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಫೆ.28 ರೊಳಗೆ ಕಾನೂನಿನ ನಿಯಮದಂತೆ ಶೇ.60ರಷ್ಟು ಕನ್ನಡ ಬಳಕೆ ಮಾಡಿರಬೇಕು. ಜ.15ರೊಳಗೆ ಸರ್ವೆ ಕಾರ್ಯ ಮುಗಿಸಿ, ಕನ್ನಡ ಬಳಕೆ ಮಾಡದ ವಾಣಿಜ್ಯ ಅಂಗಡಿಗಳಿಗೆ ನೋಟಿಸ್ ನೀಡಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ಮುಖ್ಯ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ವಲಯಗಳ ಆರೋಗ್ಯಾಧಿಕಾರಿಗಳು ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ನೀಡಲಾಗುತ್ತಿದೆ. ಈಗಾಗಲೇ, ಶೇ 80ರಷ್ಟು ಮಾಲೀಕರಿಗೆ ನೋಟಿಸ್‌ ನೀಡಲಾಗಿದ್ದು, ಈ ವಾರದಲ್ಲಿ ಎಲ್ಲರಿಗೂ ನೋಟಿಸ್‌ ತಲುಪುತ್ತದೆ’’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಸೈಯದ್‌ ಸಿರಾಜುದ್ದೀನ್‌ ಮದನಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜನವರಿ 18ರಂದು ‘ಬಿಲ್ಕಿಸ್ ಬಾನು ಜೊತೆ ನಾವಿದ್ದೇವೆ’ ಕಾರ್ಯಕ್ರಮ

“ನಗರದಲ್ಲಿರುವ ಮುಖ್ಯರಸ್ತೆಗಳಲ್ಲಿ ಶೇ.60ರಷ್ಟು ಕನ್ನಡ ಪದ ಬಳಕೆಯ ನಾಮಫಲಕಗಳನ್ನು ಬಳಸಿಲ್ಲ. ಹೀಗಾಗಿ, ಪಾಲಿಕೆ ವಲಯದ ಎಲ್ಲ ರಸ್ತೆ, ವಸತಿ ಪ್ರದೇಶಗಳಲ್ಲಿರುವ ಮಳಿಗೆ, ವಾಣಿಜ್ಯ ಚಟುವಟಿಕೆಯ ಅಂಗಡಿಗಳಿಗೆ ನೋಟಿಸ್ ನೀಡಲಾಗುತ್ತಿದೆ. 15 ದಿನದಲ್ಲಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸುವಂತೆ ಸೂಚಿಸಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...