ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ನಂದೀಶ್‌ ರೆಡ್ಡಿ ವಿರುದ್ಧ ಬಿಬಿಎಂಪಿ ದೂರು

Date:

  • ರಾಜಧಾನಿಯಲ್ಲಿ ಇನ್ನೂ 700ಕ್ಕೂ ಹೆಚ್ಚು ಕಡೆ ಒತ್ತುವರಿ ತೆರವು ಬಾಕಿ
  • ತೆರವು ಕಾರ್ಯಾಚರಣೆ ವೇಳೆ ಜೆಸಿಬಿ ಮೇಲೆ ಹತ್ತಿ ಬೀಗ ಕಿತ್ತುಕೊಂಡ ಮಾಜಿ ಶಾಸಕ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ದೊಡ್ಡನೆಕ್ಕುಂದಿಯ ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಐಷಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ನಿರ್ಮಾಣ ಮಾಡಲಾಗಿದೆ. ಇದರ ತೆರವು ಕಾರ್ಯಾಚರಣೆಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಅಡ್ಡಿಪಡಿಸಿದ್ದು, ಇವರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದೂರು ದಾಖಲು ಮಾಡಲು ಮುಂದಾಗಿದೆ.

ಸೋಮವಾರ ಬೆಂಗಳೂರಿನ ದೊಡ್ಡನೆಕ್ಕುಂದಿಯ ಫರ್ನ್‌ಸಿಟಿ ಲೇಔಟ್‌ನಲ್ಲಿ ಬಿಬಿಎಂಪಿ ಅಧಿಕಾರಿಗಳು ಗುರುತು ಮಾಡಿದ್ದ ರಾಜಕಾಲುವೆ ಒತ್ತುವರಿ ಸ್ಥಳಕ್ಕೆ ಬುಲ್ಡೋಜರ್ ಸಮೇತ ತೆರಳಿ, ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಒತ್ತುವರಿ ತೆರವು ವೇಳೆ, ಬಿಬಿಎಂಪಿ ಅಧಿಕಾರಿಗಳಿಗೆ ಬಿಜೆಪಿ ನಾಯಕ ನಂದೀಶ್​ ರೆಡ್ಡಿ ತೆರವು ಮಾಡದಂತೆ ತಡೆದಿದ್ದು, ಏರು ಧ್ವನಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದ್ದೀರಿ ಎಂದು ಜೆಸಿಬಿ ಮೇಲೆ ಹತ್ತಿ ಬೀಗ ಕಿತ್ತುಕೊಂಡಿದ್ದಾರೆ. “ಜೆಸಿಬಿ ಮುಂದೆ ಅಡ್ಡ ಕೂರುತ್ತೇನೆ. ತೆರವು ಮಾಡಿ” ಎಂದು ಸವಾಲು ಹಾಕಿದ್ದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಸೋಮವಾರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ಬಿಬಿಎಂಪಿ ಅಧಿಕಾರಿಗಳ ಕೆಲಸಕ್ಕೆ ನಂದೀಶ್ ರೆಡ್ಡಿ ಅವರು ಅಡ್ಡಿಪಡಿಸಿದ್ದಾರೆ. ಅವರ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸ್ಥಳೀಯ ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜಕಾಲುವೆ ಒತ್ತುವರಿ ತೆರವಿಗೆ ಯಾರೇ ಅಡ್ಡಿಪಡಿಸಿದರೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಮಹದೇವಪುರ ವಲಯದ ನಾನಾ ಕಡೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಮಳೆ ಸ್ಥಿತಿಗತಿ ನೋಡಿಕೊಂಡು ಕಾರ್ಯಾಚರಣೆ ನಡೆಸುತ್ತೇವೆ. ಮಳೆಯಲ್ಲಿ ಸರಿಯಾಗಿ ಒತ್ತುವರಿಯಾಗಿರುವ ಜಾಗವನ್ನು ಗುರುತು ಮಾಡಿ ತೆರವು ಮಾಡುವುದು ಕಷ್ಟವಾಗಲಿದೆ” ಎಂದು ಹೇಳಿದರು.

“ರಾಜಕಾಲುವೆ ಪಕ್ಕದಲ್ಲಿಯೇ ತೆರವು ಕಾರ್ಯ ಮಾಡಬೇಕು. ಈ ವೇಳೆ, ಕಟ್ಟಡ ಕೆಡವುವಾಗ ಆ ಸ್ಥಳದಲ್ಲಿ ಬಿದ್ದ ತ್ಯಾಜ್ಯದಿಂದ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತದೆ. ಹಾಗಾಗಿ, ತೆರವು ಕಾರ್ಯ ಸ್ಥಗಿತ ಮಾಡಲಾಗಿದೆ. ಮಳೆಯ ಸ್ಥಿತಿಗತಿ ಪರಿಶೀಲನೆ ಮಾಡಿಕೊಂಡು ಒತ್ತುವರಿ ತೆರವು ಕಾರ್ಯ ಮಾಡುತ್ತೇವೆ” ಎಂದು ತಿಳಿಸಿದರು.

ಕಳೆದ ವರ್ಷ ಸುರಿದ ಭಾರೀ ಮಳೆಗೆ ನಗರದ ರೈನ್‌ ಬೋ ಸಿಟಿ, ಸರ್ಜಾಪುರ ರಸ್ತೆ, ಸಾಯಿ ಲೇಔಟ್, ಮಹದೇವಪುರ ಸೇರಿದಂತೆ ಹಲವೆಡೆ ಪ್ರವಾಹವಾಗಿತ್ತು. ಇದಕ್ಕೆ ರಾಜಕಾಲುವೆ ಒತ್ತುವರಿ ಕಾರಣ ಎಂದು ಬಿಬಿಎಂಪಿ ಹೇಳಿತ್ತು. ಅದರಂತೆಯೇ ನಗರದಲ್ಲಿ 700ಕ್ಕೂ ಹೆಚ್ಚು ಕಡೆ ಒತ್ತುವರಿ ಪ್ರದೇಶಗಳನ್ನು ಗುರುತು ಮಾಡಲಾಗಿತ್ತು. ಕಳೆದ ವರ್ಷವೇ ಒತ್ತುವರಿ ತೆರವು ಕಾರ್ಯಚರಣೆ ಆರಂಭವಾಗಿತ್ತು. ಆದರೆ, ಕೇವಲ ಒಂದು ತಿಂಗಳು ಮಾತ್ರ ನಗರದಲ್ಲಿ ಬುಲ್ಢೋಜರ್ ಸದ್ದು ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಈಜುಕೊಳ ತೆರವು

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಗರದಲ್ಲಿ ಪ್ರತಿ ಒತ್ತುವರಿಗಳನ್ನು ತೆರವು ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದರು. ರಾಜಧಾನಿಯಲ್ಲಿ ಇನ್ನೂ 700ಕ್ಕೂ ಹೆಚ್ಚು ಕಡೆ ಒತ್ತುವರಿ ತೆರವು ಮಾಡುವುದು ಬಾಕಿ ಉಳಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...