ಬಿಬಿಎಂಪಿ ಕಡೆಯಿಂದ ಗುಡ್‌ ನ್ಯೂಸ್‌ | 12,692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

Date:

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಇಂದು (ನ.16) ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಅಂತಿಮ ಆಯ್ಕೆಯಾಗಿರುವ ಪೌರಕಾರ್ಮಿಕರು ಮೀಸಲಾತಿಗೆ ಅನುಗುಣವಾಗಿ ಒದಗಿಸಬೇಕಿರುವ ದಾಖಲೆಗಳು:

(1) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಜಾತಿ ಮೀಸಲಾತಿ ಪ್ರಮಾಣ ಪತ್ರ.
(2) ಕನ್ನಡ ಮಾಧ್ಯಮ ಪ್ರಮಾಣ ಪತ್ರ.
(3) ಗ್ರಾಮೀಣ ಪ್ರಮಾಣ ಪತ್ರ.
(4) ಅಂಗವಿಕಲ ಪ್ರಮಾಣ ಪತ್ರ.
(5) ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ.
(6) ಮಾಜಿ ಸೈನಿಕ ಪ್ರಮಾಣ ಪತ್ರ.
(7) ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರ.
(8) ತೃತೀಯ ಲಿಂಗ ಪ್ರಮಾಣ ಪತ್ರ.
(9) ಇತರೇ (ಅನ್ವಯಿಸುವ ದಾಖಲೆ ಮಾತ್ರ).

ಆಯ್ಕೆಯಾಗಿರುವ ಪೌರಕಾರ್ಮಿಕರು ತಮ್ಮ ಆಯ್ಕೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಲಯ ಮಟ್ಟದಲ್ಲಿ ರಚಿಸಲಾಗಿರುವ ದಾಖಲಾತಿ ಪರಿಶೀಲನಾ ತಂಡಗಳ ಮುಂದೆ ದಿನಾಂಕ: 25.11.2024 ರಿಂದ 30.11.2024ರ ವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಯ ಅನುಗುಣವಾಗಿ ಮೇಲ್ಕಂಡಂತೆ ದಾಖಲೆಗಳನ್ನು ಖುದ್ದು ಹಾಜರುಪಡಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...