ಬಿಬಿಎಂಪಿ ಅಗ್ನಿ ಅವಘಡ | ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರರಾಗಿದ್ದ ಸಿ.ಎಂ ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಪಾಲಿಕೆ ಕೇಂದ್ರ ಕಚೇರಿ ಆವರಣದ ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ಶ್ರದ್ಧಾಂಜಲಿ ಸಮರ್ಪಣಾ ಕಾರ್ಯಕ್ರಮ ನಡೆಯಿತು.

ಶಿವಕುಮಾರ್ ಅವರ ಭಾವಚಿತ್ರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಮರ್ಪಿಸಿದರು.

ಈ ವೇಳೆ ಮಾತನಾಡಿದ ಅವರು, “ಬಿಬಿಎಂಪಿ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇದು ತುಂಬಾ ಶೋಚನೀಯ ವಿಷಯವಾಗಿದ್ದು, ಅತ್ಯಂತ ನೋವು ತರುವಂತಹ ವಿಚಾರವಾಗಿದೆ. ಬೆಂಕಿ ಅವಘಡ ನಡೆದು ಈ ದುರಂತ ಸಂಭವಿಸಿದೆ. ಇದು ಅತ್ಯಂತ ನೋವು ತಂದಂತಹ ವಿಚಾರ. ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಉಳಿದ ಎಂಟು ಸಹೋದ್ಯೋಗಿಗಳು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿಯಲ್ಲಿ ಕೆಲಸ ಮಾಡುವ ಅಧಿಕಾರ ಮತ್ತು ಸಿಬ್ಬಂದಿ ಪ್ರಾಣದ ಬಗ್ಗೆ ಯೋಚನೆ ಮಾಡದೆ, ಸಂದರ್ಭಕ್ಕನುಗುಣವಾಗಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಾರೆ. ಅಗ್ನಿ ಅವಘಡದ ಸಮಯದಲ್ಲಿ ಜಾಸ್ತಿ ಹೊಗೆ ಸೇವನೆಯಾಗಿರುವುದರಿಂದ ಜೀವಕ್ಕೆ ಕುತ್ತು ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಕುಮಾರ್ ರವರ ನಿಧನದ ಹಿನ್ನೆಲೆ ಉಪ ಮುಖ್ಯಮಂತ್ರಿ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದು, ಅದರಂತೆ ಕೂಡಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು” ಎಂದು ಹೇಳಿದರು.

“ಶಿವಕುಮಾರ್ ಅವರನ್ನು ಉಳಿಸಿಕೊಳ್ಳಲು‌ ಸಾಕಷ್ಟು ಪ್ರಯತ್ನ ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲಾ ಅಗಲಿದ್ದಾರೆ. ಶಿವಕುಮಾರ್ ಅಗ್ನಿ ಅವಘಡದ ಸಂದರ್ಭದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಸ್ಥಳದಲ್ಲಿದ್ದ ಅಧಿಕಾರಿ/ಸಿಬ್ಬಂದಿಯನ್ನು ಕಾಪಾಡಲು‌ ಮುಂದಾಗಿ, ಕೊನೆಯದಾಗಿ ಅವರು ಹೊರ ಬಂದಿದ್ದಾರೆ. ಅವರಿದ್ದ ಸ್ಥಾನದ ಜವಾಬ್ದಾರಿಯನ್ನು ಅರಿತು ನಾಯಕನ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ” ಎಂದರು.

ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸದ ನೆರವಿಗಾಗಿ ₹95.5 ಲಕ್ಷ ಮೊತ್ತ ಹಣಕಾಸು ನೆರವು

“ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ದರ್ಜೆಯ ನೌಕರರ ವೇತನದಲ್ಲಿ ಹಣವನ್ನು ಕಟಾವು ಮಾಡಿ ಸುಮಾರು ₹95.5 ಲಕ್ಷ ಹಣವನ್ನು ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಅತಿ ಶೀಘ್ರದಲ್ಲಿ ಚೆಕ್ ಅನ್ನು ಹಸ್ತಾಂತರ ಮಾಡಲಾಗುವುದು” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧ ಸಂಘದ ಅಧ್ಯಕ್ಷ ಅಮೃತ್ ರಾಜ್ ರವರು ತಿಳಿಸಿದರು.

“ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ ದರ್ಜೆ ಶ್ರೇಣಿಯ ಅಧಿಕಾರಿಗಳಿಂದ ₹3,000, ಬಿ ದರ್ಜೆ ಶ್ರೇಣಿಯ ನೌಕರರಿಂದ ₹2,000, ಸಿ ದರ್ಜೆ ಶ್ರೇಣಿಯ ನೌಕರರಿಂದ ₹1,500, ಹಾಗೂ ಡಿ ದರ್ಜೆ ಶ್ರೇಣಿಯ ನೌಕರರಿಂದ ₹1,000 ಮೊತ್ತವನ್ನು ವೇತನದಲ್ಲಿ‌ ಕಟಾವು ಮಾಡಿ ಸುಮಾರು ₹95.5 ಲಕ್ಷ ಹಣವನ್ನು ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಚೆಕ್ ಅನ್ನು ಹಸ್ತಾತರಿಸಲಾಗುವುದು” ಎಂದು ತಿಳಿಸಿದರು.

“ಶಿವಕುಮಾರ್ ರವರ ಸವಿನೆನಪಿಗಾಗಿ ಎಲ್ಲ ರೀತಿಯ ಸೌಲಭ್ಯವುಳ್ಳ 2 ಆಂಬ್ಯುಲೆನ್ಸ್ ಗಳನ್ನು ಬಿಬಿಎಂಪಿ ನೌಕರರ ಸಹಕಾರ ಸಂಘ ಹಾಗೂ ಬಿಬಿಎಂಪಿ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎರಡು ತಿಂಗಳಲ್ಲಿ ಪಾಲಿಕೆಗೆ ಉಚಿತವಾಗಿ ಹಸ್ತಾಂತರಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್‌ ವಿರುದ್ಧ ವಂಚನೆ ಆರೋಪ; ದೂರು ದಾಖಲು

ಈ ವೇಳೆ ವಿಶೇಷ ಆಯುಕ್ತರುಗಳಾದ ಡಾ. ತ್ರಿಲೋಕ್ ಚಂದ್ರ, ಆರ್.ಎಲ್ ದೀಪಕ್, ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರಹ್ಲಾದ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...