ಬಿಬಿಎಂಪಿ | ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ರಸ್ತೆಯಲ್ಲಿ ಕ್ಯೂ ಆರ್ ಕೋಡ್ ಅಳವಡಿಕೆ

Date:

“ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೊದಲ ಬಾರಿಗೆ ಬಿಬಿಎಂಪಿ ದಕ್ಷಿಣ ವಲಯದ ಪ್ರತಿ ರಸ್ತೆಯಲ್ಲಿ ಕ್ಯೂ ಆರ್ ಕೋಡ್ ಅಳವಡಿಸಲಾಗಿದೆ” ಎಂದು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಹೇಳಿದರು.

“ಸಾರ್ವಜನಿಕರು ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಕ್ಯೂ ಆರ್ ಕೋಡ್ ಮುಖಾಂತರ ಪಡೆಯಬಹುದು. ರಸ್ತೆಯಲ್ಲಿ ಗುಂಡಿಗಳಿದ್ದರೆ, ಪಾದಚಾರಿ ಮಾರ್ಗ ಸಮಸ್ಯೆ, ಶಿಥಿಲ ಮರಗಳ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿದ್ದರೆ ಸುಲಭವಾಗಿ ಕ್ಯೂ ಆರ್‌ ಕೋಡ್‌ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಹೇಳಬಹುದು ಹಾಗೂ ಅಧಿಕಾರಿಗಳ ವಿವರವನ್ನು ಪಡೆಯಬಹುದು” ಎಂದರು.

“ಯಾವುದೇ ಅಧಿಕಾರಿಗಳು ವರ್ಗಾವಣೆಗೊಂಡಿದ್ದರೆ ಸಂಬಂಧಪಟ್ಟ ವಿಭಾಗದ ಹೊಸ ಅಧಿಕಾರಿಗಳ ವಿವರ ಪಡೆಯಬಹುದಾದ ವ್ಯವಸ್ಥೆಯನ್ನು ಈ ಕ್ಯೂ ಆರ್‌ ಕೋಡ್ ಹೊಂದಿದೆ “ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ವಾರ್ಡವಾರು ಘನತ್ಯಾಜ್ಯ ನಿರ್ವಹಣೆ ಸರಿಯಾಗಿ ಮಾಡಲಾಗುತ್ತಿದೆ. ಪೌರಕಾರ್ಮಿಕರು ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಹ ತೆರವುಗೊಳಿಸುತ್ತಿದ್ದಾರೆ. ಜೆ.ಪಿನಗರದಲ್ಲಿರುವ ಹೋಟೆಲ್ ರೆಸ್ಟೋರೆಂಟ್‌ಗಳಲ್ಲಿ ವಾಣಿಜ್ಯ ವಹಿವಾಟು ಹೆಚ್ಚಾಗಿದೆ. ಇದರಿಂದ ತ್ಯಾಜ್ಯ ಪ್ರಮಾಣ ಹೆಚ್ಚಾಗಿದೆ. ಈ ಪರಿಣಾಮ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವುದು ಕಂಡುಬರುತ್ತಿದೆ” ಎಂದು ಹೇಳಿದರು.

“ಪಾಲಿಕೆ ವತಿಯಿಂದ ಸುಮಾರು ವರ್ಷದಿಂದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕೆಲ ನಾಗರಿಕರು ಮಾರೆನಹಳ್ಳಿಯ ವಾಡ್೯ ರಸ್ತೆಯ ಸಮಸ್ಯೆ ಬಗ್ಗೆ ತಿಳಿಸಿದ್ದಾರೆ. ಈ ಸಂಬಂಧ ಕೂಡಲೇ ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಬಲ್ಕ್ ಜನರೇಟರ್ ಅಡಿಯಲ್ಲಿ ಬರುವುದರಿಂದ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಅವರೆ ಸಂಗ್ರಹಿಸಿ ತೆರವು ಮಾಡಬೇಕು. ಅದರ ಬದಲಾಗಿ ಬಲ್ಕ್ ಜನರೇಟರ್ ಅಡಿಯಲ್ಲಿ ಗುರುತಿಸಿಕೊಳ್ಳದೆ ವಾಡ್೯ವಾರು ಇರುವ ಘನತ್ಯಾಜ್ಯ ಘಟಕಗಳಿಗೆ ಹಾಗೂ ರಸ್ತೆಯ ಮೇಲೆ ತ್ಯಾಜ್ಯವನ್ನು ಹಾಕುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ತಕ್ಷಣವೇ ಬಲ್ಕ್ ಜನರೇಟರ್ ಅಡಿಯಲ್ಲಿ ಸದರಿ ಹೋಟೆಲ್ ರೆಸ್ಟೋರೆಂಟ್‌ಗಳನ್ನು ತರಬೇಕು” ಎಂದರು.

“ಬಲ್ಕ್ ಜನರೇಟರ್ ಅಡಿಯಲ್ಲಿ ಗುರುತಿಸಿಕೊಳ್ಳದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ನೇರವಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರ ಮೇಲೆ ನೋಟಿಸ್ ನೀಡಿ ದಂಡ ವಿಧಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆ ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ಸ್ಥಳೀಯ ಶಾಸಕ ಸಿ.ಕೆ ರಾಮಮೂರ್ತಿ ಅವರು ಮಾತನಾಡಿ, “ನಾಗರಿಕರ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸಲಾಗುವುದು. ಇನ್ನು ಮುಂದೆ ವಾರ್ಡ್‌ವಾರು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಘನತ್ಯಾಜ್ಯ ಸಮಸ್ಯೆಯನ್ನು ನಿವಾರಿಸಲು ಕಸ ಮುಕ್ತ ಕಾರ್ಯಕ್ರಮ ನಡೆಸಲಾಗುವುದು. ಒಟ್ಟಿನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯ ಮಾದರಿ ಕ್ಷೇತ್ರ ಮಾಡಲು ಎಲ್ಲ ರೀತಿಯಲ್ಲಿ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ಡಾ.‌ ಕೆ.ಜಗದೀಶ್ ನಾಯ್ಕ್, ಪಾಲಿಕೆ, ಬೆಸ್ಕಾಂ, ಜಲಮಂಡಳಿ,‌ ಸಂಚಾರಿ ಪೊಲೀಸ್ ವಿಭಾಗದ ಅಧಿಕಾರಿಗಳು, ಸ್ಥಳೀಯ ನಾಗರಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...