1,344 ಕಿ.ಮೀ ರಸ್ತೆಯ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಹೊರಗುತ್ತಿಗೆ ನೀಡುತ್ತಿರುವ ಬಿಬಿಎಂಪಿ

Date:

  • ಈ ಯೋಜನೆಗೆ ₹20 ಕೋಟಿ ಮೀಸಲಿಟ್ಟ ಬಿಬಿಎಂಪಿ
  • ರಸ್ತೆಗಳ ನಿರ್ವಹಣೆಗೆ ಟಿಪ್ಪರ್‌ ಬಳಸಲು ಟೆಂಡರ್‌ನಲ್ಲಿ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳ ಉದ್ದಕ್ಕೂ ತ್ಯಾಜ್ಯ ಸುರಿಯುವುದು, ಫುಟ್‌ಪಾತ್ ಹದಗೆಟ್ಟಿರುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು ನಿಮ್ಮ ಗಮನಕ್ಕೆ ಬಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಕೂಡಲೇ ದೂರು ನೀಡಿ. ದೂರು ನೀಡಲು ಹಿಂಜರಿಯಬೇಡಿ. ಏಕೆಂದರೆ, ವಾರ್ಷಿಕ ನಿರ್ವಹಣಾ ಒಪ್ಪಂದದ ಅಡಿಯಲ್ಲಿ 1,344 ಕಿ.ಮೀ ರಸ್ತೆಯ ನಿರ್ವಹಣೆಯನ್ನು ಪಾಲಿಕೆ ಖಾಸಗಿ ಸಂಸ್ಥೆಗಳಿಗೆ ಹೊರಗುತ್ತಿಗೆ ನೀಡುತ್ತಿದೆ.

“ಒಟ್ಟು ಉದ್ದದ ಪೈಕಿ 799 ಕಿ.ಮೀ ಪ್ರಮುಖ ರಸ್ತೆಗಳನ್ನು ವಾರ್ಷಿಕ ನಿರ್ವಹಣೆ ಒಪ್ಪಂದ (ಎಎಂಸಿ) ಅಡಿ ತರಲಾಗಿದ್ದು, ಪ್ರತಿ ಕಿಲೋಮೀಟರ್ ನಿರ್ವಹಣೆಗೆ ವರ್ಷಕ್ಕೆ ₹2.3 ಲಕ್ಷ ಪಾವತಿಸಲು ಬಿಬಿಎಂಪಿ ಯೋಜಿಸಿದೆ. ಉಳಿದ 545 ಕಿ.ಮೀ ರಸ್ತೆಗಳು ನಿರ್ಮಾಣ ಹಂತದಲ್ಲಿವೆ ಅಥವಾ ದೋಷ ಹೊಣೆಗಾರಿಕೆ ಅವಧಿಯ (ಡಿಎಲ್‌ಪಿ) ವ್ಯಾಪ್ತಿಯಲ್ಲಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ಷಿಕ ನಿರ್ವಹಣಾ ಒಪ್ಪಂದದಡಿಯಲ್ಲಿ, ರಸ್ತೆಗಳನ್ನು ಕಟ್ಟಡಗಳ ಅವಶೇಷಗಳಿಂದ ಮುಕ್ತ ಮಾಡಬೇಕು. ಚರಂಡಿಗಳು ಸ್ವಚ್ಛವಾಗಿರಬೇಕು. ಫುಟ್‌ಪಾತ್‌ಗಳು ಜನರು ನಡೆಯಲು ಯೋಗ್ಯವಾಗಿವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕಲ್ಲುಗಳು ಹಾಗೂ ರಸ್ತೆ ಬದಿ ಬೆಳೆದ ಹುಲ್ಲುಗಳನ್ನು ತೆರವುಗೊಳಿಸುವ ಜವಾಬ್ದಾರಿಯನ್ನು ಈ ಖಾಸಗಿ ಸಂಸ್ಥೆಯು ಹೊಂದಿದೆ. ಆದರೆ, ರಸ್ತೆಯಲ್ಲಿ ಬಿದ್ದ ಗುಂಡಿಗಳನ್ನು ತುಂಬುವುದು ಒಪ್ಪಂದದ ಭಾಗವಾಗಿಲ್ಲ. ಒಟ್ಟಾರೆ, ಈ ಯೋಜನೆಗೆ ಬಿಬಿಎಂಪಿ ₹20 ಕೋಟಿ ಮೀಸಲಿಟ್ಟಿದೆ. ಈ ಯೋಜನೆಯನ್ನು ಬಿಬಿಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ವಾರ್ಡ್‌ಗಳಲ್ಲಿ ನಡೆಯುವ ಕಾಮಗಾರಿಗಳಿಗಾಗಿ ವಾರ್ಡ್ ಎಂಜಿನಿಯರ್‌ಗಳು ಟ್ರ್ಯಾಕ್ಟರ್‌ ಮತ್ತು ಕೆಲಸಗಾರರನ್ನು ಹೊಂದಿದ್ದಾರೆ. ವಾರ್ಡ್ ಕಾಮಗಾರಿಗೆ ಇರುವ ಟ್ರ್ಯಾಕ್ಟರ್‌ಗಳನ್ನು ಪ್ರಮುಖ ರಸ್ತೆಗಳಿಗೆ ಬಳಸಬಾರದು. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ನಿರ್ವಹಣೆಗೆ ಟಿಪ್ಪರ್ ಲಾರಿಗಳನ್ನು ಬಳಸಲು ಟೆಂಡರ್‌ನಲ್ಲಿ ಸೂಚಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹದೇವಪುರ ಕಾರ್ಯಪಡೆಯ ಸಕ್ರಿಯ ಸದಸ್ಯ ಜಯಕುಮಾರ್ ಮಾತನಾಡಿ, “ಎಎಂಸಿ ಮಾದರಿ ಉತ್ತಮವಾಗಿದ್ದು, ಭವಿಷ್ಯದಲ್ಲಿ ವಾರ್ಡ್ ರಸ್ತೆಗಳು ಸೇರಿದಂತೆ ಎಲ್ಲ ರಸ್ತೆಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಬೇಕು. ರಸ್ತೆಯ ಇಕ್ಕೆಲಗಳಲ್ಲಿ ಹೂಳು ಮತ್ತು ಅವಶೇಷಗಳು ಸಂಗ್ರಹವಾಗುತ್ತಿದ್ದು, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೆಟ್ರೋದಲ್ಲಿ ವೃದ್ಧನ ಸಾವು ಪ್ರಕರಣ; ಆರೋಪ ನಿರಾಕರಿಸಿದ ಬಿಎಂಆರ್‌ಸಿಎಲ್

“ಕಳಪೆ ಅನುಷ್ಠಾನದ ಅಪಾಯವಿದೆ. ಬಿಬಿಎಂಪಿಯು ಪ್ರತಿ ಸ್ಟ್ರೀಟ್‌ನಲ್ಲಿ ಇಂಜಿನಿಯರ್ ಮತ್ತು ರಸ್ತೆ ನಿರ್ವಹಣೆಯ ಉಸ್ತುವಾರಿ ಸಂಸ್ಥೆಯ ಸಂಪರ್ಕ ವಿವರಗಳನ್ನು ಪ್ರದರ್ಶಿಸುವ ಬೋರ್ಡ್‌ಗಳನ್ನು ಹಾಕಬೇಕು. ಆ ಪಟ್ಟಿ ಎಲ್ಲರಿಗೂ ಲಭ್ಯವಾಗುವಂತೆ ಮಾಡಬೇಕು. ಚೆಕ್ ಮತ್ತು ಬ್ಯಾಲೆನ್ಸ್‌ಗಳನ್ನು ಖಾತ್ರಿಪಡಿಸಿಕೊಂಡ ನಂತರ ಬಿಬಿಎಂಪಿಯು ಎಲ್ಲ ರಸ್ತೆಗಳನ್ನು ನಿಯಮಿತವಾಗಿ ನಿರ್ವಹಿಸಲು ಯೋಜನೆಯನ್ನು ರೂಪಿಸಬೇಕು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...